<p><strong>ಹಾವೇರಿ:</strong> ಜಿಲ್ಲೆಯಲ್ಲಿರುವ 4.18 ಲಕ್ಷ ಮನೆಗಳ ಪೈಕಿ 4.13 ಲಕ್ಷ ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿದ್ದು, ಇನ್ನೂ 5,008 ಮನೆಗಳ ಸಮೀಕ್ಷೆ ಮಾತ್ರ ಬಾಕಿ ಉಳಿದಿದೆ.</p>.<p>ರಾಜ್ಯ ಸರ್ಕಾರದ ನಿರ್ದೇಶನದಂತೆ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಮೀಕ್ಷೆಗೆ ಜಿಲ್ಲೆಯಲ್ಲಿ ಮೊದಲ ದಿನದಿಂದಲೂ ಉತ್ತಮ ಸ್ಪಂದನೆ ಸಿಕ್ಕಿದ್ದು, ಈಗಾಗಲೇ ಶೇ 98.8ರಷ್ಟು ಗುರಿ ಸಾಧನೆಯಾಗಿದೆ.</p>.<p>‘ಜಿಲ್ಲೆಯಲ್ಲಿ ವಿದ್ಯುತ್ ಮೀಟರ್ ಆಧರಿಸಿ 4,18,516 ಮನೆಗಳನ್ನು ಗುರುತಿಸಲಾಗಿದೆ. ಬುಧವಾರ ಸಂಜೆ 5 ಗಂಟೆಯ ಅಂಕಿ–ಅಂಶಗಳ ಪ್ರಕಾರ, ಜಿಲ್ಲೆಯಲ್ಲಿ 4,13,508 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಪ್ರತಿಯೊಂದು ಮನೆಗೂ ತೆರಳಿದ್ದ ಸಮೀಕ್ಷೆದಾರರು, ಕುಟುಂಬದವರ ಮಾಹಿತಿ ಕಲೆಹಾಕಿ ಆ್ಯಪ್ನಲ್ಲಿ ದಾಖಲಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸಮೀಕ್ಷೆದಾರರನ್ನಾಗಿ ನೇಮಿಸಿಕೊಳ್ಳಲಾಗಿದೆ. ಜಿಲ್ಲೆಯ ಮನೆಗಳನ್ನು 3,777 ಬ್ಲಾಕ್ಗಳಾಗಿ ವಿಂಗಡಿಸಿ, ಒಂದೊಂದು ಬ್ಲಾಕ್ಗೆ ಒಬ್ಬೊಬ್ಬ ಸಮೀಕ್ಷೆದಾರರನ್ನು ನಿಯೋಜಿಸಲಾಗಿದೆ. ಈ ಪೈಕಿ 1,200ಕ್ಕೂ ಹೆಚ್ಚು ಶಿಕ್ಷಕರು, ಈಗಾಗಲೇ ತಮಗೆ ವಹಿಸಿದ್ದ ಸಮೀಕ್ಷೆ ಕೆಲಸವನ್ನು ಶೇ 100ರಷ್ಟು ಮಾಡಿ ಮುಗಿಸಿದ್ದಾರೆ’ ಎಂದು ಹೇಳಿದರು.</p>.<p>‘ಹಾನಗಲ್, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು, ರಟ್ಟೀಹಳ್ಳಿ, ಸವಣೂರು, ಶಿಗ್ಗಾವಿ ತಾಲ್ಲೂಕಿನಲ್ಲಿ ಸಮೀಕ್ಷೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಬ್ಯಾಡಗಿ ಜಿಲ್ಲೆಯಲ್ಲಿ ವಿದ್ಯುತ್ ಮೀಟರ್ ಆಧರಿಸಿ 34,718 ಮನೆಗಳನ್ನು ಗುರುತಿಸಲಾಗಿತ್ತು. ಆದರೆ, ಈ ತಾಲ್ಲೂಕಿನಲ್ಲಿ 36,321 ಮನೆಗಳ ಸಮೀಕ್ಷೆ ಆಗಿದೆ. ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಮನೆಗಳ ಸಮೀಕ್ಷೆ ಆಗಿದೆ’ ಎಂದರು.</p>.<p>‘ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಸಮೀಕ್ಷೆ ಗುರಿ ಸಾಧನೆಯಲ್ಲಿ ಹಾವೇರಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಚಾಮರಾಜನಗರ ಜಿಲ್ಲೆ (99.79) ಮೊದಲ ಸ್ಥಾನದಲ್ಲಿದೆ. ಸಮೀಕ್ಷೆ ಅವಧಿಯನ್ನು ಅ. 18ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಹಾವೇರಿ ಜಿಲ್ಲೆಯ ಸಮೀಕ್ಷೆದಾರರು, ಶೇ 100ರಷ್ಟು ಸಾಧನೆ ಮಾಡಲು ಸಮೀಕ್ಷೆ ಮುಂದುವರಿಸಿದ್ದಾರೆ’ ಎಂದು ಹೇಳಿದರು.</p>.<p>ಜನರು ವಾಸವಿರದ ಮನೆಗಳಿಗೆ ಸ್ಟಿಕ್ಕರ್: ‘ಜಿಲ್ಲೆಯ ಹಲವು ಕಡೆಗಳಲ್ಲಿ ಜನರು ವಾಸವಿರದ ಮನೆಗಳಿಗೆ ಹಾಗೂ ಬಾಡಿಗೆ ಮನೆಗಳಿಗೆ ಸ್ಟಿಕ್ಕರ್ ಅಂಟಿಸಲಾಗಿದೆ. ಇಂಥ ಮನೆಗಳ ಸಮೀಕ್ಷೆ ಹೇಗೆ ಮಾಡುವುದು? ಎಂಬ ಬಗ್ಗೆ ಅಧಿಕಾರಿಗಳ ಸಲಹೆ ಕೇಳಿದ್ದೇವೆ’ ಎಂದು ಸಮೀಕ್ಷೆದಾರರೊಬ್ಬರು ತಿಳಿಸಿದರು.</p>.<p>‘ನಮಗೆ ವಹಿಸಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದೇವೆ. ಎಲ್ಲ ಮನೆಗಳಿಗೂ ಭೇಟಿ ನೀಡಿದ್ದೇವೆ. ಆದರೆ, ಶೇ 100ರಷ್ಟು ಸಾಧನೆ ಮಾಡಲು ಹಲವು ಅಡ್ಡಿಗಳು ಎದುರಾಗಿವೆ. ಜನರು ವಾಸವಿರದ ಕಡೆ ಸ್ಟಿಕ್ಕರ್ ಅಂಟಿಸಲಾಗಿದ್ದು, ಈ ಮನೆಯ ಸಮೀಕ್ಷೆ ಮಾಡಿಲ್ಲ. ಸಮೀಕ್ಷೆ ಮಾಡಿಲ್ಲವೆಂದೇ ಆ್ಯಪ್ನಲ್ಲಿ ತೋರಿಸುತ್ತಿದೆ. ಆದರೆ, ಮನೆಯಲ್ಲಿ ಯಾರೂ ಇಲ್ಲವೆಂಬುದನ್ನು ದಾಖಲಿಸಲು ಆ್ಯಪ್ನಲ್ಲಿ ಅವಕಾಶವಿಲ್ಲ’ ಎಂದು ಹೇಳಿದರು.</p>.<p> <strong>ಸಮೀಕ್ಷೆ: ಸಹಾಯವಾಣಿ ಆರಂಭ</strong> </p><p>ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಪಟ್ಟಂತೆ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ಹೊಸದಾಗಿ ಸಮೀಕ್ಷೆ ಮಾಡಿಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಸಹಾಯವಾಣಿ ಆರಂಭಿಸಲಾಗಿದೆ. ‘ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿ– 08375-249102 ಹಾವೇರಿ ತಹಶೀಲ್ದಾರ ಕಚೇರಿ– 9480370772 9663635166 ಬ್ಯಾಡಗಿ– 08375-228428 ಹಾನಗಲ್– 08379-262241 ಹಿರೇಕೆರೂರು– 08376-282231 ರಾಣೆಬೆನ್ನೂರು– 8618357292 ರಟ್ಟೀಹಳ್ಳಿ– 08376-200147 ಶಿಗ್ಗಾವಿ– 08378-255402 ಹಾಗೂ ಸವಣೂರು– 08378-241427 ಸಂಪರ್ಕಿಸಬಹುದು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ‘ಯಾರಾದರೂ ಸಮೀಕ್ಷೆಯಿಂದ ವಂಚಿತರಾದರೆ ಸಮೀಕ್ಷೆದಾರರು ಮನೆ ಬಾರದಿದ್ದರೆ ಅಂಥವರು ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು. ಸಮೀಕ್ಷೆಯಿಂದ ದೂರವುಳಿದ ಜನರ ಅನುಕೂಲಕ್ಕಾಗಿ ಈ ಸಹಾಯವಾಣಿ ಕೆಲಸ ಮಾಡಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯಲ್ಲಿರುವ 4.18 ಲಕ್ಷ ಮನೆಗಳ ಪೈಕಿ 4.13 ಲಕ್ಷ ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿದ್ದು, ಇನ್ನೂ 5,008 ಮನೆಗಳ ಸಮೀಕ್ಷೆ ಮಾತ್ರ ಬಾಕಿ ಉಳಿದಿದೆ.</p>.<p>ರಾಜ್ಯ ಸರ್ಕಾರದ ನಿರ್ದೇಶನದಂತೆ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಮೀಕ್ಷೆಗೆ ಜಿಲ್ಲೆಯಲ್ಲಿ ಮೊದಲ ದಿನದಿಂದಲೂ ಉತ್ತಮ ಸ್ಪಂದನೆ ಸಿಕ್ಕಿದ್ದು, ಈಗಾಗಲೇ ಶೇ 98.8ರಷ್ಟು ಗುರಿ ಸಾಧನೆಯಾಗಿದೆ.</p>.<p>‘ಜಿಲ್ಲೆಯಲ್ಲಿ ವಿದ್ಯುತ್ ಮೀಟರ್ ಆಧರಿಸಿ 4,18,516 ಮನೆಗಳನ್ನು ಗುರುತಿಸಲಾಗಿದೆ. ಬುಧವಾರ ಸಂಜೆ 5 ಗಂಟೆಯ ಅಂಕಿ–ಅಂಶಗಳ ಪ್ರಕಾರ, ಜಿಲ್ಲೆಯಲ್ಲಿ 4,13,508 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಪ್ರತಿಯೊಂದು ಮನೆಗೂ ತೆರಳಿದ್ದ ಸಮೀಕ್ಷೆದಾರರು, ಕುಟುಂಬದವರ ಮಾಹಿತಿ ಕಲೆಹಾಕಿ ಆ್ಯಪ್ನಲ್ಲಿ ದಾಖಲಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸಮೀಕ್ಷೆದಾರರನ್ನಾಗಿ ನೇಮಿಸಿಕೊಳ್ಳಲಾಗಿದೆ. ಜಿಲ್ಲೆಯ ಮನೆಗಳನ್ನು 3,777 ಬ್ಲಾಕ್ಗಳಾಗಿ ವಿಂಗಡಿಸಿ, ಒಂದೊಂದು ಬ್ಲಾಕ್ಗೆ ಒಬ್ಬೊಬ್ಬ ಸಮೀಕ್ಷೆದಾರರನ್ನು ನಿಯೋಜಿಸಲಾಗಿದೆ. ಈ ಪೈಕಿ 1,200ಕ್ಕೂ ಹೆಚ್ಚು ಶಿಕ್ಷಕರು, ಈಗಾಗಲೇ ತಮಗೆ ವಹಿಸಿದ್ದ ಸಮೀಕ್ಷೆ ಕೆಲಸವನ್ನು ಶೇ 100ರಷ್ಟು ಮಾಡಿ ಮುಗಿಸಿದ್ದಾರೆ’ ಎಂದು ಹೇಳಿದರು.</p>.<p>‘ಹಾನಗಲ್, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು, ರಟ್ಟೀಹಳ್ಳಿ, ಸವಣೂರು, ಶಿಗ್ಗಾವಿ ತಾಲ್ಲೂಕಿನಲ್ಲಿ ಸಮೀಕ್ಷೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಬ್ಯಾಡಗಿ ಜಿಲ್ಲೆಯಲ್ಲಿ ವಿದ್ಯುತ್ ಮೀಟರ್ ಆಧರಿಸಿ 34,718 ಮನೆಗಳನ್ನು ಗುರುತಿಸಲಾಗಿತ್ತು. ಆದರೆ, ಈ ತಾಲ್ಲೂಕಿನಲ್ಲಿ 36,321 ಮನೆಗಳ ಸಮೀಕ್ಷೆ ಆಗಿದೆ. ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಮನೆಗಳ ಸಮೀಕ್ಷೆ ಆಗಿದೆ’ ಎಂದರು.</p>.<p>‘ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಸಮೀಕ್ಷೆ ಗುರಿ ಸಾಧನೆಯಲ್ಲಿ ಹಾವೇರಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಚಾಮರಾಜನಗರ ಜಿಲ್ಲೆ (99.79) ಮೊದಲ ಸ್ಥಾನದಲ್ಲಿದೆ. ಸಮೀಕ್ಷೆ ಅವಧಿಯನ್ನು ಅ. 18ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಹಾವೇರಿ ಜಿಲ್ಲೆಯ ಸಮೀಕ್ಷೆದಾರರು, ಶೇ 100ರಷ್ಟು ಸಾಧನೆ ಮಾಡಲು ಸಮೀಕ್ಷೆ ಮುಂದುವರಿಸಿದ್ದಾರೆ’ ಎಂದು ಹೇಳಿದರು.</p>.<p>ಜನರು ವಾಸವಿರದ ಮನೆಗಳಿಗೆ ಸ್ಟಿಕ್ಕರ್: ‘ಜಿಲ್ಲೆಯ ಹಲವು ಕಡೆಗಳಲ್ಲಿ ಜನರು ವಾಸವಿರದ ಮನೆಗಳಿಗೆ ಹಾಗೂ ಬಾಡಿಗೆ ಮನೆಗಳಿಗೆ ಸ್ಟಿಕ್ಕರ್ ಅಂಟಿಸಲಾಗಿದೆ. ಇಂಥ ಮನೆಗಳ ಸಮೀಕ್ಷೆ ಹೇಗೆ ಮಾಡುವುದು? ಎಂಬ ಬಗ್ಗೆ ಅಧಿಕಾರಿಗಳ ಸಲಹೆ ಕೇಳಿದ್ದೇವೆ’ ಎಂದು ಸಮೀಕ್ಷೆದಾರರೊಬ್ಬರು ತಿಳಿಸಿದರು.</p>.<p>‘ನಮಗೆ ವಹಿಸಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದೇವೆ. ಎಲ್ಲ ಮನೆಗಳಿಗೂ ಭೇಟಿ ನೀಡಿದ್ದೇವೆ. ಆದರೆ, ಶೇ 100ರಷ್ಟು ಸಾಧನೆ ಮಾಡಲು ಹಲವು ಅಡ್ಡಿಗಳು ಎದುರಾಗಿವೆ. ಜನರು ವಾಸವಿರದ ಕಡೆ ಸ್ಟಿಕ್ಕರ್ ಅಂಟಿಸಲಾಗಿದ್ದು, ಈ ಮನೆಯ ಸಮೀಕ್ಷೆ ಮಾಡಿಲ್ಲ. ಸಮೀಕ್ಷೆ ಮಾಡಿಲ್ಲವೆಂದೇ ಆ್ಯಪ್ನಲ್ಲಿ ತೋರಿಸುತ್ತಿದೆ. ಆದರೆ, ಮನೆಯಲ್ಲಿ ಯಾರೂ ಇಲ್ಲವೆಂಬುದನ್ನು ದಾಖಲಿಸಲು ಆ್ಯಪ್ನಲ್ಲಿ ಅವಕಾಶವಿಲ್ಲ’ ಎಂದು ಹೇಳಿದರು.</p>.<p> <strong>ಸಮೀಕ್ಷೆ: ಸಹಾಯವಾಣಿ ಆರಂಭ</strong> </p><p>ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಪಟ್ಟಂತೆ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ಹೊಸದಾಗಿ ಸಮೀಕ್ಷೆ ಮಾಡಿಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಸಹಾಯವಾಣಿ ಆರಂಭಿಸಲಾಗಿದೆ. ‘ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿ– 08375-249102 ಹಾವೇರಿ ತಹಶೀಲ್ದಾರ ಕಚೇರಿ– 9480370772 9663635166 ಬ್ಯಾಡಗಿ– 08375-228428 ಹಾನಗಲ್– 08379-262241 ಹಿರೇಕೆರೂರು– 08376-282231 ರಾಣೆಬೆನ್ನೂರು– 8618357292 ರಟ್ಟೀಹಳ್ಳಿ– 08376-200147 ಶಿಗ್ಗಾವಿ– 08378-255402 ಹಾಗೂ ಸವಣೂರು– 08378-241427 ಸಂಪರ್ಕಿಸಬಹುದು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ‘ಯಾರಾದರೂ ಸಮೀಕ್ಷೆಯಿಂದ ವಂಚಿತರಾದರೆ ಸಮೀಕ್ಷೆದಾರರು ಮನೆ ಬಾರದಿದ್ದರೆ ಅಂಥವರು ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು. ಸಮೀಕ್ಷೆಯಿಂದ ದೂರವುಳಿದ ಜನರ ಅನುಕೂಲಕ್ಕಾಗಿ ಈ ಸಹಾಯವಾಣಿ ಕೆಲಸ ಮಾಡಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>