ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಮಾತನಾಡಿ, ‘ಸಾಹಿತ್ಯ, ಸಂಗೀತ, ನಾಟ್ಯ, ವಾಸ್ತುಶಿಲ್ಪ ಇತ್ಯಾದಿ ಒಳಗೊಂಡಿರುವುದೇ ಭಾರತೀಯ ಸಂಸ್ಕೃತಿಯ ಪ್ರತೀಕ. ವಾಸ್ತುಶಿಲ್ಪ ಕಲೆಯನ್ನು ಅಜರಾಮರಗೊಳಿಸಿದ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಅಮರಶಿಲ್ಪಿ ಜಕಣಾಚಾರಿ ಅವರನ್ನು ಸ್ಮರಿಸುವುದು, ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ’ ಎಂದರು.