ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನಗೂ ಸಂಪುಟದಲ್ಲಿ ಅವಕಾಶ ಸಿಗಲಿದೆ: ಶಾಸಕ ನೆಹರು ಓಲೇಕಾರ

Last Updated 29 ಸೆಪ್ಟೆಂಬರ್ 2020, 13:56 IST
ಅಕ್ಷರ ಗಾತ್ರ

ಹಾವೇರಿ: ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆಯಾದರೆ ನನಗೂ ಅವಕಾಶ ಸಿಗಲಿದೆ ಎಂದು ಶಾಸಕ ನೆಹರು ಓಲೇಕಾರ ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಪರಿಶಿಷ್ಟ ಜಾತಿಯ ಬಲಗೈ ಸಮಾಜದ ಶಾಸಕ.ಮೂರನೇ ಬಾರಿ ಆಯ್ಕೆ ಆಗಿದ್ದೇನೆ. ಈ ಬಾರಿ ಅವಕಾಶ ಮಾಡಿಕೊಡುತ್ತಾರೆ ಎಂಬ ವಿಶ್ವಾಸವಿದೆ.ಸಂಪುಟದಲ್ಲಿ ಕೆಲಸ‌ ಮಾಡದೇ ಇರುವ ಸಚಿವರು ಇದ್ದಾರೆ. ಅಂಥವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಯಾರನ್ನು ಕೈ ಬಿಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ.ಹೊಸಬರಿಗೆ ಅವಕಾಶ ನೀಡಿದರೆ ಉಳಿದ ಎರಡೂವರೆ ವರ್ಷದಲ್ಲಿ ಸುಸೂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT