ಹಾನಗಲ್ ತಾಲ್ಲೂಕಿನ ನರೇಗಲ್ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,ಸಂವಿಧಾನ, ಪೊಲೀಸ್ ಇಲಾಖೆ ಏಕಿರಬೇಕು? ಗೃಹ ಸಚಿವರಾಗಿ ಕೆಲಸ ಮಾಡಿದವರೇ ತಮ್ಮ ಪಕ್ಷದ ಪಟಾಲಂನ ಕಿಡಿಗೇಡಿತನ ಸಮರ್ಥಿಸಿಕೊಳ್ಳುವುದು ರಾಜ್ಯ ಮತ್ತು ಇಡೀ ದೇಶಕ್ಕೆ ಕೆಟ್ಟ ಉದಾಹರಣೆಯಾಗಿ ನಿಲ್ಲುವಂತೆ ಮಾಡಿದೆ. ನಮ್ಮನ್ನು ಕಾಯುವ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡುವ ಪ್ರಯತ್ನ ಖಂಡನೀಯ. ಈ ಬಗ್ಗೆ ನಾವು ಮುಂದೆ ಹೋರಾಟ ಮಾಡುತ್ತೇವೆ ಎಂದರು.