ಉದ್ಘಾಟನೆಗೆ ಕ್ಷಣಗಣನೆ
ಹಾವೇರಿ: ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ಕನಕ-ಷರೀಫ-ಸರ್ವಜ್ಞ ಪ್ರಧಾನ ವೇದಿಕೆ ಎದುರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಗಣ್ಯರ ನಿರೀಕ್ಷೆಯಲ್ಲಿ ಜನ ಇದ್ದಾರೆ.
ಈಗಾಗಲೇ ಕಲಾ ತಂಡಗಳ ಮೆರವಣಿಗೆ ಪ್ರಧಾನ ಕಾರ್ಯಕ್ರಮ ನಡೆಯಲಿರುವ ಸ್ಥಳ ತಲುಪಿವೆ. ಭೋಜನ ಶಾಲೆ, ವಿವಿಧ ವಸ್ತು ಪ್ರದರ್ಶನಗಳ ಮಳಿಗೆ ಎದುರು ಜನ ಸೇರಿದ್ದಾರೆ.