ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ–ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ 7 ಮಂದಿ ಸಾವು

Last Updated 9 ಮಾರ್ಚ್ 2018, 18:31 IST
ಅಕ್ಷರ ಗಾತ್ರ

ಹುನಗುಂದ: ತಾಲೂಕಿನ ರಕ್ಕಸಗಿಯ ಬೆಳಗಾವಿ–ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಎತ್ತಿನ ಗಾಡಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಏಳು ಮಂದಿ ಸಾವಿಗೀಡಾಗಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಮೃತರನ್ನು ರಕ್ಕಸಗಿಯ ನಿವಾಸಿ ಚಂದ್ರಯ್ಯ ಹಿರೇಮಠ, ಪತ್ನಿ ರತ್ನಮ್ಮ, ಮಕ್ಕಳಾದ ಕಾಶಮ್ಮ, ವಿಜಯಲಕ್ಷ್ಮೀ, ಬಸವ್ವಗೊರವರ, ಚೌಡವ್ವ ಚಲವಾದಿ, ಸಿದ್ದವ್ವ ಹೂಗಾರ ಎಂದು ಗುರುತಿಸಲಾಗಿದೆ.

ಹೊಲಕ್ಕೆ ತೊಗರಿ ರಾಶಿ ಮಾಡಲು ತೆರಳಿದ್ದರು. ಅಲ್ಲಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಎತ್ತಿನಗಾಡಿಗೆ ಲಾರಿ ಡಿಕ್ಕಿ ಹೊಡೆದಿದೆ. ಆಗ ಈ ಭೀಕರ ಅಪಘಾತ ಸಂಭವಿಸಿದೆ. ಈ ವೇಳೆ ಒಂದು ಎತ್ತು ಕೂಡ ಸಾವಿಗೀಡಾಗಿದ್ದು, ಮತ್ತೊಂದು ತೀವ್ರವಾಗಿ ಗಾಯಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT