ಪ್ರಸಕ್ತ ವರ್ಷ ಮಳೆಯಿಂದ ಇದುವರೆಗೆ 14,653 ಹೆಕ್ಟೇರ್ ಕೃಷಿ ಬೆಳೆ, 2,520 ಹೆಕ್ಟೇರ್ ತೋಟಗಾರಿಕಾ ಬೆಳೆ ಸೇರಿದಂತೆ ಒಟ್ಟು 17,173 ಹೆಕ್ಟೇರ್ ಬೆಳೆ ನಾಶವಾಗಿದೆ. 2667 ಮನೆಗಳು ಭಾಗಶಃ ಮತ್ತು 25 ಮನೆಗಳು ಸಂಪೂರ್ಣ ಹಾನಿಯಾಗಿವೆ. ಜತೆಗೆ ಐವರು ವ್ಯಕ್ತಿಗಳು ಹಾಗೂ ನಾಲ್ಕು ಜಾನುವಾರು ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾಹಿತಿ ನೀಡಿದ್ದಾರೆ.