ಸರಿಯಾದ ಸಮಯಕ್ಕೆ ಬಾರದ ಸಿಬ್ಬಂದಿ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ಸಿಬ್ಬಂದಿ ಬಾರದೇ ರೋಗಿಗಳು ನರಳುವ ಸ್ಥಿತಿ ಇದೆ. ರಾತ್ರಿ ಸಮಯದಲ್ಲಿ ವೈದ್ಯರು ಇಲ್ಲದೇ ಕೇವಲ ನರ್ಸ್ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಗಂಭೀರ ಆರೋಗ್ಯದ ಏರು ಪೇರಾಗಿ ಶಿಗ್ಗಾವಿ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹಲವು ಮರಣಗಳು ಸಂಭವಿಸಿವೆ ಎಂದು ಇಲ್ಲಿಯ ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.