ಕಾರ್ಣಿಕ ನುಡಿಯುವ ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರನ್ನು ಅಜ್ಜನವರು ಎಂದೇ ಸಂಬೋಧಿಸುತ್ತಾರೆ. ಅವರು9 ದಿನಗಳವರೆಗೆ ಹಾಲು ಮತ್ತು ಹಣ್ಣುಗಳನ್ನು ಮಾತ್ರ ಸೇವಿಸಿ ಉಪವಾಸ ವೃತ ಆಚರಿಸುತ್ತಾರೆ. ಕಾರ್ಣಿಕದ ದಿನದಂದು ಅಂದಾಜು 25 ಅಡಿ ಎತ್ತರದ ಬಿಲ್ಲನ್ನೇರಿ, ಸುತ್ತಲೂ ನೋಡಿ ಜನಸಾಗರದ ಮಧ್ಯೆ ಕಾರ್ಣಿಕ ನುಡಿದು, ಕೆಳಗೆ ಬೀಳುವುದು ವಾಡಿಕೆ. ಕಾರ್ಣಿಕದ ನುಡಿಯನ್ನು ಮಳೆ -ಬೆಳೆ, ರೈತ, ಸಮಾಜ, ರಾಜಕೀಯ ಮತ್ತಿತರ ಆಯಾಮಗಳ ಮೇಲೆ ವಿಶ್ಲೇಷಿಸಲಾಗುತ್ತದೆ. ಈ ಬಾರಿಯ ನುಡಿಯು ಜನತೆಗೆ ಖುಷಿ ನೀಡಿದೆ.