‘ಈ ದಾಳಿಯಿಂದ ಕೋಳಿವಾಡರ ಗೆಲುವಿನ ಅಂತರ ದುಪ್ಪಟ್ಟಾಗಿದೆ. ಕಾರ್ಯಕರ್ತರು, ಯುವಕರಲ್ಲಿ ಹುಮ್ಮಸ್ಸು ಹೆಚ್ಚಿದೆ. ಯಾವ ಕಾರ್ಯಕರ್ತರೂ ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ಬಿಜೆಪಿ ಅಭ್ಯರ್ಥಿ ಮೇಲೆ ಐದು ಕ್ರಿಮಿನಲ್ ಕೇಸು ದಾಖಲಾಗಿದ್ದು, ಈಚೆಗೆ ಅರೆಸ್ಟ್ ವಾರೆಂಟ್ ಜಾರಿಯಾದರೂ ಅವರನ್ನು ಬಂಧಿಸದೇ ನಮ್ಮ ಮನೆ ಮೇಲೆ ದಾಳಿ ಮಾಡಿದ್ದಾರೆ’ ಎಂದು ತಿರುಗೇಟು ನೀಡಿದರು.