<p><strong>ಹಾವೇರಿ:</strong> ‘ಜಿಲ್ಲೆಯಲ್ಲಿ ವಹಿವಾಟು ನಡೆಸದೇ 1.55 ಲಕ್ಷ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂಥ ಖಾತೆಗಳಲ್ಲಿ ₹ 29.65 ಕೋಟಿ ಠೇವಣಿ ಹಣವಿದೆ’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಭಿಯಾನದ ಸಭೆಯಲ್ಲಿ ಮಾತನಾಡಿದ ಅವರು, ‘ನಿಷ್ಕ್ರಿಯಗೊಂಡ ಖಾತೆಯಲ್ಲಿರುವ ಹಣವನ್ನು ಖಾತೆದಾರರಿಗೆ ವಾಪಸು ನೀಡಲು ‘ನಿಮ್ಮ ಹಣ, ನಿಮ್ಮ ಹಕ್ಕು’ ಅಭಿಯಾನ ಆರಂಭಿಸಲಾಗುತ್ತಿದ್ದು, ಅರ್ಹರು ಅಭಿಯಾನದ ಸದುಪಯೋಗಪಡೆದುಕೊಳ್ಳಬೇಕು’ ಎಂದರು.</p>.<p>‘ಭಾರತ ಸರ್ಕಾರವು ನಿಮ್ಮ ಹಣ ನಿಮ್ಮ ಹಕ್ಕು ಶೀರ್ಷಿಕೆಯಡಿ ಅಭಿಯಾನವನ್ನು ಪ್ರಾರಂಭಿಸಿದೆ. ಖಾತೆಯಲ್ಲಿರುವ ಹಣವನ್ನು ಮಾಲೀಕರಿಗೆ ಹಿಂದಿರುಗಿಸುವ ಉದ್ದೇಶ ಹೊಂದಿದೆ’ ಎಂದರು.</p>.<p>‘ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯಿಂದ ಅಕ್ಟೋಬರ್ 1ರಿಂದ ಈ ಅಭಿಯಾನ ಆರಂಭವಾಗಿದ್ದು, ಡಿಸೆಂಬರ್ 31ರವರೆಗೂ ಅಭಿಯಾನ ಇರಲಿದೆ. ಖಾತೆದಾರರು, ತಮ್ಮ ಹಕ್ಕಿನ ಠೇವಣಿಗಳು ಮತ್ತು ಬ್ಯಾಂಕ್–ವಿಮಾ ಕಂಪನಿಗಳು–ಪಿಂಚಣಿ ನಿಧಿಗಳು–ಮಾರುಕಟ್ಟೆ ಮಧ್ಯವರ್ತಿಗಳಲ್ಲಿರುವ ನಿಷ್ಕ್ರಿಯ ಖಾತೆಯಿಂದ ಹಣ ಹಿಂಪಡೆಯಬಹುದು’ ಎಂದು ಹೇಳಿದರು.</p>.<p>‘ಅಭಿಯಾನದ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಾಧಿಸಲು ಮತ್ತು ಶಿಬಿರಗಳನ್ನು ನಡೆಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಹಾವೇರಿ ಜಿಲ್ಲೆಯಾದ್ಯಂತ ಬ್ಯಾಂಕ್ಗಳು ಹಾಗೂ ಹಣಕಾಸು ಸಂಸ್ಥೆಗಳು, ಅಭಿಯಾನವನ್ನು ಹೆಚ್ಚು ಜನರಿಗೆ ತಲುಪಿಸಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ (ಲೀಡ್ ಬ್ಯಾಂಕ್) ಪ್ರಧಾನ ವ್ಯವಸ್ಥಾಪಕ ಪ್ರಭುದೇವ ಎನ್.ಜಿ. ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಜಿಲ್ಲೆಯಲ್ಲಿ ವಹಿವಾಟು ನಡೆಸದೇ 1.55 ಲಕ್ಷ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂಥ ಖಾತೆಗಳಲ್ಲಿ ₹ 29.65 ಕೋಟಿ ಠೇವಣಿ ಹಣವಿದೆ’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಭಿಯಾನದ ಸಭೆಯಲ್ಲಿ ಮಾತನಾಡಿದ ಅವರು, ‘ನಿಷ್ಕ್ರಿಯಗೊಂಡ ಖಾತೆಯಲ್ಲಿರುವ ಹಣವನ್ನು ಖಾತೆದಾರರಿಗೆ ವಾಪಸು ನೀಡಲು ‘ನಿಮ್ಮ ಹಣ, ನಿಮ್ಮ ಹಕ್ಕು’ ಅಭಿಯಾನ ಆರಂಭಿಸಲಾಗುತ್ತಿದ್ದು, ಅರ್ಹರು ಅಭಿಯಾನದ ಸದುಪಯೋಗಪಡೆದುಕೊಳ್ಳಬೇಕು’ ಎಂದರು.</p>.<p>‘ಭಾರತ ಸರ್ಕಾರವು ನಿಮ್ಮ ಹಣ ನಿಮ್ಮ ಹಕ್ಕು ಶೀರ್ಷಿಕೆಯಡಿ ಅಭಿಯಾನವನ್ನು ಪ್ರಾರಂಭಿಸಿದೆ. ಖಾತೆಯಲ್ಲಿರುವ ಹಣವನ್ನು ಮಾಲೀಕರಿಗೆ ಹಿಂದಿರುಗಿಸುವ ಉದ್ದೇಶ ಹೊಂದಿದೆ’ ಎಂದರು.</p>.<p>‘ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯಿಂದ ಅಕ್ಟೋಬರ್ 1ರಿಂದ ಈ ಅಭಿಯಾನ ಆರಂಭವಾಗಿದ್ದು, ಡಿಸೆಂಬರ್ 31ರವರೆಗೂ ಅಭಿಯಾನ ಇರಲಿದೆ. ಖಾತೆದಾರರು, ತಮ್ಮ ಹಕ್ಕಿನ ಠೇವಣಿಗಳು ಮತ್ತು ಬ್ಯಾಂಕ್–ವಿಮಾ ಕಂಪನಿಗಳು–ಪಿಂಚಣಿ ನಿಧಿಗಳು–ಮಾರುಕಟ್ಟೆ ಮಧ್ಯವರ್ತಿಗಳಲ್ಲಿರುವ ನಿಷ್ಕ್ರಿಯ ಖಾತೆಯಿಂದ ಹಣ ಹಿಂಪಡೆಯಬಹುದು’ ಎಂದು ಹೇಳಿದರು.</p>.<p>‘ಅಭಿಯಾನದ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಾಧಿಸಲು ಮತ್ತು ಶಿಬಿರಗಳನ್ನು ನಡೆಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಹಾವೇರಿ ಜಿಲ್ಲೆಯಾದ್ಯಂತ ಬ್ಯಾಂಕ್ಗಳು ಹಾಗೂ ಹಣಕಾಸು ಸಂಸ್ಥೆಗಳು, ಅಭಿಯಾನವನ್ನು ಹೆಚ್ಚು ಜನರಿಗೆ ತಲುಪಿಸಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ (ಲೀಡ್ ಬ್ಯಾಂಕ್) ಪ್ರಧಾನ ವ್ಯವಸ್ಥಾಪಕ ಪ್ರಭುದೇವ ಎನ್.ಜಿ. ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>