ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಡೆತ್ತುಗಳಾದ ಸಿದ್ದರಾಮಯ್ಯ– ಡಿಕೆಶಿ ಕಳ್ಳೆತ್ತುಗಳಾಗಿದ್ದಾರೆ: ಶ್ರೀರಾಮುಲು

ಜನಸ್ವರಾಜ್‌ ಕಾರ್ಯಕ್ರಮ
Last Updated 18 ನವೆಂಬರ್ 2021, 15:15 IST
ಅಕ್ಷರ ಗಾತ್ರ

ಹಾವೇರಿ: ಉಪಚುನಾವಣೆಯಲ್ಲಿ ಹಾನಗಲ್‌ ಒಂದು ಕ್ಷೇತ್ರವನ್ನು ಗೆದ್ದಿದ್ದಕ್ಕೆ ಕಾಂಗ್ರೆಸ್ ನಾಯಕರು ಹಾರಾಡುತ್ತಾ ಜಿಗಿದಾಡುತ್ತಿದ್ದಾರೆ. ಈ ಗೆಲುವು ಹುಚ್ಚರ ಕೈಯಲ್ಲಿ ಕಲ್ಲು ಕೊಟ್ಟಂತಾಗಿದೆ. ನಾವು ಕೂಡ ಸಿಂಧಗಿ ಕ್ಷೇತ್ರವನ್ನು ಗೆದ್ದಿದ್ದೇವೆ ಎಂಬುದನ್ನು ಮರೆತಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದರು.

ಬ್ಯಾಡಗಿ ತಾಲ್ಲೂಕು ಕಾಗಿನೆಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಜನಸ್ವರಾಜ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹಾವೇರಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಮಾತ್ರ ನಾವು ಕಳೆದುಕೊಂಡಿದ್ದೇವೆ. ಜನರು ಮನಸು ಮಾಡಿದರೆ 2023ರ ಚುನಾವಣೆಯಲ್ಲಿ ಅದೇ ಕ್ಷೇತ್ರದಲ್ಲಿ ಮತ್ತೆ ಕೇಸರಿ ಬಾವುಟ ಹಾರುತ್ತದೆ ಎಂದರು.

ಕಾಂಗ್ರೆಸ್‌ ಜೋಡೆತ್ತುಗಳಲ್ಲಿ (ಸಿದ್ದರಾಮಯ್ಯ–ಡಿ.ಕೆ.ಶಿವಕುಮಾರ್‌) ಅಧಿಕಾರಕ್ಕಾಗಿ ಒಳಗೊಳಗೆ ಕಿತ್ತಾಟ ನಡೆಯುತ್ತಿದೆ. ಆ ಜೋಡೆತ್ತು ಕಳ್ಳೆತ್ತುಗಳಾಗಿವೆ. ಗಂಡ–ಹೆಂಡತಿ ಜಗಳದಲ್ಲಿ ಕೂಸು ಬಡವಾದಂತೆ, ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಬಡವಾಗಲಿದ್ದಾರೆ ಎಂದು ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT