<p><strong>ಹಾವೇರಿ:</strong> ಜಿಲ್ಲೆಯ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನ. 24ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಜಟಾಪಟಿ ನಡೆದಿದ್ದು, ಇದರ ಬೆನ್ನಲ್ಲೇ ಕುಲಸಚಿವ (ಪ್ರಭಾರ) ಕೆ.ಶಿವಶಂಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರನ್ನು ಈಚೆಗಷ್ಟೇ ಆಡಳಿತ ಕುಲಸಚಿವರನ್ನಾಗಿ ಪ್ರಭಾರ ವಹಿಸಲಾಗಿತ್ತು.</p>.<p>‘ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಶಹಜಹಾನ ಮುದಕವಿ ಅವರು ಖೊಟ್ಟಿ ಅಂಕಪಟ್ಟಿ ಕೊಟ್ಟು ಅಕ್ರಮವಾಗಿ ನೇಮಕವಾಗಿರುವ ಆರೋಪವಿದೆ. ಅವರ ವಿದ್ಯಾರ್ಹತೆಯ ದಾಖಲೆಗಳನ್ನು ಒದಗಿಸಿ’ ಎಂದು ಸಿಂಡಿಕೇಟ್ ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಇದೇ ವಿಚಾರವಾಗಿ ಶಹಜಹಾನ್ ಮತ್ತು ಸದಸ್ಯರ ನಡುವೆ ಜಟಾಪಟಿ ನಡೆದಿತ್ತು.</p>.<p>‘ಸದಸ್ಯರ ಜೊತೆ ಶಹಜಹಾನ್ ದುರ್ನಡತೆ ತೋರಿದ್ದಾರೆ. ನೋಟಿಸ್ ನೀಡಿ ಶಿಸ್ತುಕ್ರಮ ಕೈಗೊಳ್ಳಿ’ ಎಂದು ಸದಸ್ಯರು ಕುಲಪತಿ, ಕುಲಸಚಿವರನ್ನು ಕೋರಿದ್ದರು. ಇದರ ಹಿಂದೆಯೇ ಶಿವಶಂಕರ್ ಅವರು ಕುಲಪತಿ ಪ್ರೊ. ಟಿ.ಎಂ.ಭಾಸ್ಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.</p>.<p>‘ರಾಜೀನಾಮೆ ಪತ್ರವನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ಸರ್ಕಾರದ ಉತ್ತರದ ನಿರೀಕ್ಷೆಯಲ್ಲಿದ್ದೇನೆ’ ಎಂದು ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನ. 24ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಜಟಾಪಟಿ ನಡೆದಿದ್ದು, ಇದರ ಬೆನ್ನಲ್ಲೇ ಕುಲಸಚಿವ (ಪ್ರಭಾರ) ಕೆ.ಶಿವಶಂಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರನ್ನು ಈಚೆಗಷ್ಟೇ ಆಡಳಿತ ಕುಲಸಚಿವರನ್ನಾಗಿ ಪ್ರಭಾರ ವಹಿಸಲಾಗಿತ್ತು.</p>.<p>‘ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಶಹಜಹಾನ ಮುದಕವಿ ಅವರು ಖೊಟ್ಟಿ ಅಂಕಪಟ್ಟಿ ಕೊಟ್ಟು ಅಕ್ರಮವಾಗಿ ನೇಮಕವಾಗಿರುವ ಆರೋಪವಿದೆ. ಅವರ ವಿದ್ಯಾರ್ಹತೆಯ ದಾಖಲೆಗಳನ್ನು ಒದಗಿಸಿ’ ಎಂದು ಸಿಂಡಿಕೇಟ್ ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಇದೇ ವಿಚಾರವಾಗಿ ಶಹಜಹಾನ್ ಮತ್ತು ಸದಸ್ಯರ ನಡುವೆ ಜಟಾಪಟಿ ನಡೆದಿತ್ತು.</p>.<p>‘ಸದಸ್ಯರ ಜೊತೆ ಶಹಜಹಾನ್ ದುರ್ನಡತೆ ತೋರಿದ್ದಾರೆ. ನೋಟಿಸ್ ನೀಡಿ ಶಿಸ್ತುಕ್ರಮ ಕೈಗೊಳ್ಳಿ’ ಎಂದು ಸದಸ್ಯರು ಕುಲಪತಿ, ಕುಲಸಚಿವರನ್ನು ಕೋರಿದ್ದರು. ಇದರ ಹಿಂದೆಯೇ ಶಿವಶಂಕರ್ ಅವರು ಕುಲಪತಿ ಪ್ರೊ. ಟಿ.ಎಂ.ಭಾಸ್ಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.</p>.<p>‘ರಾಜೀನಾಮೆ ಪತ್ರವನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ಸರ್ಕಾರದ ಉತ್ತರದ ನಿರೀಕ್ಷೆಯಲ್ಲಿದ್ದೇನೆ’ ಎಂದು ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>