ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್ ಮಾತನಾಡಿ, ‘ಗ್ರಾಹಕರು ಜಾಗೃತರಾಗುವುದು ತುಂಬಾ ಅವಶ್ಯವಾಗಿದೆ. ಕೇವಲ ಪ್ರಚಾರಗಳಿಂದ ವಸ್ತುಗಳನ್ನು ಖರೀದಿಸದೆ, ಅವುಗಳ ಗುಣಮಟ್ಟದ ಬಗ್ಗೆ ಜಾಗೃತ ವಹಿಸುವುದು ಮುಖ್ಯ. ಗ್ರಾಹಕರು ತಾವು ಖರೀದಿಸುವ ವಸ್ತುವಿನಲ್ಲಿ ಕಂಡು ಬರುವ ಕಳಪೆ ಗುಣಮಟ್ಟ, ಕಡಿಮೆ ಪ್ರಮಾಣ, ಶುದ್ದತೆಯಲ್ಲಿರುವ ಲೋಪ ಹಾಗೂ ಇತರೆ ದೋಷ ಕಂಡುಬಂದಲ್ಲಿ ಅದಕ್ಕೆ ಕಾರಣವಾದ ವ್ಯಕ್ತಿ ಮತ್ತು ಸಂಸ್ಥೆಯ ವಿರುದ್ಧ ಗ್ರಾಹಕ ನ್ಯಾಯಾಲಯಕ್ಕೆ ದೂರು ನೀಡಿ ಪರಿಹಾರ ಪಡೆಯಬಹುದಾಗಿದೆ’ ಎಂದುರ.