<p><strong>ಹಾವೇರಿ:</strong> ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 533 ಅಭ್ಯರ್ಥಿಗಳು ಕೆಲಸಕ್ಕೆ ಆಯ್ಕೆಯಾದರು.</p>.<p>ಸಿ.ಜಿ. ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಜಿಲ್ಲೆಯ 1,120 ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದರು.</p>.<p>ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೊಮಾ, ಪದವಿ ಹಾಗೂ ಇತರೆ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಯುವಕ–ಯುವತಿಯರು ಮೇಳದಲ್ಲಿ ಪಾಲ್ಗೊಂಡಿದ್ದರು.</p>.<p>ಉದ್ಯೋಗ ವಿನಿಮಯ ಕೇಂದ್ರ ಹಾಗೂ ಟೀಮ್ ಆಪತ್ಬಾಂಧವ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೇಳದಲ್ಲಿ ರಾಜ್ಯದ ವಿವಿಧ ನಗರಗಳ 25ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು.</p>.<p>ಕಾಲೇಜಿಗೆ ಆಗಮಿಸಿದ್ದ ಅಭ್ಯರ್ಥಿಗಳ ಸ್ವ–ವಿವರ ಪಡೆದುಕೊಂಡು ನೋಂದಣಿ ಮಾಡಿಕೊಳ್ಳಲಾಯಿತು. ನಂತರ, ಅಭ್ಯರ್ಥಿಗಳು ಆಸಕ್ತ ಕಂಪನಿಗಳ ಪ್ರತಿನಿಧಿಗಳ ಎದುರು ಹಾಜರಾದರು. ಸಾಮಾನ್ಯ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿದ ಕಂಪನಿ ಪ್ರತಿನಿಧಿಗಳು, ತಮ್ಮ ಹುದ್ದೆಗೆ ಅರ್ಹರಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡರು.</p>.<p>ಉದ್ಯೋಗ ಮೇಳದ ಪಾಲ್ಗೊಂಡು ಕೆಲಸಕ್ಕೆ ಆಯ್ಕೆಯಾದ ಹಲವು ಅಭ್ಯರ್ಥಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಅವರು ಸ್ಥಳದಲ್ಲಿ ನೇಮಕಾತಿ ಪತ್ರ ವಿತರಿಸಿದರು. ಇನ್ನು ಹಲವರಿಗೆ ಉದ್ಯೋಗದ ಅವಕಾಶದ ಪತ್ರ ನೀಡಲಾಗಿದೆ. ನೇಮಕಾತಿ ಪತ್ರ ಪಡೆಯಲು ಅವರಿಗೆ ಕಾಲಾವಕಾಶ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 533 ಅಭ್ಯರ್ಥಿಗಳು ಕೆಲಸಕ್ಕೆ ಆಯ್ಕೆಯಾದರು.</p>.<p>ಸಿ.ಜಿ. ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಜಿಲ್ಲೆಯ 1,120 ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದರು.</p>.<p>ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೊಮಾ, ಪದವಿ ಹಾಗೂ ಇತರೆ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಯುವಕ–ಯುವತಿಯರು ಮೇಳದಲ್ಲಿ ಪಾಲ್ಗೊಂಡಿದ್ದರು.</p>.<p>ಉದ್ಯೋಗ ವಿನಿಮಯ ಕೇಂದ್ರ ಹಾಗೂ ಟೀಮ್ ಆಪತ್ಬಾಂಧವ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೇಳದಲ್ಲಿ ರಾಜ್ಯದ ವಿವಿಧ ನಗರಗಳ 25ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು.</p>.<p>ಕಾಲೇಜಿಗೆ ಆಗಮಿಸಿದ್ದ ಅಭ್ಯರ್ಥಿಗಳ ಸ್ವ–ವಿವರ ಪಡೆದುಕೊಂಡು ನೋಂದಣಿ ಮಾಡಿಕೊಳ್ಳಲಾಯಿತು. ನಂತರ, ಅಭ್ಯರ್ಥಿಗಳು ಆಸಕ್ತ ಕಂಪನಿಗಳ ಪ್ರತಿನಿಧಿಗಳ ಎದುರು ಹಾಜರಾದರು. ಸಾಮಾನ್ಯ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿದ ಕಂಪನಿ ಪ್ರತಿನಿಧಿಗಳು, ತಮ್ಮ ಹುದ್ದೆಗೆ ಅರ್ಹರಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡರು.</p>.<p>ಉದ್ಯೋಗ ಮೇಳದ ಪಾಲ್ಗೊಂಡು ಕೆಲಸಕ್ಕೆ ಆಯ್ಕೆಯಾದ ಹಲವು ಅಭ್ಯರ್ಥಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಅವರು ಸ್ಥಳದಲ್ಲಿ ನೇಮಕಾತಿ ಪತ್ರ ವಿತರಿಸಿದರು. ಇನ್ನು ಹಲವರಿಗೆ ಉದ್ಯೋಗದ ಅವಕಾಶದ ಪತ್ರ ನೀಡಲಾಗಿದೆ. ನೇಮಕಾತಿ ಪತ್ರ ಪಡೆಯಲು ಅವರಿಗೆ ಕಾಲಾವಕಾಶ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>