ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಹಾವೇರಿ: ರಾಜ್ಯಪಾಲರ ನಡೆ ಖಂಡಿಸಿ ಬೃಹತ್ ಪ್ರತಿಭಟನೆ

ಜಿಲ್ಲಾ ಕಾಂಗ್ರೆಸ್– ಅಹಿಂದ ಸಂಘಟನೆಯಿಂದ ಮೆರವಣಿಗೆ; ಶೋಕಾಸ್ ಹಿಂಪಡೆಯುವವರೆಗೂ ಹೋರಾಟದ ಎಚ್ಚರಿಕೆ
Published : 5 ಆಗಸ್ಟ್ 2024, 16:13 IST
Last Updated : 5 ಆಗಸ್ಟ್ 2024, 16:13 IST
ಫಾಲೋ ಮಾಡಿ
Comments
ಮೆರವಣಿಗೆ ನಿಮಿತ್ತ ಮಾರ್ಗ ಬದಲಾವಣೆ ಮಾಡಿದ್ದರಿಂದ ವಾಹನಗಳು ಕಿರಿದಾದ ರಸ್ತೆಯಲ್ಲಿ ಸಂಚರಿಸಿದ್ದರಿಂದ ದಟ್ಟಣೆ ಉಂಟಾಯಿತು
ಮೆರವಣಿಗೆ ನಿಮಿತ್ತ ಮಾರ್ಗ ಬದಲಾವಣೆ ಮಾಡಿದ್ದರಿಂದ ವಾಹನಗಳು ಕಿರಿದಾದ ರಸ್ತೆಯಲ್ಲಿ ಸಂಚರಿಸಿದ್ದರಿಂದ ದಟ್ಟಣೆ ಉಂಟಾಯಿತು
ಮಾರ್ಗ ಬದಲು: ಜನರಿಗೆ ದಟ್ಟಣೆ ಕಿರಿಕಿರಿ
ಪ್ರತಿಭಟನೆಯಿಂದಾಗಿ ಮಾರುಕಟ್ಟೆ ಹಾಗೂ ಹಳೇ ಪಿ.ಬಿ. ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದರು. ಇದರಿಂದಾಗಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಹುಕ್ಕೇರಿ ಮಠದಿಂದ ಗಾಂಧಿವೃತ್ತದ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆ ಮುಗಿಯುವವರೆಗೂ ಈ ಮಾರ್ಗದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ವಾಹನಗಳು ಕಿರಿದಾದ ರಸ್ತೆಗಳಲ್ಲಿ ಸಂಚರಿಸಿ ದಟ್ಟಣೆಯಲ್ಲಿ ಸಿಲುಕುವಂತಾಯಿತು. ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯುವಾಗಲೂ ಹಳೇ ಪಿ.ರಸ್ತೆಯಲ್ಲಿ ಬಸ್ ಹಾಗೂ ಇತರೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪ್ರತಿಭಟನೆ ಮುಗಿದ ನಂತರವೇ ಸಂಚಾರ ವ್ಯವಸ್ಥೆ ಯಥಾಸ್ಥಿತಿಗೆ ತಲುಪಿತು. ಪ್ರತಿಭಟನೆ ನಡೆಯುವಾಗ ವೃತ್ತಕ್ಕೆ ಬಂದಿದ್ದ ಆಂಬುಲೆನ್ಸ್‌ಗಳಿಗೆ ಪ್ರತಿಭಟನಕಾರರೇ ದಾರಿ ಮಾಡಿಕೊಟ್ಟು ಮುಂದಕ್ಕೆ ಕಳುಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT