<p><strong>ಹಾವೇರಿ: </strong>ನಗರದ ಪಂಡಿತ್ ಆಸ್ಪತ್ರೆಯಲ್ಲಿ ರೋಟರಿ ಸಂಸ್ಥೆ ಹಾಗೂ ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ಸಹಯೋಗದಲ್ಲಿ ಗುರುವಾರ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ನಡೆಯಿತು.</p>.<p>ಚಿಕ್ಕಮಕ್ಕಳ ತಜ್ಞ ಡಾ.ಸುದೀಪ್ ಪಂಡಿತ್ ಅವರು ತಾಯಂದಿರಿಗೆ ಹಾಗೂ ಗರ್ಭಿಣಿಯರಿಗೆ ತಾಯಿಯ ಹಾಲಿನ ಮಹತ್ವ ಕುರಿತು ಜಾಗೃತಿ ಮೂಡಿಸಿದರು. ತಾಯಂದಿರಿಗೆ ಮಕ್ಕಳ ಕಿಟ್ಗಳನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ರೊ.ದಯಾನಂದ ಯಡ್ರಾಮಿ, ರೋಟರಿ ಅಸಿಸ್ಟೆಂಟ್ ಗವರ್ನರ್ ಶರತ್ ಮಲ್ಲನಗೌಡರ್, ಜಿ. ವಿ. ಹಿರೇಗೌಡರ್, ಎಂ.ಆರ್. ಪಾಟೀಲ್, ಎಸ್.ಎ. ವಜ್ರಕುಮಾರ್ ಇದ್ದರು.</p>.<p class="Subhead"><strong>ಸಸಿ ನೆಡುವ ಕಾರ್ಯಕ್ರಮ:</strong> ರೋಟರಿ ಸಂಸ್ಥೆ, ಇನ್ನರ್ ವೀಲ್ ಸಂಸ್ಥೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಗುರುವಾರ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.</p>.<p class="Subhead">ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಲಕೃಷ್ಣ ಎಚ್. ಅವರು ಪರಿಸರದ ಮಹತ್ವದ ಕುರಿತು ಮಾತನಾಡಿದರು. ಅರಣ್ಯ ಅಧಿಕಾರಿಗಳಾದ ರಾಮಪ್ಪ ಪೂಜಾರ್,ರೋಟರಿ ಸಂಸ್ಥೆಯ ಅಧ್ಯಕ್ಷ ದಯಾನಂದ ಯಡ್ರಾಮಿ, ಇನ್ನರ್ ವೀಲ್ ಅಧ್ಯಕ್ಷೆ ರೇಖಾ ಯಡ್ರಾಮಿ, ಪರಿಸರ ವೇದಿಕೆ ಅಧ್ಯಕ್ಷೆ ಮಾಧುರಿ ದೇವಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ನಗರದ ಪಂಡಿತ್ ಆಸ್ಪತ್ರೆಯಲ್ಲಿ ರೋಟರಿ ಸಂಸ್ಥೆ ಹಾಗೂ ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ಸಹಯೋಗದಲ್ಲಿ ಗುರುವಾರ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ನಡೆಯಿತು.</p>.<p>ಚಿಕ್ಕಮಕ್ಕಳ ತಜ್ಞ ಡಾ.ಸುದೀಪ್ ಪಂಡಿತ್ ಅವರು ತಾಯಂದಿರಿಗೆ ಹಾಗೂ ಗರ್ಭಿಣಿಯರಿಗೆ ತಾಯಿಯ ಹಾಲಿನ ಮಹತ್ವ ಕುರಿತು ಜಾಗೃತಿ ಮೂಡಿಸಿದರು. ತಾಯಂದಿರಿಗೆ ಮಕ್ಕಳ ಕಿಟ್ಗಳನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ರೊ.ದಯಾನಂದ ಯಡ್ರಾಮಿ, ರೋಟರಿ ಅಸಿಸ್ಟೆಂಟ್ ಗವರ್ನರ್ ಶರತ್ ಮಲ್ಲನಗೌಡರ್, ಜಿ. ವಿ. ಹಿರೇಗೌಡರ್, ಎಂ.ಆರ್. ಪಾಟೀಲ್, ಎಸ್.ಎ. ವಜ್ರಕುಮಾರ್ ಇದ್ದರು.</p>.<p class="Subhead"><strong>ಸಸಿ ನೆಡುವ ಕಾರ್ಯಕ್ರಮ:</strong> ರೋಟರಿ ಸಂಸ್ಥೆ, ಇನ್ನರ್ ವೀಲ್ ಸಂಸ್ಥೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಗುರುವಾರ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.</p>.<p class="Subhead">ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಲಕೃಷ್ಣ ಎಚ್. ಅವರು ಪರಿಸರದ ಮಹತ್ವದ ಕುರಿತು ಮಾತನಾಡಿದರು. ಅರಣ್ಯ ಅಧಿಕಾರಿಗಳಾದ ರಾಮಪ್ಪ ಪೂಜಾರ್,ರೋಟರಿ ಸಂಸ್ಥೆಯ ಅಧ್ಯಕ್ಷ ದಯಾನಂದ ಯಡ್ರಾಮಿ, ಇನ್ನರ್ ವೀಲ್ ಅಧ್ಯಕ್ಷೆ ರೇಖಾ ಯಡ್ರಾಮಿ, ಪರಿಸರ ವೇದಿಕೆ ಅಧ್ಯಕ್ಷೆ ಮಾಧುರಿ ದೇವಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>