ಸಭೆಯಲ್ಲಿ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ಗಳು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮಾಹಿತಿ ನೀಡಿದರು
ಸಾರ್ವಜನಿಕರು ಜಮೀನ ಅಳತೆಗಾಗಿ 12 ತಿಂಗಳು ಕಾಯಬೇಕಿತ್ತು. ನಮ್ಮ ಸರ್ಕಾರ ಬಂದ ನಂತರ 2 ತಿಂಗಳೊಳಗೆ ಅಳತೆ ಮಾಡಿಕೊಡಲು ಕ್ರಮವಹಿಸಲಾಗಿದೆ. 1 ತಿಂಗಳೊಳಗೆ ಸೇವೆ ಒದಗಿಸುವ ಗುರಿಯಿದೆ.
– ಕೃಷ್ಣ ಬೈರೇಗೌಡ ಕಂದಾಯ ಸಚಿವ
ನೀರಿನ ಸಮಸ್ಯೆ ಪರಿಹರಿಸಿ: ‘ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿ ಮಾಲೀಕರೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳಿ. ಸರ್ಕಾರದ ಹಂತದಲ್ಲಿ ಈ ವರ್ಷ ಖಾಸಗಿ ಕೊಳವೆಬಾವಿಗಳ ಮಾಸಿಕ ಬಾಡಿಗೆ ದರವನ್ನು ಹೆಚ್ಚಳ ಮಾಡಲು ಕ್ರಮವಹಿಸಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಮಾತನಾಡಿ ಹಾವೇರಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ ಕರೆಯಬೇಕು. ನಾವೆಲ್ಲ ಭಾಗವಹಿಸುತ್ತೇವೆ. ಶಾಶ್ವತ ಪರಿಹಾರ ಕಂಡುಕೊಳ್ಳಲು ಮನವಿ ಮಾಡಿಕೊಂಡರು. ಮೇ ಜೂನ್ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಬಹುದು. ಈ ನಿಟ್ಟಿನಲ್ಲಿ ಸರಿಯಾಗಿ ಕ್ರಮವಹಿಸಿ. ಜನರ ಸಮಸ್ಯೆಗಳಿಗೆ ಅಧಿಕಾರಿಗಳ ಹಂತದಲ್ಲೇ ಪರಿಹಾರ ಒದಗಿಸಬೇಕು. ಜನಪ್ರತಿನಿಧಿಗಳ ಬಳಿ ಜನರನ್ನು ಕಳುಹಿಸುವ ಮನೋಭಾವ ಅಧಿಕಾರಿಗಳು ಕೈ ಬಿಡಬೇಕು ಎಂದು ಸೂಚನೆ ನೀಡಿದರು. ಹಾವೇರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ನಿವಾರಣೆಗೆ ಬೆಂಗಳೂರು ಹಂತದಲ್ಲಿ ಪ್ರತ್ಯೇಕ ಸಭೆ ಕರೆಯುವಂತೆ ಕಂದಾಯ ಸಚಿವರಿಗೆ ಮನವಿ ಮಾಡಿಕೊಂಡರು.
‘ಬೆಳೆ ಸಮೀಕ್ಷೆಯಲ್ಲಿ ಲೋಪವಾಗದಿರಲಿ’ ಬೆಳೆಹಾನಿ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಬಾರದು. ಸಮೀಕ್ಷೆ ಕಾರ್ಯ ಪೂರ್ಣಗೊಂಡು ಪರಿಹಾರ ನೀಡುವ ಸಂದರ್ಭದಲ್ಲಿ ಕೆಲ ರೈತರು ಕೈಬಿಟ್ಟು ಹೋಗಿದೆ ಸೇರಿಸಿ ಎಂಬ ಮನವಿಯನ್ನು ಸ್ವೀಕರಿಸುವುದಿಲ್ಲ. ಸೇರ್ಪಡೆಗೆ ಅವಕಾಶವಿಲ್ಲ. ಬೆಳೆ ಸರ್ವೇ ವಿವರ ರೈತನ ಸರ್ವೆ ವಿವರ ಬೆಳೆಹಾನಿ ವಿಸ್ತೀರ್ಣವನ್ನು ಫ್ರೂಟ್ ಐ.ಡಿ.ಯಲ್ಲಿ ಸೆರೆಹಿಡಿದು ಅಪ್ಲೋಡ್ ಮಾಡಬೇಕು. ಬೆಳೆ ವಿವರ ತಪ್ಪಾಗಿ ದಾಖಲಾಗಿದ್ದರೆ ಸರಿಪಡಿಸಬೇಕು. ಆರ್.ಟಿ.ಸಿ.ಗಳಿಗೆ ಆಧಾರ್ ಲಿಂಕ್ ಆಗಬೇಕು. ತಕ್ಷಣ ಎಲ್ಲವನ್ನೂ ಸರಿಪಡಿಸಿ ನಿಖರವಾದ ರೈತರ ಬೆಳೆ ಮಾಹಿತಿ ವಿಸ್ತೀರ್ಣವನ್ನು ಕ್ರಾಸ್ ಸರ್ವೇಮಾಡಿ ಅಪ್ಡೇಟ್ ಮಾಡಲು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಕಂದಾಯ ಸಚಿವರು ಸೂಚನೆ ನೀಡಿದರು.