ಹಾವೇರಿ: ‘ರಾಣೆಬೆನ್ನೂರು ತಾಲ್ಲೂಕಿನ ಐರಣಿ, ಹೊಳೆಮಠ, ಮಾಕನೂರು, ಮುದೇನೂರು, ಕೋಟಿಹಾಳ, ಹಳ್ಳೂರು, ಬೇಲೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಅಕ್ರಮ ಮರಳು ಅಡ್ಡೆಗಳು ಅವ್ಯಾಹತವಾಗಿ ನಡೆಯುತ್ತಿವೆ. ಇದನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಗಳು ವಿಫಲವಾಗಿವೆ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯದರ್ಶಿ ಅರವಿಂದ ಕೆ.ಬಿ. ಗಂಭೀರ ಆರೋಪ ಮಾಡಿದರು.