<p><strong>ಹಾವೇರಿ</strong>: ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆ, ರಾಜ್ಯ ಸರ್ಕಾರದ ‘ಭೂ ಗ್ಯಾರಂಟಿ’ಯ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಮದುವಣಗಿತ್ತಿಯಂತೆ ಸಿದ್ಧವಾಗಿದೆ.</p>.<p>ಫೆ. 14ರಂದು ಬೆಳಿಗ್ಗೆ 11ಕ್ಕೆ ‘ರಾಜ್ಯ ಸರ್ಕಾರದ ಸಾಧನಾ ಸಮಾವೇಶ’ ಹಾಗೂ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಜರುಗಲಿದ್ದು, ಇದೇ ಸಂದರ್ಭದಲ್ಲಿ ರಾಜ್ಯದ 1 ಲಕ್ಷಕ್ಕೂ ಹೆಚ್ಚು ಜನರ ಭೂ ಮಾಲೀಕತ್ವದ ಕನಸು ನನಸಾಗಲಿದೆ.</p>.<p>ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಸಾವಿರ ದಿನಗಳ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಒಂದು ಲಕ್ಷ ಜನರಿಗೆ ಫೆ. 14ರಂದು ಭೂ ಗ್ಯಾರಂಟಿ ನೀಡಲು ಭವ್ಯ ವೇದಿಕೆ ಸಿದ್ಧಪಡಿಸಿದೆ.</p>.<p>86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದ್ದ ಬಯಲು ಜಾಗದಲ್ಲಿ 2.76 ಲಕ್ಷ ಚದರ ಅಡಿ ವಿಸ್ತೀರ್ಣದ ಭವ್ಯ ವೇದಿಕೆ ನಿರ್ಮಿಸಲಾಗಿದೆ. ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಹೆಸರಿನಲ್ಲಿ ದ್ವಾರಬಾಗಿಲು ನಿರ್ಮಿಸಲಾಗಿದೆ.</p>.<p>ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಗರದ ಹೊರವಲಯದಲ್ಲಿರುವ ಅಜ್ಜಯಸ್ವಾಮಿ ದೇವಸ್ಥಾನ ಎದುರಿನ ಬಯಲು ಜಾಗದಲ್ಲಿ ಸಮಾವೇಶವಿದೆ. ರಾಜ್ಯದ ಹಲವು ಜಿಲ್ಲೆಗಳಿಂದ ಲಕ್ಷಕ್ಕೂ ಹೆಚ್ಚಿನ ಜನರು ಸಮಾವೇಶಕ್ಕೆ ಬರಲಿದ್ದಾರೆ. ಅವರ ವಾಹನಗಳ ನಿಲುಗಡೆಗೆ ಹಾಗೂ ಜನರ ಭದ್ರತೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.</p>.<p>ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ, ಸಮಾವೇಶದ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.</p>.<p>ಸಮಾವೇಶದ ಮುನ್ನಾದಿನವಾದ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾ ಎಸ್.ಪಿ. ಯಶೋದಾ ವಂಟಗೋಡಿ ಸಕಲ ಮಾಹಿತಿ ಪಡೆದುಕೊಂಡರು. ಪ್ರತಿಯೊಂದು ಸ್ಥಳಕ್ಕೂ ಭೇಟಿ ನೀಡಿದ ಜಿಲ್ಲಾಧಿಕಾರಿ, ಜನರ ಅನುಕೂಲಕ್ಕೆ ತಕ್ಕಂತೆ ವೇದಿಕೆ ಹಾಗೂ ಇತರ ಸೌಲಭ್ಯಗಳನ್ನು ಮಾರ್ಪಾಡು ಮಾಡಿಸಿದರು.</p>.<p>ಲಕ್ಷಕ್ಕೂ ಹೆಚ್ಚು ಜನರು ಸೇರುವುದರಿಂದ, ಅವರಿಗೆ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅವುಗಳಿಗೆ ಕಾಲ ಕಾಲಕ್ಕೆ ನೀರು ಸರಬರಾಜು ಮಾಡುವಂತೆಯೂ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಸಮಾವೇಶ ನಿರ್ವಹಣೆಗಾಗಿ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಾಹಕ ಸಮಿತಿ ರಚಿಸಲಾಗಿದೆ. ಹಣಕಾಸು, ಕಾನೂನು ಸುವ್ಯವಸ್ಥೆ ಮತ್ತು ಭದ್ರತೆ, ಮುಖ್ಯ ವೇದಿಕೆ ನಿರ್ಮಾಣ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಸಾರಿಗೆ ಮತ್ತು ಪಾರ್ಕಿಂಗ್ ವ್ಯವಸ್ಥೆ, ಹೆಲಿಪ್ಯಾಡ್ ನಿರ್ಮಾಣ, ಕಾರ್ಯಕ್ರಮ ನಿರ್ವಹಣಾ ಮತ್ತು ಮುಖ್ಯ ವೇದಿಕೆಯ ಶಿಷ್ಟಾಚಾರ, ಫಲಾನುಭವಿಗಳ ಆಸನ ವ್ಯವಸ್ಥೆ, ಸ್ವಚ್ಛತೆ ಮತ್ತು ನೈರ್ಮಲ್ಯ, ವಸತಿ, ಆರೋಗ್ಯ ಸಮಿತಿಗಳನ್ನು ರಚಿಸಲಾಗಿದೆ.</p>.<p>ಜನರಿಗೆ ಊಟ ಸಿದ್ಧಪಡಿಸುವ ಕೆಲಸ, ಸಮಾವೇಶದ ಮುನ್ನಾದಿನವಾದ ಶುಕ್ರವಾರದಿಂದಲೇ ಆರಂಭವಾಗಿದೆ. ವೇದಿಕೆ ಬಳಿಯೇ ಬೃಹತ್ ಪೆಂಡಾಲ್ ಹಾಕಿ ಅಡುಗೆ ಸಿದ್ಧತೆ ನಡೆಯುತ್ತಿದೆ. ಪಲಾವ್, ಲಾಡು, ಮೊಸರನ್ನ ತಯಾರಿ ಜೋರಾಗಿದೆ. ಊಟದ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದೆ.</p>.<p>ಹಾವೇರಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಜನರನ್ನು ಕರೆತರಲು ಬಸ್ ಸೇರಿ 1,090 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಜನರನ್ನು ಕರೆತರುವ ಜವಾಬ್ದಾರಿಗಳನ್ನು ಪಂಚಾಯಿತಿ ಹಾಗೂ ಕಂದಾಯ ಅಧಿಕಾರಿಗಳಿಗೆ ವಹಿಸಲಾಗಿದೆ.</p>.<p><strong>ಪೊಲೀಸರಿಗೆ ಖಡಕ್ ಸೂಚನೆ:</strong> ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ಮಂಗಳೂರು, ಬೆಂಗಳೂರು, ಬೆಳಗಾವಿ ಜಿಲ್ಲೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇವರೆಲ್ಲರ ಜೊತೆ ಸಮಾವೇಶದ ಸ್ಥಳದಲ್ಲಿ ಶುಕ್ರವಾರ ಸಭೆ ನಡೆಸಿದ ಎಸ್.ಪಿ. ಯಶೋದಾ ವಂಟಗೋಡಿ, ‘ಮುಖ್ಯಮಂತ್ರಿ ಪಾಲ್ಗೊಳ್ಳುವ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕೆಲಸ ಮಾಡಬೇಕು’ ಎಂದು ಖಡಕ್ ಸೂಚನೆ ನೀಡಿದರು.</p>.<p>‘ಸಮಾವೇಶಕ್ಕೆ ಲಕ್ಷಕ್ಕೂ ಹೆಚ್ಚು ಜನರು ಬರುತ್ತಾರೆ. ರಸ್ತೆಗಳಲ್ಲಿ ವಾಹನಗಳ ದಟ್ಟಣೆಯಾಗದಂತೆ, ಸಂಬಂಧಪಟ್ಟ ಪೊಲೀಸರು ನೋಡಿಕೊಳ್ಳಬೇಕು. ಪ್ರವೇಶ ದ್ವಾರ, ನಿರ್ಗಮನ ಹಾಗೂ ಇತರ ಕಡೆಗಳಲ್ಲಿಯೂ ಪೊಲೀಸರು ನಿಗಾ ವಹಿಸಬೇಕು. ಮುಖ್ಯಮಂತ್ರಿಗಳಿಗೆ ಮನವಿ ನೀಡಲು ಜನರು ಬರುತ್ತಾರೆ. ಅಂಥ ಸಂದರ್ಭದಲ್ಲಿಯೂ ಹೆಚ್ಚಿನ ಗಮನ ಹರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ತಾಕೀತು ಮಾಡಿದರು.</p>.<p><strong>ಮತ್ತೆ ಕಳಚಿಬಿದ್ದ ಪೆಂಡಾಲ್; ಪೊಲೀಸರು ಪಾರು</strong></p><p>ಸಾಧನಾ ಸಮಾವೇಶ ಹಾಗೂ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶಕ್ಕೆ ಹಾಕಿರುವ ಪೆಂಡಾಲ್ ಶುಕ್ರವಾರ ಮತ್ತೆ ಕಳಚಿ ಬಿದ್ದಿದೆ. ಸಮಾವೇಶದ ಭದ್ರತೆಗೆ ನಿಯೋಜನೆಗೊಂಡಿರುವ ಸಾವಿರಕ್ಕೂ ಹೆಚ್ಚು ಪೊಲೀಸರ ಹಾಜರಾತಿ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಗಾಳಿ ಬೀಸಿ ಪೆಂಡಾಲ್ ಕಳಚಿ ಬಿದ್ದಿದೆ. ಅದರ ಜೊತೆಯಲ್ಲಿಯೇ ಕಬ್ಬಿಣದ ಕಂಬಗಳು ತೇಲಾಡಿದವು.</p><p>ಗುರುವಾರವೂ ಪೆಂಡಾಲ್ ಕಳಚಿ ಬಿದ್ದು ಸುದ್ದಿ ವಾಹಿನಿಯೊಂದರ ಕ್ಯಾಮೆರಾಮನ್ ಮಲ್ಲೇಶ ಕಬ್ಬೂರ ಗಾಯಗೊಂಡಿದ್ದರು. ಈಗ ಶುಕ್ರವಾರ ಪುನಃ ಪೆಂಡಾಲ್ ಕಳಚಿ ಬಿದ್ದಿದೆ. ಫೆ. 14ರಂದು ಲಕ್ಷಕ್ಕೂ ಅಧಿಕ ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪೆಂಡಾಲ್ ಕಳಚಿ ಬಿದ್ದರೆ ದೊಡ್ಡ ಅನಾಹುತ ಉಂಟಾಗಬಹುದು.</p><p>ಎರಡೂ ಬಾರಿ ಪೆಂಡಾಲ್ ಕಳಚಿ ಬಿದ್ದರೂ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಜಿಲ್ಲಾ ಎಸ್.ಪಿ. ಯಶೋದಾ ವಂಟಗೋಡಿ ಹಾಗೂ ಇತರ ಅಧಿಕಾರಿಗಳು ಪೊಲೀಸರ ಹಾಜರಾತಿ ಪಡೆದು ಭದ್ರತಾ ಸೂಚನೆಗಳನ್ನು ನೀಡಿ ಸ್ಥಳದಿಂದ ತೆರಳಿದ್ದರು. ಈ ಸಂದರ್ಭದಲ್ಲಿ ಕೆಲ ಪೊಲೀಸರು ಮಾತ್ರ ಪೆಂಡಾಲ್ನಲ್ಲಿ ಇದ್ದರು. ಪೊಲೀಸರ ಸಮ್ಮುಖದಲ್ಲಿಯೇ ಪೆಂಡಾಲ್ ಕಳಚಿ ಬಿದ್ದಿದೆ. ಕಬ್ಬಿಣದ ಕಂಬಗಳು ಕುರ್ಚಿಗಳನ್ನು ಸೀಳಿ ಸಿಲುಕಿಕೊಂಡಿದ್ದು ಕಂಡುಬಂತು. ಗುತ್ತಿಗೆದಾರನ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂಬ ಆರೋಪವಿದೆ.</p>.<p><strong>ಸಚಿವರು ಶಾಸಕರ ಭೇಟಿ</strong></p><p>ಸಮಾವೇಶ ನಡೆಯುವ ಸ್ಥಳದಲ್ಲಿ ಹಲವು ದಿನಗಳಿಂದ ತಯಾರಿ ನಡೆಯುತ್ತಿದೆ. ಸಮಾವೇಶದ ಮುನ್ನಾದಿನವಾದ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವರು ಹಾಗೂ ಶಾಸಕರು ಅಂತಿಮ ಕೆಲಸಗಳನ್ನು ವೀಕ್ಷಿಸಿದರು. ಸ್ಥಳದಲ್ಲಿ ಕೆಲ ಮಾರ್ಪಾಡುಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಶಾಸಕರಾದ ಶ್ರೀನಿವಾಸ್ ಮಾನೆ ರುದ್ರಪ್ಪ ಲಮಾಣಿ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆ, ರಾಜ್ಯ ಸರ್ಕಾರದ ‘ಭೂ ಗ್ಯಾರಂಟಿ’ಯ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಮದುವಣಗಿತ್ತಿಯಂತೆ ಸಿದ್ಧವಾಗಿದೆ.</p>.<p>ಫೆ. 14ರಂದು ಬೆಳಿಗ್ಗೆ 11ಕ್ಕೆ ‘ರಾಜ್ಯ ಸರ್ಕಾರದ ಸಾಧನಾ ಸಮಾವೇಶ’ ಹಾಗೂ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಜರುಗಲಿದ್ದು, ಇದೇ ಸಂದರ್ಭದಲ್ಲಿ ರಾಜ್ಯದ 1 ಲಕ್ಷಕ್ಕೂ ಹೆಚ್ಚು ಜನರ ಭೂ ಮಾಲೀಕತ್ವದ ಕನಸು ನನಸಾಗಲಿದೆ.</p>.<p>ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಸಾವಿರ ದಿನಗಳ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಒಂದು ಲಕ್ಷ ಜನರಿಗೆ ಫೆ. 14ರಂದು ಭೂ ಗ್ಯಾರಂಟಿ ನೀಡಲು ಭವ್ಯ ವೇದಿಕೆ ಸಿದ್ಧಪಡಿಸಿದೆ.</p>.<p>86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದ್ದ ಬಯಲು ಜಾಗದಲ್ಲಿ 2.76 ಲಕ್ಷ ಚದರ ಅಡಿ ವಿಸ್ತೀರ್ಣದ ಭವ್ಯ ವೇದಿಕೆ ನಿರ್ಮಿಸಲಾಗಿದೆ. ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಹೆಸರಿನಲ್ಲಿ ದ್ವಾರಬಾಗಿಲು ನಿರ್ಮಿಸಲಾಗಿದೆ.</p>.<p>ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಗರದ ಹೊರವಲಯದಲ್ಲಿರುವ ಅಜ್ಜಯಸ್ವಾಮಿ ದೇವಸ್ಥಾನ ಎದುರಿನ ಬಯಲು ಜಾಗದಲ್ಲಿ ಸಮಾವೇಶವಿದೆ. ರಾಜ್ಯದ ಹಲವು ಜಿಲ್ಲೆಗಳಿಂದ ಲಕ್ಷಕ್ಕೂ ಹೆಚ್ಚಿನ ಜನರು ಸಮಾವೇಶಕ್ಕೆ ಬರಲಿದ್ದಾರೆ. ಅವರ ವಾಹನಗಳ ನಿಲುಗಡೆಗೆ ಹಾಗೂ ಜನರ ಭದ್ರತೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.</p>.<p>ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ, ಸಮಾವೇಶದ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.</p>.<p>ಸಮಾವೇಶದ ಮುನ್ನಾದಿನವಾದ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾ ಎಸ್.ಪಿ. ಯಶೋದಾ ವಂಟಗೋಡಿ ಸಕಲ ಮಾಹಿತಿ ಪಡೆದುಕೊಂಡರು. ಪ್ರತಿಯೊಂದು ಸ್ಥಳಕ್ಕೂ ಭೇಟಿ ನೀಡಿದ ಜಿಲ್ಲಾಧಿಕಾರಿ, ಜನರ ಅನುಕೂಲಕ್ಕೆ ತಕ್ಕಂತೆ ವೇದಿಕೆ ಹಾಗೂ ಇತರ ಸೌಲಭ್ಯಗಳನ್ನು ಮಾರ್ಪಾಡು ಮಾಡಿಸಿದರು.</p>.<p>ಲಕ್ಷಕ್ಕೂ ಹೆಚ್ಚು ಜನರು ಸೇರುವುದರಿಂದ, ಅವರಿಗೆ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅವುಗಳಿಗೆ ಕಾಲ ಕಾಲಕ್ಕೆ ನೀರು ಸರಬರಾಜು ಮಾಡುವಂತೆಯೂ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಸಮಾವೇಶ ನಿರ್ವಹಣೆಗಾಗಿ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಾಹಕ ಸಮಿತಿ ರಚಿಸಲಾಗಿದೆ. ಹಣಕಾಸು, ಕಾನೂನು ಸುವ್ಯವಸ್ಥೆ ಮತ್ತು ಭದ್ರತೆ, ಮುಖ್ಯ ವೇದಿಕೆ ನಿರ್ಮಾಣ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಸಾರಿಗೆ ಮತ್ತು ಪಾರ್ಕಿಂಗ್ ವ್ಯವಸ್ಥೆ, ಹೆಲಿಪ್ಯಾಡ್ ನಿರ್ಮಾಣ, ಕಾರ್ಯಕ್ರಮ ನಿರ್ವಹಣಾ ಮತ್ತು ಮುಖ್ಯ ವೇದಿಕೆಯ ಶಿಷ್ಟಾಚಾರ, ಫಲಾನುಭವಿಗಳ ಆಸನ ವ್ಯವಸ್ಥೆ, ಸ್ವಚ್ಛತೆ ಮತ್ತು ನೈರ್ಮಲ್ಯ, ವಸತಿ, ಆರೋಗ್ಯ ಸಮಿತಿಗಳನ್ನು ರಚಿಸಲಾಗಿದೆ.</p>.<p>ಜನರಿಗೆ ಊಟ ಸಿದ್ಧಪಡಿಸುವ ಕೆಲಸ, ಸಮಾವೇಶದ ಮುನ್ನಾದಿನವಾದ ಶುಕ್ರವಾರದಿಂದಲೇ ಆರಂಭವಾಗಿದೆ. ವೇದಿಕೆ ಬಳಿಯೇ ಬೃಹತ್ ಪೆಂಡಾಲ್ ಹಾಕಿ ಅಡುಗೆ ಸಿದ್ಧತೆ ನಡೆಯುತ್ತಿದೆ. ಪಲಾವ್, ಲಾಡು, ಮೊಸರನ್ನ ತಯಾರಿ ಜೋರಾಗಿದೆ. ಊಟದ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದೆ.</p>.<p>ಹಾವೇರಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಜನರನ್ನು ಕರೆತರಲು ಬಸ್ ಸೇರಿ 1,090 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಜನರನ್ನು ಕರೆತರುವ ಜವಾಬ್ದಾರಿಗಳನ್ನು ಪಂಚಾಯಿತಿ ಹಾಗೂ ಕಂದಾಯ ಅಧಿಕಾರಿಗಳಿಗೆ ವಹಿಸಲಾಗಿದೆ.</p>.<p><strong>ಪೊಲೀಸರಿಗೆ ಖಡಕ್ ಸೂಚನೆ:</strong> ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ಮಂಗಳೂರು, ಬೆಂಗಳೂರು, ಬೆಳಗಾವಿ ಜಿಲ್ಲೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇವರೆಲ್ಲರ ಜೊತೆ ಸಮಾವೇಶದ ಸ್ಥಳದಲ್ಲಿ ಶುಕ್ರವಾರ ಸಭೆ ನಡೆಸಿದ ಎಸ್.ಪಿ. ಯಶೋದಾ ವಂಟಗೋಡಿ, ‘ಮುಖ್ಯಮಂತ್ರಿ ಪಾಲ್ಗೊಳ್ಳುವ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕೆಲಸ ಮಾಡಬೇಕು’ ಎಂದು ಖಡಕ್ ಸೂಚನೆ ನೀಡಿದರು.</p>.<p>‘ಸಮಾವೇಶಕ್ಕೆ ಲಕ್ಷಕ್ಕೂ ಹೆಚ್ಚು ಜನರು ಬರುತ್ತಾರೆ. ರಸ್ತೆಗಳಲ್ಲಿ ವಾಹನಗಳ ದಟ್ಟಣೆಯಾಗದಂತೆ, ಸಂಬಂಧಪಟ್ಟ ಪೊಲೀಸರು ನೋಡಿಕೊಳ್ಳಬೇಕು. ಪ್ರವೇಶ ದ್ವಾರ, ನಿರ್ಗಮನ ಹಾಗೂ ಇತರ ಕಡೆಗಳಲ್ಲಿಯೂ ಪೊಲೀಸರು ನಿಗಾ ವಹಿಸಬೇಕು. ಮುಖ್ಯಮಂತ್ರಿಗಳಿಗೆ ಮನವಿ ನೀಡಲು ಜನರು ಬರುತ್ತಾರೆ. ಅಂಥ ಸಂದರ್ಭದಲ್ಲಿಯೂ ಹೆಚ್ಚಿನ ಗಮನ ಹರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ತಾಕೀತು ಮಾಡಿದರು.</p>.<p><strong>ಮತ್ತೆ ಕಳಚಿಬಿದ್ದ ಪೆಂಡಾಲ್; ಪೊಲೀಸರು ಪಾರು</strong></p><p>ಸಾಧನಾ ಸಮಾವೇಶ ಹಾಗೂ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶಕ್ಕೆ ಹಾಕಿರುವ ಪೆಂಡಾಲ್ ಶುಕ್ರವಾರ ಮತ್ತೆ ಕಳಚಿ ಬಿದ್ದಿದೆ. ಸಮಾವೇಶದ ಭದ್ರತೆಗೆ ನಿಯೋಜನೆಗೊಂಡಿರುವ ಸಾವಿರಕ್ಕೂ ಹೆಚ್ಚು ಪೊಲೀಸರ ಹಾಜರಾತಿ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಗಾಳಿ ಬೀಸಿ ಪೆಂಡಾಲ್ ಕಳಚಿ ಬಿದ್ದಿದೆ. ಅದರ ಜೊತೆಯಲ್ಲಿಯೇ ಕಬ್ಬಿಣದ ಕಂಬಗಳು ತೇಲಾಡಿದವು.</p><p>ಗುರುವಾರವೂ ಪೆಂಡಾಲ್ ಕಳಚಿ ಬಿದ್ದು ಸುದ್ದಿ ವಾಹಿನಿಯೊಂದರ ಕ್ಯಾಮೆರಾಮನ್ ಮಲ್ಲೇಶ ಕಬ್ಬೂರ ಗಾಯಗೊಂಡಿದ್ದರು. ಈಗ ಶುಕ್ರವಾರ ಪುನಃ ಪೆಂಡಾಲ್ ಕಳಚಿ ಬಿದ್ದಿದೆ. ಫೆ. 14ರಂದು ಲಕ್ಷಕ್ಕೂ ಅಧಿಕ ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪೆಂಡಾಲ್ ಕಳಚಿ ಬಿದ್ದರೆ ದೊಡ್ಡ ಅನಾಹುತ ಉಂಟಾಗಬಹುದು.</p><p>ಎರಡೂ ಬಾರಿ ಪೆಂಡಾಲ್ ಕಳಚಿ ಬಿದ್ದರೂ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಜಿಲ್ಲಾ ಎಸ್.ಪಿ. ಯಶೋದಾ ವಂಟಗೋಡಿ ಹಾಗೂ ಇತರ ಅಧಿಕಾರಿಗಳು ಪೊಲೀಸರ ಹಾಜರಾತಿ ಪಡೆದು ಭದ್ರತಾ ಸೂಚನೆಗಳನ್ನು ನೀಡಿ ಸ್ಥಳದಿಂದ ತೆರಳಿದ್ದರು. ಈ ಸಂದರ್ಭದಲ್ಲಿ ಕೆಲ ಪೊಲೀಸರು ಮಾತ್ರ ಪೆಂಡಾಲ್ನಲ್ಲಿ ಇದ್ದರು. ಪೊಲೀಸರ ಸಮ್ಮುಖದಲ್ಲಿಯೇ ಪೆಂಡಾಲ್ ಕಳಚಿ ಬಿದ್ದಿದೆ. ಕಬ್ಬಿಣದ ಕಂಬಗಳು ಕುರ್ಚಿಗಳನ್ನು ಸೀಳಿ ಸಿಲುಕಿಕೊಂಡಿದ್ದು ಕಂಡುಬಂತು. ಗುತ್ತಿಗೆದಾರನ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂಬ ಆರೋಪವಿದೆ.</p>.<p><strong>ಸಚಿವರು ಶಾಸಕರ ಭೇಟಿ</strong></p><p>ಸಮಾವೇಶ ನಡೆಯುವ ಸ್ಥಳದಲ್ಲಿ ಹಲವು ದಿನಗಳಿಂದ ತಯಾರಿ ನಡೆಯುತ್ತಿದೆ. ಸಮಾವೇಶದ ಮುನ್ನಾದಿನವಾದ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವರು ಹಾಗೂ ಶಾಸಕರು ಅಂತಿಮ ಕೆಲಸಗಳನ್ನು ವೀಕ್ಷಿಸಿದರು. ಸ್ಥಳದಲ್ಲಿ ಕೆಲ ಮಾರ್ಪಾಡುಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಶಾಸಕರಾದ ಶ್ರೀನಿವಾಸ್ ಮಾನೆ ರುದ್ರಪ್ಪ ಲಮಾಣಿ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>