ಪಟ್ಟಣದಲ್ಲಿ ಮಂಗಳವಾರ ನಡೆದ ಜನಸಂಕಲ್ಪ ಯಾತ್ರೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆಗೆ ಅವರು ಮಾತನಾಡಿ, ‘ವೇದ ಪುರಾಣಗಳಿಂದ ಇಲ್ಲಿಯವರೆಗೂ ಹಿಂದೂಸ್ತಾನ ಹಿಂದೂಗಳಿಗೆ ಸೇರಿದ್ದು ಎಂದು ಎಲ್ಲರೂ ಹೇಳಿಕೊಂಡೇ ಬಂದಿದ್ದಾರೆ. ನೆಹರೂ ಕೂಡ ಇದೇ ಮಾತು ಹೇಳಿದ್ದಾರೆ. ಆದರೆ, ಕಾಂಗ್ರೆಸ್ಸಿಗರು ನೆಹರೂ ಹೇಳಿಕೆಯನ್ನೂ ಒಪ್ಪಿಕೊಳ್ಳಲು ತಯಾರಿಲ್ಲ. ಅದಕ್ಕಿಂತ ಆಶ್ಚರ್ಯ ತರಿಸಿರುವುದು ಕಾಂಗ್ರೆಸ್ ಪಕ್ಷದ ಮೌನ. ಈ ವಿಚಾರವಾಗಿ ದೇಶದಾದ್ಯಂತ ಆಕ್ರೋಶ ವ್ಯಕ್ತವಾದರೂ ರಾಹುಲ್ ಗಾಂಧಿ, ಸಿದ್ದರಾಮಯ್ಯ ಒಂದು ಶಬ್ದ ಆಡಿಲ್ಲ. ಭಾರತ್ ಜೋಡೊ ನಾಟಕ ಮಾಡಿ, ಈ ರೀತಿ ಹೇಳಿಕೆ ನೀಡಿದ್ದು ಭಾರತ ಒಡೆಯುವ ಕೆಲಸವಲ್ಲವೇ?’ ಎಂದು ಪ್ರಶ್ನಿಸಿದರು.