<p><strong>ಹಾವೇರಿ:</strong> ‘ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಸಂಗ್ರಾಮಕ್ಕೆ ವೀರರಾಣಿ ಕಿತ್ತೂರಿನ ಚನ್ನಮ್ಮ ಅವರು ಸ್ಫೂರ್ತಿಯಾಗಿದ್ದರು’ ಎಂದು ರೈತ ಮುಖಂಡ ಭುವನೇಶ್ವರ ಶಿಡ್ಲಾಪೂರ ಹೇಳಿದರು.</p>.<p>ತಾಲ್ಲೂಕಿನ ಹಿರೇಹುಲ್ಲಾಳ ಗ್ರಾಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ‘ಕಿತ್ತೂರಿನ ವೀರರಾಣಿ ಚನ್ನಮ್ಮ ಜಯಂತ್ಯುತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಕಿತ್ತೂರು ಚನ್ನಮ್ಮ ಅವರ ಸ್ವಾತಂತ್ರ್ಯ ಪ್ರೇಮ, ದೇಶಭಕ್ತಿ ಹಾಗೂ ಹೋರಾಟದ ಬದುಕು ಇಂದಿನ ಯುವಜನರಿಗೆ ಆದರ್ಶವಾಗಿದೆ’ ಎಂದರು.</p>.<p>‘ಕನ್ನಡ ನಾಡು ಹಿಂದಿನಿಂದಲೂ ಸಾಕಷ್ಟು ವೀರ–ಶೂರರನ್ನೂ ಕಂಡಿದೆ. ಉತ್ತರ ಕರ್ನಾಟಕದ ಗಂಡುಗಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಬೆಳಗಾವಿಯ ಕಿತ್ತೂರು ಸಂಸ್ಥಾನ ಆಳಿದ್ದ ವೀರರಾಣಿ ಚನ್ನಮ್ಮ, ಬ್ರಿಟಿಷರ ಹುಟ್ಟಡಗಿಸಿದ್ದರು. ಏಕಾಂಗಿಯಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಕನ್ನಡಿಗರ ಧೈರ್ಯಕ್ಕೆ ಸಾಕ್ಷಿಯಾದರು’ ಎಂದರು.</p>.<p>ಮುಖಂಡ ಕರಬಸಪ್ಪ ಶಿವೂರ ಮಾತನಾಡಿ, ‘ಚನ್ನಮ್ಮ ಕೇವಲ ಒಂದು ಸಮಾಜಕ್ಕೆ ಮೀಸಲಾದ ವೀರ ಮಹಿಳೆಯಲ್ಲ. ರಾಷ್ಟ್ರಕ್ಕೆ ಕೀರ್ತಿ ತಂದ ಮಹಿಳೆ. ತಮ್ಮ ಶಿಸ್ತುಬದ್ಧ ಆಡಳಿತ ಮತ್ತು ಅಂತಃಕರಣಭರಿತ ನಿರ್ಣಯಗಳಿಂದಾಗಿ ರಾಣಿ ಚನ್ನಮ್ಮ ಅವರು ಇತಿಹಾಸದಲ್ಲಿ ಸುಭದ್ರ ಸ್ಥಾನ ಪಡೆದಿದ್ದಾರೆ’ ಎಂದರು.</p>.<p>ಅನಿತಾ ಶಿವೂರ, ಮಾಲತೇಶ ಸೊಪ್ಪಿನ, ಸಿದ್ದಲಿಂಗಪ್ಪ ಕಮಡೊಳ್ಳಿ ಹಾಗೂ ಸಮಾಜದ ಜನರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಸಂಗ್ರಾಮಕ್ಕೆ ವೀರರಾಣಿ ಕಿತ್ತೂರಿನ ಚನ್ನಮ್ಮ ಅವರು ಸ್ಫೂರ್ತಿಯಾಗಿದ್ದರು’ ಎಂದು ರೈತ ಮುಖಂಡ ಭುವನೇಶ್ವರ ಶಿಡ್ಲಾಪೂರ ಹೇಳಿದರು.</p>.<p>ತಾಲ್ಲೂಕಿನ ಹಿರೇಹುಲ್ಲಾಳ ಗ್ರಾಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ‘ಕಿತ್ತೂರಿನ ವೀರರಾಣಿ ಚನ್ನಮ್ಮ ಜಯಂತ್ಯುತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಕಿತ್ತೂರು ಚನ್ನಮ್ಮ ಅವರ ಸ್ವಾತಂತ್ರ್ಯ ಪ್ರೇಮ, ದೇಶಭಕ್ತಿ ಹಾಗೂ ಹೋರಾಟದ ಬದುಕು ಇಂದಿನ ಯುವಜನರಿಗೆ ಆದರ್ಶವಾಗಿದೆ’ ಎಂದರು.</p>.<p>‘ಕನ್ನಡ ನಾಡು ಹಿಂದಿನಿಂದಲೂ ಸಾಕಷ್ಟು ವೀರ–ಶೂರರನ್ನೂ ಕಂಡಿದೆ. ಉತ್ತರ ಕರ್ನಾಟಕದ ಗಂಡುಗಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಬೆಳಗಾವಿಯ ಕಿತ್ತೂರು ಸಂಸ್ಥಾನ ಆಳಿದ್ದ ವೀರರಾಣಿ ಚನ್ನಮ್ಮ, ಬ್ರಿಟಿಷರ ಹುಟ್ಟಡಗಿಸಿದ್ದರು. ಏಕಾಂಗಿಯಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಕನ್ನಡಿಗರ ಧೈರ್ಯಕ್ಕೆ ಸಾಕ್ಷಿಯಾದರು’ ಎಂದರು.</p>.<p>ಮುಖಂಡ ಕರಬಸಪ್ಪ ಶಿವೂರ ಮಾತನಾಡಿ, ‘ಚನ್ನಮ್ಮ ಕೇವಲ ಒಂದು ಸಮಾಜಕ್ಕೆ ಮೀಸಲಾದ ವೀರ ಮಹಿಳೆಯಲ್ಲ. ರಾಷ್ಟ್ರಕ್ಕೆ ಕೀರ್ತಿ ತಂದ ಮಹಿಳೆ. ತಮ್ಮ ಶಿಸ್ತುಬದ್ಧ ಆಡಳಿತ ಮತ್ತು ಅಂತಃಕರಣಭರಿತ ನಿರ್ಣಯಗಳಿಂದಾಗಿ ರಾಣಿ ಚನ್ನಮ್ಮ ಅವರು ಇತಿಹಾಸದಲ್ಲಿ ಸುಭದ್ರ ಸ್ಥಾನ ಪಡೆದಿದ್ದಾರೆ’ ಎಂದರು.</p>.<p>ಅನಿತಾ ಶಿವೂರ, ಮಾಲತೇಶ ಸೊಪ್ಪಿನ, ಸಿದ್ದಲಿಂಗಪ್ಪ ಕಮಡೊಳ್ಳಿ ಹಾಗೂ ಸಮಾಜದ ಜನರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>