<p><strong>ಹಾವೇರಿ: </strong>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ ₹62 ಕೋಟಿ ವೆಚ್ಚದ 9 ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶನಿವಾರ ಉದ್ಘಾಟಿಸಿದರು. ₹11 ಕೋಟಿ ವೆಚ್ಚದ 2 ಅಭಿವೃದ್ಧಿ ಕಾಮಗಾರಿಗಳಿಗೆ ರಾಣೆಬೆನ್ನೂರಿನ ಎಪಿಎಂಸಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಅಮೃತ ಯೋಜನೆಯಡಿ ₹14 ಕೋಟಿ ವೆಚ್ಚದಲ್ಲಿ 24X7 ಕುಡಿಯುವ ನೀರಿನ ಯೋಜನೆಯನ್ನು ಎಪಿಎಂಸಿ ಮಾರುಕಟ್ಟೆ ಸಮುದಾಯ ಭವನ ಆವರಣದಲ್ಲಿ ಲೋಕಾರ್ಪಣೆಗೊಳಿಸಿದರು.</p>.<p><strong>ಓದಿ:</strong><a href="https://www.prajavani.net/karnataka-news/caste-census-bjp-reaction-to-siddaramaiah-prajavani-article-karnataka-politics-latest-news-updates-861686.html" itemprop="url">ಜಾತಿಗಣತಿ ಬಗ್ಗೆ ಮೊದಲು ಆಕ್ಷೇಪಿಸಿದ್ದೇ ಕಾಂಗ್ರೆಸ್: ಸಿದ್ದರಾಮಯ್ಯಗೆ ಬಿಜೆಪಿ</a></p>.<p>ತಾಲ್ಲೂಕಿನ ಕೊಪ್ಪೇಲೂರು ಗ್ರಾಮದಲ್ಲಿ ನಬಾರ್ಡ್ ಯೋಜನೆಯಡಿ ₹1.70 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ₹93 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ, ₹62 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡ, ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಮೂಲಸೌಕರ್ಯಗಳಡಿ ₹ 2 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿದರು. ₹ 49.50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರೈತ ಸಂಪರ್ಕ ಕೇಂದ್ರ, ₹50 ಲಕ್ಷ ವೆಚ್ಚದಲ್ಲಿ ನವೀಕರಿಸಿರುವ ನಗರಸಭೆ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣವನ್ನು ಉದ್ಘಾಟಿಸಿದ ಅವರು, ನಗರಸಭೆ ₹5 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ದ್ವಿಭಜಕ ರಸ್ತೆ, ಚರಂಡಿ ನಿರ್ಮಾಣ, ವಿದ್ಯುತ್ ಕಂಬ ಸೇರಿದಂತೆ ವಿವಿಧ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.</p>.<p>₹6.36 ಕೋಟಿ ವೆಚ್ಚದಲ್ಲಿ ಸಮುದಾಯ ಭವನ, ದೊಡ್ಡಕೆರೆ ಹಾಗೂ ಕಮದೋಡ, ಚಳಗೇರಿ ಹಾಗೂ ಕರೂರ ಕೆರೆಗಳಿಗೆ ನೀರು ತುಂಬಿಸುವ ₹32.50 ಕೋಟಿ ವೆಚ್ಚದ ಕಾಮಗಾರಿಯ ಉದ್ಘಾಟನೆ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.</p>.<p>₹9 ಕೋಟಿ ವೆಚ್ಚದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕರೂರ, ಚಳಗೇರಿ, ಅರೆಮಲ್ಲಾಪುರ ಹಾಗೂ ಕವಲೂರು ಗ್ರಾಮಗಳಿಗೆ ನಲ್ಲಿ ನೀರು ಸಂಪರ್ಕ ಕಾಮಗಾರಿಯನ್ನು ಉದ್ಘಾಟಿಸಿದರು.</p>.<p><strong>ಓದಿ:</strong><a href="https://www.prajavani.net/district/mysore/mysore-gang-rape-case-police-brought-all-accused-to-mysore-861644.html" itemprop="url">ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ಮೈಸೂರಿಗೆ ಕರೆತಂದ ಪೊಲೀಸರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ ₹62 ಕೋಟಿ ವೆಚ್ಚದ 9 ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶನಿವಾರ ಉದ್ಘಾಟಿಸಿದರು. ₹11 ಕೋಟಿ ವೆಚ್ಚದ 2 ಅಭಿವೃದ್ಧಿ ಕಾಮಗಾರಿಗಳಿಗೆ ರಾಣೆಬೆನ್ನೂರಿನ ಎಪಿಎಂಸಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಅಮೃತ ಯೋಜನೆಯಡಿ ₹14 ಕೋಟಿ ವೆಚ್ಚದಲ್ಲಿ 24X7 ಕುಡಿಯುವ ನೀರಿನ ಯೋಜನೆಯನ್ನು ಎಪಿಎಂಸಿ ಮಾರುಕಟ್ಟೆ ಸಮುದಾಯ ಭವನ ಆವರಣದಲ್ಲಿ ಲೋಕಾರ್ಪಣೆಗೊಳಿಸಿದರು.</p>.<p><strong>ಓದಿ:</strong><a href="https://www.prajavani.net/karnataka-news/caste-census-bjp-reaction-to-siddaramaiah-prajavani-article-karnataka-politics-latest-news-updates-861686.html" itemprop="url">ಜಾತಿಗಣತಿ ಬಗ್ಗೆ ಮೊದಲು ಆಕ್ಷೇಪಿಸಿದ್ದೇ ಕಾಂಗ್ರೆಸ್: ಸಿದ್ದರಾಮಯ್ಯಗೆ ಬಿಜೆಪಿ</a></p>.<p>ತಾಲ್ಲೂಕಿನ ಕೊಪ್ಪೇಲೂರು ಗ್ರಾಮದಲ್ಲಿ ನಬಾರ್ಡ್ ಯೋಜನೆಯಡಿ ₹1.70 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ₹93 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ, ₹62 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡ, ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಮೂಲಸೌಕರ್ಯಗಳಡಿ ₹ 2 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿದರು. ₹ 49.50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರೈತ ಸಂಪರ್ಕ ಕೇಂದ್ರ, ₹50 ಲಕ್ಷ ವೆಚ್ಚದಲ್ಲಿ ನವೀಕರಿಸಿರುವ ನಗರಸಭೆ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣವನ್ನು ಉದ್ಘಾಟಿಸಿದ ಅವರು, ನಗರಸಭೆ ₹5 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ದ್ವಿಭಜಕ ರಸ್ತೆ, ಚರಂಡಿ ನಿರ್ಮಾಣ, ವಿದ್ಯುತ್ ಕಂಬ ಸೇರಿದಂತೆ ವಿವಿಧ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.</p>.<p>₹6.36 ಕೋಟಿ ವೆಚ್ಚದಲ್ಲಿ ಸಮುದಾಯ ಭವನ, ದೊಡ್ಡಕೆರೆ ಹಾಗೂ ಕಮದೋಡ, ಚಳಗೇರಿ ಹಾಗೂ ಕರೂರ ಕೆರೆಗಳಿಗೆ ನೀರು ತುಂಬಿಸುವ ₹32.50 ಕೋಟಿ ವೆಚ್ಚದ ಕಾಮಗಾರಿಯ ಉದ್ಘಾಟನೆ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.</p>.<p>₹9 ಕೋಟಿ ವೆಚ್ಚದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕರೂರ, ಚಳಗೇರಿ, ಅರೆಮಲ್ಲಾಪುರ ಹಾಗೂ ಕವಲೂರು ಗ್ರಾಮಗಳಿಗೆ ನಲ್ಲಿ ನೀರು ಸಂಪರ್ಕ ಕಾಮಗಾರಿಯನ್ನು ಉದ್ಘಾಟಿಸಿದರು.</p>.<p><strong>ಓದಿ:</strong><a href="https://www.prajavani.net/district/mysore/mysore-gang-rape-case-police-brought-all-accused-to-mysore-861644.html" itemprop="url">ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ಮೈಸೂರಿಗೆ ಕರೆತಂದ ಪೊಲೀಸರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>