<p><strong>ಗುತ್ತಲ:</strong> ಇಲ್ಲಿಯ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಮೂರು ತೆಪ್ಪಗಳನ್ನು ಜಪ್ತಿ ಮಾಡಿದ್ದಾರೆ.</p>.<p>ಹಾವನೂರು ಬಳಿಯ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಅಧಿಕಾರಿಗಳು, ಸೆ. 18ರಂದು 10 ಗಂಟೆಗೆ ಕಾರ್ಯಾಚರಣೆ ನಡೆಸಿದ್ದರು.</p>.<p>‘ಹಾವನೂರು ಗ್ರಾಮದ ಚಾಂದಸಾಬ್ ಖಾಜಾಸಾಬ್ ಫಾಟೀನ್ ಹಾಗೂ ಇತರರು ಸೇರಿಕೊಂಡು ಅಕ್ರಮವಾಗಿ ₹ 1.80 ಲಕ್ಷ ಮೌಲ್ಯದ ಮರಳು ತೆಗೆದಿದ್ದರು. ದಾಳಿ ಮಾಡುತ್ತಿದ್ದಂತೆ ಎಲ್ಲರೂ ಸ್ಥಳದಿಂದ ಓಡಿ ಹೋದರು’ ಎಂದು ಭೂ ವಿಜ್ಞಾನಿ ಶಬ್ಬೀರ್ ಅಹ್ಮದ್ ದಿಡಗೂರ ಅವರು ಗುತ್ತಲ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಹಾವೇರಿಯಿಂದ ಶಿಗ್ಗಾವಿ ಹಾಗೂ ಸವಣೂರು ರಸ್ತೆಯಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಅಕ್ರಮ ಮರಳು ಸಾಗಾಣಿಕೆ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಅದೇ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ, ಅಕ್ರಮ ಮರಳು ಸಿಕ್ಕಿದೆ. ಆರೋಪಿಗಳು, ಮರಳು ಕಳ್ಳತನ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡುತ್ತಿದ್ದರೆಂಬುದು ಪರಿಶೀಲನೆಯಿಂದ ಗೊತ್ತಾಗಿದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ಪತ್ತೆ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುತ್ತಲ:</strong> ಇಲ್ಲಿಯ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಮೂರು ತೆಪ್ಪಗಳನ್ನು ಜಪ್ತಿ ಮಾಡಿದ್ದಾರೆ.</p>.<p>ಹಾವನೂರು ಬಳಿಯ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಅಧಿಕಾರಿಗಳು, ಸೆ. 18ರಂದು 10 ಗಂಟೆಗೆ ಕಾರ್ಯಾಚರಣೆ ನಡೆಸಿದ್ದರು.</p>.<p>‘ಹಾವನೂರು ಗ್ರಾಮದ ಚಾಂದಸಾಬ್ ಖಾಜಾಸಾಬ್ ಫಾಟೀನ್ ಹಾಗೂ ಇತರರು ಸೇರಿಕೊಂಡು ಅಕ್ರಮವಾಗಿ ₹ 1.80 ಲಕ್ಷ ಮೌಲ್ಯದ ಮರಳು ತೆಗೆದಿದ್ದರು. ದಾಳಿ ಮಾಡುತ್ತಿದ್ದಂತೆ ಎಲ್ಲರೂ ಸ್ಥಳದಿಂದ ಓಡಿ ಹೋದರು’ ಎಂದು ಭೂ ವಿಜ್ಞಾನಿ ಶಬ್ಬೀರ್ ಅಹ್ಮದ್ ದಿಡಗೂರ ಅವರು ಗುತ್ತಲ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಹಾವೇರಿಯಿಂದ ಶಿಗ್ಗಾವಿ ಹಾಗೂ ಸವಣೂರು ರಸ್ತೆಯಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಅಕ್ರಮ ಮರಳು ಸಾಗಾಣಿಕೆ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಅದೇ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ, ಅಕ್ರಮ ಮರಳು ಸಿಕ್ಕಿದೆ. ಆರೋಪಿಗಳು, ಮರಳು ಕಳ್ಳತನ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡುತ್ತಿದ್ದರೆಂಬುದು ಪರಿಶೀಲನೆಯಿಂದ ಗೊತ್ತಾಗಿದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ಪತ್ತೆ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>