ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯುವಕರಿಗೆ ಶಕ್ತಿ ತುಂಬಿದ್ದ ಇಂದಿರಾ’

Last Updated 9 ಆಗಸ್ಟ್ 2021, 16:13 IST
ಅಕ್ಷರ ಗಾತ್ರ

ಹಾವೇರಿ:ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 60ನೇ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನವನ್ನು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ ಮಾತನಾಡಿ, ‘ಇಂದಿರಾ ಗಾಂಧಿ ಅವರು ಯುವ ಕಾಂಗ್ರೆಸ್ ಅನ್ನು ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕವನ್ನಾಗಿಸಿ ಯುವಕರನ್ನು ಮುಖ್ಯ ವೇದಿಕೆಗೆ ಕರೆತಂದು, ಯುವಕರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಿದ್ದಾರೆ. ಅಲ್ಲದೆ, ಯುವ ಕಾಂಗ್ರೆಸ್ ಕಾರ್ಯಕರ್ತರು ದೇಶದಾದ್ಯಂತ ಕೋವಿಡ್ ಸಂಕಷ್ಟ ಸಮಯದಲ್ಲಿ ಜನರಿಗೆ ನೆರವಾಗಿದ್ದಾರೆ. ಯುವ ಕಾಂಗ್ರೆಸ್ ನಿರಂತರವಾಗಿ ಜನೋಪಯೋಗಿ ಕಾರ್ಯಗಳನ್ನು ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉಮಾರ್ ಇನಾಮದಾರ, ಉಪಾಧ್ಯಕ್ಷ ಸುಲೇಮಾನ್ ಜಮಾದಾರ್, ಯುವ ಕಾಂಗ್ರೆಸ್ ಮುಖಂಡರಾದ ಮಹಾಲಿಂಗಯ್ಯ ಹಿರೇಮಠ, ಉಮೀದ ನದಾಫ, ರಾಜು ಮಧುರಕರ, ಮೂರ್ತಿ ಕರ್ಜಗಿ, ಅಷ್ಪಾಕ್ ಕರ್ಜಗಿ, ಜಮೀರ ಜಿಗರಿ, ನವೀದ ವರ್ದಿ, ಶರತ್, ನೂರ ಅಹ್ಮದ್, ಸುಲೇಮಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT