‘ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಸಾವಿರಾರು ಎಕರೆ ಕಬ್ಬು ಒಣಗಿವೆ. ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ಮತ್ತು ಸಕ್ಕರೆ ಸಚಿವರು, ಜನಪ್ರತಿನಿಧಿಗಳೊಂದಿಗೆ ರೈತ ಮುಖಂಡರ ಸಭೆ ಕರೆಯಬೇಕು. ಬೆಳೆ ನಷ್ಟದಿಂದ ನೊಂದಿರುವ ರೈತರಿಗೆ ವಿಶೇಷ ಪ್ಯಾಕೇಜ್ ಮೂಲಕ ಪರಿಹಾರ ದೊರಕಿಸಿಕೊಡಲು ಅಗತ್ಯ ಕ್ರಮವಹಿಸಬೇಕು. ಮಳೆ ಪ್ರಮಾಣ ಕಡಿಮೆಯಾಗಿ ಕೊಳವೆ ಬಾವಿಗಳು ಬತ್ತಿವೆ,ಕಬ್ಬು ಅಡಿಕೆ ತೆಂಗು ತರಕಾರಿ ಬೆಳೆದ ರೈತರು ನೀರಿಲ್ಲದೆ ಪರದಾಡುವಂಥಾಗಿದೆ’ ಎಂದು ತಿಳಿಸಿದ್ದಾರೆ.