<p><strong>ಹಾವೇರಿ</strong>: ತಾಲ್ಲೂಕಿನ ಹೊಸರಿತ್ತಿ ನಿಲ್ದಾಣದಲ್ಲಿ ಬಸ್ನ ಸೀಟು ಹಿಡಿಯುವ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಚಿನ್ನಾಭರಣ ಕಳವು ಮಾಡಲಾಗಿದ್ದು, ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಸವಣೂರು ತಾಲ್ಲೂಕಿನ ಹತ್ತಿಮತ್ತೂರಿನ ನಿವಾಸಿ ಜಯಮ್ಮ ಅವರ ದೂರು ಆಧರಿಸಿ ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರ ಮಹಿಳೆಯು ತಮ್ಮ ಮಗಳ ಜೊತೆ ರಾಣೆಬೆನ್ನೂರಿಗೆ ಹೋಗಿದ್ದರು. ಅಲ್ಲಿಂದ ಅಕ್ಟೋಬರ್ 3ರಂದು ಬಸ್ನಲ್ಲಿ ಹೊಸರಿತ್ತಿ ನಿಲ್ದಾಣಕ್ಕೆ ಬಂದಿದ್ದರು. ಅಲ್ಲಿ ಹೊಸರಿತ್ತಿ– ಸವಣೂರು ಬಸ್ಗಾಗಿ ಕಾಯುತ್ತಿದ್ದರು’ ಎಂದರು.</p>.<p>‘ನಿಲ್ದಾಣಕ್ಕೆ ಬಸ್ ಬಂದಾಗ, ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು. ಬಸ್ಸಿನಲ್ಲಿ ಸೀಟು ಹಿಡಿಯಲು ಮುಂದಾದಾಗ, ಬ್ಯಾಗ್ ಅನ್ನು ಬಸ್ಸಿನಲ್ಲಿದ್ದ ಅಪರಿಚಿತ ವ್ಯಕ್ತಿಗೆ ನೀಡಿದ್ದರು. ನಂತರ, ಬಸ್ ಹತ್ತಿದಾಗ ಬ್ಯಾಗ್ ಇರಲಿಲ್ಲ. ಅಪರಿಚಿತ ವ್ಯಕ್ತಿ ಸಹ ಪರಾರಿಯಾಗಿದ್ದಾನೆ. ಬ್ಯಾಗ್ನಲ್ಲಿ ₹1.10 ಲಕ್ಷ ಮೌಲ್ಯದ ಚಿನ್ನಾಭರಣವಿತ್ತು ಎಂಬುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಯನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ತಾಲ್ಲೂಕಿನ ಹೊಸರಿತ್ತಿ ನಿಲ್ದಾಣದಲ್ಲಿ ಬಸ್ನ ಸೀಟು ಹಿಡಿಯುವ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಚಿನ್ನಾಭರಣ ಕಳವು ಮಾಡಲಾಗಿದ್ದು, ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಸವಣೂರು ತಾಲ್ಲೂಕಿನ ಹತ್ತಿಮತ್ತೂರಿನ ನಿವಾಸಿ ಜಯಮ್ಮ ಅವರ ದೂರು ಆಧರಿಸಿ ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರ ಮಹಿಳೆಯು ತಮ್ಮ ಮಗಳ ಜೊತೆ ರಾಣೆಬೆನ್ನೂರಿಗೆ ಹೋಗಿದ್ದರು. ಅಲ್ಲಿಂದ ಅಕ್ಟೋಬರ್ 3ರಂದು ಬಸ್ನಲ್ಲಿ ಹೊಸರಿತ್ತಿ ನಿಲ್ದಾಣಕ್ಕೆ ಬಂದಿದ್ದರು. ಅಲ್ಲಿ ಹೊಸರಿತ್ತಿ– ಸವಣೂರು ಬಸ್ಗಾಗಿ ಕಾಯುತ್ತಿದ್ದರು’ ಎಂದರು.</p>.<p>‘ನಿಲ್ದಾಣಕ್ಕೆ ಬಸ್ ಬಂದಾಗ, ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು. ಬಸ್ಸಿನಲ್ಲಿ ಸೀಟು ಹಿಡಿಯಲು ಮುಂದಾದಾಗ, ಬ್ಯಾಗ್ ಅನ್ನು ಬಸ್ಸಿನಲ್ಲಿದ್ದ ಅಪರಿಚಿತ ವ್ಯಕ್ತಿಗೆ ನೀಡಿದ್ದರು. ನಂತರ, ಬಸ್ ಹತ್ತಿದಾಗ ಬ್ಯಾಗ್ ಇರಲಿಲ್ಲ. ಅಪರಿಚಿತ ವ್ಯಕ್ತಿ ಸಹ ಪರಾರಿಯಾಗಿದ್ದಾನೆ. ಬ್ಯಾಗ್ನಲ್ಲಿ ₹1.10 ಲಕ್ಷ ಮೌಲ್ಯದ ಚಿನ್ನಾಭರಣವಿತ್ತು ಎಂಬುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಯನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>