<p><strong>ರಾಣೆಬೆನ್ನೂರು:</strong> ಬಾಹ್ಯಾಕಾಶ ಸಂಶೋಧನೆ, ಮಾಹಿತಿ ತಂತ್ರಜ್ಞಾನ ಮತ್ತು ಆರೋಗ್ಯ ಸೇವೆಗಳಂತಹ ವೈಜ್ಞಾನಿಕ ಕ್ಷೇತ್ರದಲ್ಲಿ ಭಾರತ ದೇಶವು ಮಹತ್ವದ ಸಾಧನೆಗಳನ್ನು ಮಾಡಿ ವಿಶ್ವದ ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ ಎಂದು ಇಸ್ರೋ ವಿಜ್ಞಾನಿ ಮಲ್ಲಿಕಾರ್ಜುನ ಕೆ ಹೇಳಿದರು.</p>.<p>ನಗರದ ಹೊರವಲಯದ ಓಂ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಸೋಮವಾರ ಪಿಕೆಕೆ ಇನಿಷಿಯೇಟಿವ್ಸ್ ಸಂಸ್ಥೆಯಿಂದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸೆಮಿನಾರ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಇಸ್ರೋ ಯಶಸ್ವಿಯಾಗಿ ಸೌರ ಮತ್ತು ಚಂದ್ರನ ಗ್ರಹಗಳಿಗೆ ಮಿಷನ್ಗಳನ್ನು ಕಳುಹಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಯಶಸ್ವಿಯಾಗಿ ಕ್ಷಿಪಣಿ ತಂತ್ರಜ್ಞಾನ ಅಭಿವೃದ್ಧಿಪಡಿಸಿದೆ. ಇನ್ಫೋಸಿಸ್ನಂತಹ ಸಂಸ್ಥೆಗಳು ಸಾಫ್ಟ್ವೇರ್ ಅಭಿವೃದ್ಧಿಯಲ್ಲಿ ಅದ್ಭುತ ಸಾಧನೆ ಮಾಡಿದೆ ಎಂದರು.</p>.<p>ಶಾಸಕ ಪ್ರಕಾಶ ಕೋಳಿವಾಡ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಓದಿನ ಜೊತೆಗೆ ಕೌಶಲ್ಯ ಅಭಿವೃದ್ಧಿಯು ಅವಶ್ಯಕವಾಗಿ ಬೇಕಾಗಿದೆ. ಓದು ಬುದ್ಧಿಯನ್ನು ಚುರುಕುಗೊಳಿಸಿದರೆ, ಕೌಶಲ್ಯ ಉದ್ಯೋಗವನ್ನು ಸೃಷ್ಟಿಸುತ್ತದೆ. ಕೌಶಲ್ಯಗಳನ್ನು ಅಳವಡಿಸಿಕೊಂಡು ಉಜ್ವಲ ಭವಿಷ್ಯ ಹೊಂದಬೇಕು ಎಂದರು.</p>.<p>ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮತ್ತು ಎಸ್ಪಿ ಯಶೋಧಾ ವಂಟಗೋಡಿ ಅವರು ಮಾತನಾಡಿದರು.</p>.<p>ಓಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರುಕ್ಮಿಣಿಬಾಯಿ ಸಾವುಕಾರ, ಕಾರ್ಯದರ್ಶಿ ವೈದ್ಯ ಡಾ.ಮನೋಜ ಸಾವುಕಾರ, ಲತಾ ನಿಟ್ಟೂರ, ಶಿಲ್ಪಾ ಸಾವುಕಾರ, ನಗರಸಭೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> ಬಾಹ್ಯಾಕಾಶ ಸಂಶೋಧನೆ, ಮಾಹಿತಿ ತಂತ್ರಜ್ಞಾನ ಮತ್ತು ಆರೋಗ್ಯ ಸೇವೆಗಳಂತಹ ವೈಜ್ಞಾನಿಕ ಕ್ಷೇತ್ರದಲ್ಲಿ ಭಾರತ ದೇಶವು ಮಹತ್ವದ ಸಾಧನೆಗಳನ್ನು ಮಾಡಿ ವಿಶ್ವದ ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ ಎಂದು ಇಸ್ರೋ ವಿಜ್ಞಾನಿ ಮಲ್ಲಿಕಾರ್ಜುನ ಕೆ ಹೇಳಿದರು.</p>.<p>ನಗರದ ಹೊರವಲಯದ ಓಂ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಸೋಮವಾರ ಪಿಕೆಕೆ ಇನಿಷಿಯೇಟಿವ್ಸ್ ಸಂಸ್ಥೆಯಿಂದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸೆಮಿನಾರ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಇಸ್ರೋ ಯಶಸ್ವಿಯಾಗಿ ಸೌರ ಮತ್ತು ಚಂದ್ರನ ಗ್ರಹಗಳಿಗೆ ಮಿಷನ್ಗಳನ್ನು ಕಳುಹಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಯಶಸ್ವಿಯಾಗಿ ಕ್ಷಿಪಣಿ ತಂತ್ರಜ್ಞಾನ ಅಭಿವೃದ್ಧಿಪಡಿಸಿದೆ. ಇನ್ಫೋಸಿಸ್ನಂತಹ ಸಂಸ್ಥೆಗಳು ಸಾಫ್ಟ್ವೇರ್ ಅಭಿವೃದ್ಧಿಯಲ್ಲಿ ಅದ್ಭುತ ಸಾಧನೆ ಮಾಡಿದೆ ಎಂದರು.</p>.<p>ಶಾಸಕ ಪ್ರಕಾಶ ಕೋಳಿವಾಡ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಓದಿನ ಜೊತೆಗೆ ಕೌಶಲ್ಯ ಅಭಿವೃದ್ಧಿಯು ಅವಶ್ಯಕವಾಗಿ ಬೇಕಾಗಿದೆ. ಓದು ಬುದ್ಧಿಯನ್ನು ಚುರುಕುಗೊಳಿಸಿದರೆ, ಕೌಶಲ್ಯ ಉದ್ಯೋಗವನ್ನು ಸೃಷ್ಟಿಸುತ್ತದೆ. ಕೌಶಲ್ಯಗಳನ್ನು ಅಳವಡಿಸಿಕೊಂಡು ಉಜ್ವಲ ಭವಿಷ್ಯ ಹೊಂದಬೇಕು ಎಂದರು.</p>.<p>ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮತ್ತು ಎಸ್ಪಿ ಯಶೋಧಾ ವಂಟಗೋಡಿ ಅವರು ಮಾತನಾಡಿದರು.</p>.<p>ಓಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರುಕ್ಮಿಣಿಬಾಯಿ ಸಾವುಕಾರ, ಕಾರ್ಯದರ್ಶಿ ವೈದ್ಯ ಡಾ.ಮನೋಜ ಸಾವುಕಾರ, ಲತಾ ನಿಟ್ಟೂರ, ಶಿಲ್ಪಾ ಸಾವುಕಾರ, ನಗರಸಭೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>