ಹಾವೇರಿ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಯ ಬಸವೇಶ್ವರನಗರ ಸಿ ಬ್ಲಾಕ್ ರೈಲ್ವೆ ಹಳಿ ಸಮೀಪ ಮಂಗಳವಾರ ನಡೆದಿದೆ.
ಈರಣ್ಣ ದೊಡ್ಡಬೂದಿಹಾಳ (47) ಆತ್ಮಹತ್ಯೆ ಮಾಡಿಕೊಂಡವರು. ಎರಡು ದಿನಗಳ ಹಿಂದೆ ಮನೆಯಿಂದ ವಾಯುವಿಹಾರಕ್ಕೆ ಹೋಗಿದ್ದ ಇವರು ಮರಳಿ ಬಂದಿರಲಿಲ್ಲ. ನಾಪತ್ತೆಯಾಗಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇವರು ಮೂಲವ್ಯಾಧಿ ಮತ್ತು ಮಧುಮೇಹದಿಂದ ಬಳಲುತ್ತಿದ್ದರು. ಮೃತದೇಹದ ಬಳಿ ಮಾತ್ರೆಗಳು ಸಿಕ್ಕಿದ್ದು, ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.