ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಉತ್ತರ ಕನ್ನಡ ಮತ್ತು ಹಾವೇರಿಯಲ್ಲಿ ಯೋಜನೆಯ ಪರ ಮತ್ತು ವಿರುದ್ಧ ಹೋರಾಟಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಪಶ್ಚಿಮ ಘಟ್ಟದ ಸಂರಕ್ಷಣೆ ಒಂದು ಕಡೆ, ಬರಪೀಡಿತ ಜಿಲ್ಲೆಗಳಿಗೆ ನೀರು ಹರಿಸಬೇಕು ಎನ್ನುವುದು ಮತ್ತೊಂದು ಕಡೆಯ ವಾದವಾಗಿದೆ. ಒಂದು ಕಡೆ ನಾನು ಯಲ್ಲಾಪುರ–ಮುಂಡಗೋಡ ಕ್ಷೇತ್ರದ ಶಾಸಕ. ಮತ್ತೊಂದು ಕಡೆ ಈ ಯೋಜನೆಯ ಫಲಾನುಭವಿ ಜಿಲ್ಲೆಯಾದ ಹಾವೇರಿಯ ಜಿಲ್ಲಾ ಉಸ್ತುವಾರಿ ಸಚಿವ. ಹೀಗಾಗಿ ನಾನು ಗೊಂದಲದಲ್ಲಿದ್ದೇನೆ ಎಂದು ಹೇಳಿದರು.