<p>ಪ್ರಜಾವಾಣಿ ವಾರ್ತೆ</p>. <p>ಬ್ಯಾಡಗಿ: ‘ಹಿಂದೂ ಧರ್ಮ ಹಾಗೂ ಸಂಸ್ಕತಿಯ ಉಳವಿಗಾಗಿ ಯುವಕರ ಪ್ರಾಮಾಣಿಕ ಪ್ರಯತ್ನ ಅಗತ್ಯವಿದೆ’ ಎಂದು ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಯೋಜಕ ಜಗದೀಶ ಕಾರಂತ ಅಭಿಪ್ರಾಯ ಪಟ್ಟರು.</p>.<p>ಪಟ್ಟಣದ ಎಸ್ಜೆಜೆಎಂ ತಾಲ್ಲೂಕು ಕ್ರೀಡಾಂಗಣದಲ್ಲಿ ಹಿಂದೂ ಸಮ್ಮೇಳನ ಸಮಿತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ‘ವಿರಾಟ ಹಿಂದೂ ಸಮಾವೇಶ’ ದಲ್ಲಿ ಮಾತನಾಡಿದರು.</p>.<p>‘ಹಿಂದೂಗಳಲ್ಲಿ ಮೊದಲು ರಾಷ್ಟ್ರ ಹಾಗೂ ಧರ್ಮ ಅಭಿಮಾನ ಮೆರೆಯಬೇಕು. ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿರುವ ಇಂದಿನ ಯುವ ಪೀಳಿಗೆ ನಮ್ಮ ಸಂಸ್ಕೃತಿ ಮರೆಯುತ್ತಿದ್ದಾರೆ’ ಎಂದರು. </p>.<p>ಸಾನ್ನಿಧ್ಯ ವಹಿಸಿದ ಮುಪ್ಪಿನೇಶ್ವರ ವಿಕ್ತಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ಸನಾತನ ಹಿಂದೂ ಧರ್ಮ ಪಾಲನೆಯಾದರೆ ಭಾರತ ಭದ್ರವಾಗಲಿದೆ’ ಎಂದರು.</p>.<p>ಹಿಂದೂ ಸಮ್ಮೇಳನ ಸಮಿತಿ ತಾಲ್ಲೂಕು ಅಧ್ಯಕ್ಷ ಜಯಣ್ಣ ಶಿರೂರ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಕುಮಾರೇಶ್ವರ ಧಾರ್ಮಿಕ ಪಾಠಶಾಲೆಯ ರಾಚಯ್ಯನವರು ಓದಿಸೋಮಠ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>. <p>ಬ್ಯಾಡಗಿ: ‘ಹಿಂದೂ ಧರ್ಮ ಹಾಗೂ ಸಂಸ್ಕತಿಯ ಉಳವಿಗಾಗಿ ಯುವಕರ ಪ್ರಾಮಾಣಿಕ ಪ್ರಯತ್ನ ಅಗತ್ಯವಿದೆ’ ಎಂದು ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಯೋಜಕ ಜಗದೀಶ ಕಾರಂತ ಅಭಿಪ್ರಾಯ ಪಟ್ಟರು.</p>.<p>ಪಟ್ಟಣದ ಎಸ್ಜೆಜೆಎಂ ತಾಲ್ಲೂಕು ಕ್ರೀಡಾಂಗಣದಲ್ಲಿ ಹಿಂದೂ ಸಮ್ಮೇಳನ ಸಮಿತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ‘ವಿರಾಟ ಹಿಂದೂ ಸಮಾವೇಶ’ ದಲ್ಲಿ ಮಾತನಾಡಿದರು.</p>.<p>‘ಹಿಂದೂಗಳಲ್ಲಿ ಮೊದಲು ರಾಷ್ಟ್ರ ಹಾಗೂ ಧರ್ಮ ಅಭಿಮಾನ ಮೆರೆಯಬೇಕು. ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿರುವ ಇಂದಿನ ಯುವ ಪೀಳಿಗೆ ನಮ್ಮ ಸಂಸ್ಕೃತಿ ಮರೆಯುತ್ತಿದ್ದಾರೆ’ ಎಂದರು. </p>.<p>ಸಾನ್ನಿಧ್ಯ ವಹಿಸಿದ ಮುಪ್ಪಿನೇಶ್ವರ ವಿಕ್ತಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ಸನಾತನ ಹಿಂದೂ ಧರ್ಮ ಪಾಲನೆಯಾದರೆ ಭಾರತ ಭದ್ರವಾಗಲಿದೆ’ ಎಂದರು.</p>.<p>ಹಿಂದೂ ಸಮ್ಮೇಳನ ಸಮಿತಿ ತಾಲ್ಲೂಕು ಅಧ್ಯಕ್ಷ ಜಯಣ್ಣ ಶಿರೂರ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಕುಮಾರೇಶ್ವರ ಧಾರ್ಮಿಕ ಪಾಠಶಾಲೆಯ ರಾಚಯ್ಯನವರು ಓದಿಸೋಮಠ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>