ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತಿಯ ಟಿಕೆಟ್‌ಗಾಗಿ ಶಾಸಕರ ಪತ್ನಿ ಸಿಎಂ ಬಳಿ ಲಾಬಿ

Last Updated 8 ಏಪ್ರಿಲ್ 2023, 11:31 IST
ಅಕ್ಷರ ಗಾತ್ರ

ಶಿಗ್ಗಾವಿ: ರಾಣೆಬೆನ್ನೂರಿನ ಬಿಜೆಪಿ ಶಾಸಕ ಅರುಣಕುಮಾರ ಪೂಜಾರ ಅವರ ಪತ್ನಿ ಮಂಗಳಗೌರಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಸುಮಾರು 15 ನಿಮಿಷ ಮಾತನಾಡಿದ್ದು ಚರ್ಚೆಗೆ ಗ್ರಾಸವಾಯಿತು.

ಪಟ್ಟಣದ ಹನುಮಂತಗೌಡ್ರ ಪಾಟೀಲ ಕಲ್ಯಾಣಮಂಟಪದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ವೇದಿಕೆಗೆ ಬಂದುಬೊಮ್ಮಾಯಿಯವರ ಕುರ್ಚಿಯ ಹಿಂಭಾಗ ನಿಂತು ಅವರ ಕಿವಿ ಹತ್ತಿರ ಮಾತನಾಡಿದರು.

10ಕ್ಕೂ ಹೆಚ್ಚು ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆ ಎಂಬ ಮಾಹಿತಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ವೇದಿಕೆಗೆ ಬಂದ ಮಂಗಳಗೌರಿ ಅವರು ತಮ್ಮ ಪತಿಗೆ ಟಿಕೆಟ್ ನೀಡುವಂತೆ ಮನವಿ ಮಾಡುತ್ತಿದ್ದ ದೃಶ್ಯ ಗಮನ ಸೆಳೆಯಿತು.

ಶಿಗ್ಗಾವಿಯ ವಿವಿಧ ಕಾರ್ಯಕ್ರಮದಲ್ಲಿ ಸಿಎಂ ಹಿಂದೆ ಸುತ್ತಾಡಿದ ಮಂಗಳಾಗೌರಿ ಅವರು ಪತಿಯ ಪರ ಲಾಬಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT