<p><strong>ಹಾವೇರಿ: </strong>ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿ ‘ಕೈ’ ವಶವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರತವರು ಜಿಲ್ಲೆ ಹಾವೇರಿಯಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿ–ಸವಣೂರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ‘ಬಂಕಾಪುರ ಪುರಸಭೆ’ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ, ಆಡಳಿತ ಚುಕ್ಕಾಣಿ ಹಿಡಿಯಲು ಸ್ಪಷ್ಟ ಬಹುಮತ ಪಡೆದಿದೆ. ಒಟ್ಟು 23 ಸ್ಥಾನಗಳಲ್ಲಿ ಕಾಂಗ್ರೆಸ್ 14, ಬಿಜೆಪಿ 7 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಸ್ಥಾನ ಗಳಿಸಿದ್ದಾರೆ.</p>.<p>2014ರಿಂದ 2019ರವರೆಗಿನ ಅವಧಿಯಲ್ಲಿ ಕಾಂಗ್ರೆಸ್ 14, ಬಿಜೆಪಿ 8, ಪಕ್ಷೇತರ ಅಭ್ಯರ್ಥಿಗೆ 1 ಸ್ಥಾನ ದೊರಕಿತ್ತು.<br />ಹೀಗಾಗಿ ಮೂರೂವರೆ ವರ್ಷ ಕಾಂಗ್ರೆಸ್ ಹಾಗೂ ಒಂದೂವರೆ ವರ್ಷ ಬಿಜೆಪಿ ಆಡಳಿತ ನಡೆಸಿತ್ತು.</p>.<p>‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಂಡ ಅಭಿವೃದ್ಧಿ ಕಾರ್ಯಗಳಿಗಾಗಿ ಮತದಾರರು ನಮ್ಮನ್ನು ಬೆಂಬಲಿಸಿದ್ದಾರೆ. ಸ್ಪಷ್ಟ ಬಹುಮತ ದೊರೆತಿದ್ದು, ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿಯಲಿದೆ’ ಎಂದು ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್.ವೆಂಕೋಜಿ ಸಂತಸ ವ್ಯಕ್ತಪಡಿಸಿದರು.</p>.<p><strong>ಗುತ್ತಲ ಪಟ್ಟಣ ಪಂಚಾಯಿತಿ ‘ಕೈ’ ವಶ</strong><br />ಹಾವೇರಿ ತಾಲ್ಲೂಕಿನ ಗುತ್ತಲ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದ್ದು, ಬಿಜೆಪಿಗೆ ನಿರಾಸೆಯಾಗಿದೆ. ಒಟ್ಟು 18 ಸ್ಥಾನಗಳಲ್ಲಿ ಕಾಂಗ್ರೆಸ್ 11, ಬಿಜೆಪಿ 6 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನವನ್ನು ಗೆದ್ದುಕೊಂಡಿದ್ದಾರೆ.</p>.<p>2014ರಿಂದ 2019ರವರೆಗಿನ ಅವಧಿಯಲ್ಲಿ ಗುತ್ತಲ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಆಡಳಿತವಿತ್ತು. ಈ ಬಾರಿಯ ಚುನಾವಣೆಯಲ್ಲೂ ಸ್ಪಷ್ಟ ಬಹುಮತ ಗಳಿಸುವ ಮೂಲಕ ಮತ್ತೆ ಪಟ್ಟಣ ಪಂಚಾಯಿತಿ ‘ಕೈ’ ವಶವಾಗಿದೆ.</p>.<p><strong>ಹಾನಗಲ್ ಪುರಸಭೆ: ಪಕ್ಷೇತರ ಅಭ್ಯರ್ಥಿ ಗೆಲುವು</strong><br />ಹಾನಗಲ್ ಪುರಸಭೆಯ 19ನೇ ವಾರ್ಡ್ಗೆ ನಡೆದ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಮತ್ತು ಬಿಜೆಪಿಯ ಅಭ್ಯರ್ಥಿಯನ್ನು ಮಣಿಸಿ, ಪಕ್ಷೇತರ ಅಭ್ಯರ್ಥಿ ಜಮೀರ್ ಕೆ.ಶೇಖ್ ಜಯ ಗಳಿಸಿದ್ದಾರೆ.</p>.<p>19ನೇ ವಾರ್ಡ್ ಕಾಂಗ್ರೆಸ್ ಸದಸ್ಯರಾಗಿದ್ದ ನಜೀರ್ ಅಹಮದ್ ಸವಣೂರ ಇವರು ರಾಜೀನಾಮೆ ನೀಡಿ, ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತಿದ್ದಾರೆ. ಈ ಕಾರಣದಿಂದ ತೆರವಾದ 19ನೇ ವಾರ್ಡ್ಗೆ ಚುನಾವಣೆ ನಡೆದಿತ್ತು. ಒಟ್ಟು 23 ಸ್ಥಾನಗಳಲ್ಲಿ ಪ್ರಸ್ತುತ ಕಾಂಗ್ರೆಸ್ 18, ಬಿಜೆಪಿ 4, ಹಾಗೂ ಪಕ್ಷೇತರ 1 ಸದಸ್ಯರ ಬಲಾಬಲವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿ ‘ಕೈ’ ವಶವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರತವರು ಜಿಲ್ಲೆ ಹಾವೇರಿಯಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿ–ಸವಣೂರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ‘ಬಂಕಾಪುರ ಪುರಸಭೆ’ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ, ಆಡಳಿತ ಚುಕ್ಕಾಣಿ ಹಿಡಿಯಲು ಸ್ಪಷ್ಟ ಬಹುಮತ ಪಡೆದಿದೆ. ಒಟ್ಟು 23 ಸ್ಥಾನಗಳಲ್ಲಿ ಕಾಂಗ್ರೆಸ್ 14, ಬಿಜೆಪಿ 7 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಸ್ಥಾನ ಗಳಿಸಿದ್ದಾರೆ.</p>.<p>2014ರಿಂದ 2019ರವರೆಗಿನ ಅವಧಿಯಲ್ಲಿ ಕಾಂಗ್ರೆಸ್ 14, ಬಿಜೆಪಿ 8, ಪಕ್ಷೇತರ ಅಭ್ಯರ್ಥಿಗೆ 1 ಸ್ಥಾನ ದೊರಕಿತ್ತು.<br />ಹೀಗಾಗಿ ಮೂರೂವರೆ ವರ್ಷ ಕಾಂಗ್ರೆಸ್ ಹಾಗೂ ಒಂದೂವರೆ ವರ್ಷ ಬಿಜೆಪಿ ಆಡಳಿತ ನಡೆಸಿತ್ತು.</p>.<p>‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಂಡ ಅಭಿವೃದ್ಧಿ ಕಾರ್ಯಗಳಿಗಾಗಿ ಮತದಾರರು ನಮ್ಮನ್ನು ಬೆಂಬಲಿಸಿದ್ದಾರೆ. ಸ್ಪಷ್ಟ ಬಹುಮತ ದೊರೆತಿದ್ದು, ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿಯಲಿದೆ’ ಎಂದು ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್.ವೆಂಕೋಜಿ ಸಂತಸ ವ್ಯಕ್ತಪಡಿಸಿದರು.</p>.<p><strong>ಗುತ್ತಲ ಪಟ್ಟಣ ಪಂಚಾಯಿತಿ ‘ಕೈ’ ವಶ</strong><br />ಹಾವೇರಿ ತಾಲ್ಲೂಕಿನ ಗುತ್ತಲ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದ್ದು, ಬಿಜೆಪಿಗೆ ನಿರಾಸೆಯಾಗಿದೆ. ಒಟ್ಟು 18 ಸ್ಥಾನಗಳಲ್ಲಿ ಕಾಂಗ್ರೆಸ್ 11, ಬಿಜೆಪಿ 6 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನವನ್ನು ಗೆದ್ದುಕೊಂಡಿದ್ದಾರೆ.</p>.<p>2014ರಿಂದ 2019ರವರೆಗಿನ ಅವಧಿಯಲ್ಲಿ ಗುತ್ತಲ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಆಡಳಿತವಿತ್ತು. ಈ ಬಾರಿಯ ಚುನಾವಣೆಯಲ್ಲೂ ಸ್ಪಷ್ಟ ಬಹುಮತ ಗಳಿಸುವ ಮೂಲಕ ಮತ್ತೆ ಪಟ್ಟಣ ಪಂಚಾಯಿತಿ ‘ಕೈ’ ವಶವಾಗಿದೆ.</p>.<p><strong>ಹಾನಗಲ್ ಪುರಸಭೆ: ಪಕ್ಷೇತರ ಅಭ್ಯರ್ಥಿ ಗೆಲುವು</strong><br />ಹಾನಗಲ್ ಪುರಸಭೆಯ 19ನೇ ವಾರ್ಡ್ಗೆ ನಡೆದ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಮತ್ತು ಬಿಜೆಪಿಯ ಅಭ್ಯರ್ಥಿಯನ್ನು ಮಣಿಸಿ, ಪಕ್ಷೇತರ ಅಭ್ಯರ್ಥಿ ಜಮೀರ್ ಕೆ.ಶೇಖ್ ಜಯ ಗಳಿಸಿದ್ದಾರೆ.</p>.<p>19ನೇ ವಾರ್ಡ್ ಕಾಂಗ್ರೆಸ್ ಸದಸ್ಯರಾಗಿದ್ದ ನಜೀರ್ ಅಹಮದ್ ಸವಣೂರ ಇವರು ರಾಜೀನಾಮೆ ನೀಡಿ, ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತಿದ್ದಾರೆ. ಈ ಕಾರಣದಿಂದ ತೆರವಾದ 19ನೇ ವಾರ್ಡ್ಗೆ ಚುನಾವಣೆ ನಡೆದಿತ್ತು. ಒಟ್ಟು 23 ಸ್ಥಾನಗಳಲ್ಲಿ ಪ್ರಸ್ತುತ ಕಾಂಗ್ರೆಸ್ 18, ಬಿಜೆಪಿ 4, ಹಾಗೂ ಪಕ್ಷೇತರ 1 ಸದಸ್ಯರ ಬಲಾಬಲವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>