<p><strong>ಹಾವೇರಿ:</strong> ‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗಳನ್ನು ಕೇಳಿದರೆ ಅವರು ಪರಿಪಕ್ವ ರಾಜಕಾರಣಿಯಲ್ಲ, ಇನ್ನೂ ಹುಡುಗುತನದ ಬುದ್ಧಿ ಇದೆ ಅನಿಸುತ್ತದೆ’ ಎಂದು ಕಾಂಗ್ರೆಸ್ ಧುರೀಣ ಕೆ.ಬಿ.ಕೋಳಿವಾಡ ಟೀಕಿಸಿದರು.</p>.<p>ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು 20–20 ಸರ್ಕಾರ ರಚನೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ತಮ್ಮ ಅವಧಿಯ ನಂತರ ಬಿ.ಎಸ್. ಯಡಿಯೂರಪ್ಪನವರಿಗೆ ಅಧಿಕಾರ ಬಿಟ್ಟುಕೊಡದೆ ಪಟ್ಟು ಹಿಡಿದರು. ತಮ್ಮ ಮನಸ್ಸಿಗೆ ಬಂದಂತೆ ಮಾತನಾಡುವ ಕುಮಾರಸ್ವಾಮಿ ಹೇಳಿಕೆ ಸಮಂಜಸವಲ್ಲ ಎಂದು ತಿರುಗೇಟು ನೀಡಿದರು.</p>.<p>ಯಾರದೋ ಹೆಗಲ ಮೇಲೆ ಕುಳಿತು ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ಎಂದು ಸ್ವಂತ ಶಕ್ತಿಯಿಂದ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರಿಂದ ಕಣ್ಣೀರು ಹಾಕಿದ್ದೀನಿ ಎಂಬ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು. ಅವರೊಬ್ಬ ‘ಹಿಟ್ ಅಂಡ್ ರನ್’ ಮನುಷ್ಯ ಎಂದು ಆರೋಪಿಸಿದರು.</p>.<p>‘ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದು ನಮ್ಮ (ಕಾಂಗ್ರೆಸ್) ತಪ್ಪು ಎಂದು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗಳನ್ನು ಕೇಳಿದರೆ ಅವರು ಪರಿಪಕ್ವ ರಾಜಕಾರಣಿಯಲ್ಲ, ಇನ್ನೂ ಹುಡುಗುತನದ ಬುದ್ಧಿ ಇದೆ ಅನಿಸುತ್ತದೆ’ ಎಂದು ಕಾಂಗ್ರೆಸ್ ಧುರೀಣ ಕೆ.ಬಿ.ಕೋಳಿವಾಡ ಟೀಕಿಸಿದರು.</p>.<p>ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು 20–20 ಸರ್ಕಾರ ರಚನೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ತಮ್ಮ ಅವಧಿಯ ನಂತರ ಬಿ.ಎಸ್. ಯಡಿಯೂರಪ್ಪನವರಿಗೆ ಅಧಿಕಾರ ಬಿಟ್ಟುಕೊಡದೆ ಪಟ್ಟು ಹಿಡಿದರು. ತಮ್ಮ ಮನಸ್ಸಿಗೆ ಬಂದಂತೆ ಮಾತನಾಡುವ ಕುಮಾರಸ್ವಾಮಿ ಹೇಳಿಕೆ ಸಮಂಜಸವಲ್ಲ ಎಂದು ತಿರುಗೇಟು ನೀಡಿದರು.</p>.<p>ಯಾರದೋ ಹೆಗಲ ಮೇಲೆ ಕುಳಿತು ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ಎಂದು ಸ್ವಂತ ಶಕ್ತಿಯಿಂದ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರಿಂದ ಕಣ್ಣೀರು ಹಾಕಿದ್ದೀನಿ ಎಂಬ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು. ಅವರೊಬ್ಬ ‘ಹಿಟ್ ಅಂಡ್ ರನ್’ ಮನುಷ್ಯ ಎಂದು ಆರೋಪಿಸಿದರು.</p>.<p>‘ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದು ನಮ್ಮ (ಕಾಂಗ್ರೆಸ್) ತಪ್ಪು ಎಂದು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>