<p><strong>ಹಾವೇರಿ:</strong> ನಗರದ ಹೊಸಮಠದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ‘ಸಾಮೂಹಿಕ ಇಷ್ಟಲಿಂಗ ಪೂಜೆ’ ಕಾರ್ಯಕ್ರಮ ಗುರುವಾರ ನಡೆಯಿತು.</p>.<p>ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಮಾತನಾಡಿ, ‘ಶಿವರಾತ್ರಿ ಸಂದರ್ಭದಲ್ಲಿ ಜಾಗರಣೆ ಮಾಡುವ ಪದ್ಧತಿ ನಮ್ಮಲ್ಲಿದೆ. ಜಾಗರಣೆ ಎಂದರೆ ಜಾಗೃತನಾಗಿರುವುದು ಎಂದರ್ಥ. ನೈತಿಕತೆಯಿಂದ ತನ್ನ ಅಂತರಂಗ– ಬಹಿರಂಗಗಳನ್ನು ಶುದ್ಧವಾಗಿಟ್ಟುಕೊಂಡ ಮನುಷ್ಯ, ಸದಾಕಾಲ ಜಾಗೃತನಾಗಿರುತ್ತಾನೆ’ ಎಂದರು.</p>.<p>ಶರಣನ ವ್ಯಕ್ತಿತ್ವ ಸದಾ ಜಾಗೃತವಾದ್ದರಿಂದ ಅವನ ನಿದ್ದೆ ಎಚ್ಚರಗಳೆಲ್ಲವೂ ಶಿವನ ಸ್ಮರಣೆ, ನುಡಿಗಳೆಲ್ಲ ಶಿವತತ್ವ ಆಗಿರುತ್ತವೆ. ಜಾಗೃತ ಶರಣನ ಕಾಯ ಕೈಲಾಸವಾಗಿರುತ್ತದೆ. ಅವನೊಳಗೆ ಶಿವ ನೆಲೆಸಿರುತ್ತಾನೆ ಎಂದು ಬಸವಣ್ಣ ತಿಳಿಸಿದ್ದಾರೆ. ಶಿವರಾತ್ರಿಯ ಸಂದರ್ಭದಲ್ಲಿ ಶರಣನಂತೆ ನಮ್ಮಲ್ಲಿ ನಿರಂತರವಾಗಿ ಜಾಗೃತಿ ಮೂಡುವಂತೆ ಶಿವನ ಅನುಗ್ರಹ ಎಲ್ಲರಿಗಾಗಲಿ ಎಂದು ಶ್ರೀಗಳು ಹಾರೈಸಿದರು.</p>.<p>ಬಸವಣ್ಣನವರು ಮೊದಲು ಇಷ್ಟಲಿಂಗದ ಕಲ್ಪನೆಯನ್ನು ಮತ್ತು ಯೋಗದ ವಿಧಾನವನ್ನು ತಂದರು. ಗುಡಿ ಗುಂಡಾರಗಳ ಹೆಸರಿನಲ್ಲಿ ಮುಗ್ಧ ಜನರ ಶೋಷನೆ ನಡೆಯುತ್ತಿತ್ತು. ಹೀಗೆ ಧರ್ಮದ ಹೆಸರಿನಲ್ಲಿ ಶೋಷಣೆ ಸಲ್ಲದೆಂದೂ, ಮೇಲು -ಕೀಳು ಭಾವನೆ ಸರಿಯಲ್ಲವೆಂದು, ಇಷ್ಟಲಿಂಗವನ್ನು ಅಂಗದ ಮೇಲೆ ಧರಿಸುವ ಪದ್ಧತಿಯನ್ನು ಜಾರಿಗೊಳಿಸಿದರು ಎಂದು ತಿಳಿಸಿದರು.</p>.<p>ಮಲ್ಲಿಕಾರ್ಜನ ಹಿಂಚಗೆರಿ, ಇಂದುಧರ ಯರೆಶಿಮಿ, ಮುರುಗೆಪ್ಪ ಕಡೆಕೊಪ್ಪ, ಶಿವಯೋಗಿ ಬೆನ್ನುರು, ಶಿವಬಸಪ್ಪ ಮುದ್ದಿ, ಜಯದೇವ ಕೆರೊಡಿ, ಶ್ರೀಮಠದ ಭಕ್ತರು ಲಿಂಗಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ನಗರದ ಹೊಸಮಠದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ‘ಸಾಮೂಹಿಕ ಇಷ್ಟಲಿಂಗ ಪೂಜೆ’ ಕಾರ್ಯಕ್ರಮ ಗುರುವಾರ ನಡೆಯಿತು.</p>.<p>ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಮಾತನಾಡಿ, ‘ಶಿವರಾತ್ರಿ ಸಂದರ್ಭದಲ್ಲಿ ಜಾಗರಣೆ ಮಾಡುವ ಪದ್ಧತಿ ನಮ್ಮಲ್ಲಿದೆ. ಜಾಗರಣೆ ಎಂದರೆ ಜಾಗೃತನಾಗಿರುವುದು ಎಂದರ್ಥ. ನೈತಿಕತೆಯಿಂದ ತನ್ನ ಅಂತರಂಗ– ಬಹಿರಂಗಗಳನ್ನು ಶುದ್ಧವಾಗಿಟ್ಟುಕೊಂಡ ಮನುಷ್ಯ, ಸದಾಕಾಲ ಜಾಗೃತನಾಗಿರುತ್ತಾನೆ’ ಎಂದರು.</p>.<p>ಶರಣನ ವ್ಯಕ್ತಿತ್ವ ಸದಾ ಜಾಗೃತವಾದ್ದರಿಂದ ಅವನ ನಿದ್ದೆ ಎಚ್ಚರಗಳೆಲ್ಲವೂ ಶಿವನ ಸ್ಮರಣೆ, ನುಡಿಗಳೆಲ್ಲ ಶಿವತತ್ವ ಆಗಿರುತ್ತವೆ. ಜಾಗೃತ ಶರಣನ ಕಾಯ ಕೈಲಾಸವಾಗಿರುತ್ತದೆ. ಅವನೊಳಗೆ ಶಿವ ನೆಲೆಸಿರುತ್ತಾನೆ ಎಂದು ಬಸವಣ್ಣ ತಿಳಿಸಿದ್ದಾರೆ. ಶಿವರಾತ್ರಿಯ ಸಂದರ್ಭದಲ್ಲಿ ಶರಣನಂತೆ ನಮ್ಮಲ್ಲಿ ನಿರಂತರವಾಗಿ ಜಾಗೃತಿ ಮೂಡುವಂತೆ ಶಿವನ ಅನುಗ್ರಹ ಎಲ್ಲರಿಗಾಗಲಿ ಎಂದು ಶ್ರೀಗಳು ಹಾರೈಸಿದರು.</p>.<p>ಬಸವಣ್ಣನವರು ಮೊದಲು ಇಷ್ಟಲಿಂಗದ ಕಲ್ಪನೆಯನ್ನು ಮತ್ತು ಯೋಗದ ವಿಧಾನವನ್ನು ತಂದರು. ಗುಡಿ ಗುಂಡಾರಗಳ ಹೆಸರಿನಲ್ಲಿ ಮುಗ್ಧ ಜನರ ಶೋಷನೆ ನಡೆಯುತ್ತಿತ್ತು. ಹೀಗೆ ಧರ್ಮದ ಹೆಸರಿನಲ್ಲಿ ಶೋಷಣೆ ಸಲ್ಲದೆಂದೂ, ಮೇಲು -ಕೀಳು ಭಾವನೆ ಸರಿಯಲ್ಲವೆಂದು, ಇಷ್ಟಲಿಂಗವನ್ನು ಅಂಗದ ಮೇಲೆ ಧರಿಸುವ ಪದ್ಧತಿಯನ್ನು ಜಾರಿಗೊಳಿಸಿದರು ಎಂದು ತಿಳಿಸಿದರು.</p>.<p>ಮಲ್ಲಿಕಾರ್ಜನ ಹಿಂಚಗೆರಿ, ಇಂದುಧರ ಯರೆಶಿಮಿ, ಮುರುಗೆಪ್ಪ ಕಡೆಕೊಪ್ಪ, ಶಿವಯೋಗಿ ಬೆನ್ನುರು, ಶಿವಬಸಪ್ಪ ಮುದ್ದಿ, ಜಯದೇವ ಕೆರೊಡಿ, ಶ್ರೀಮಠದ ಭಕ್ತರು ಲಿಂಗಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>