<p><strong>ಶಿಗ್ಗಾವಿ</strong>: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವತಿಯಿಂದ ಗುರುವಾರ ಜರುಗಿದ ಹರ ಜಾತ್ರಾ ಮಹೋತ್ಸವದಲ್ಲಿ ಶಿಗ್ಗಾವಿ ಉತ್ಸವ ರಾಕ್ ಗಾರ್ಡನ್ ಕಲಾ ನಿರ್ದೇಶಕಿ ವೇದಾರಾಣಿ ದಾಸನೂರ ಅವರಿಗೆ ‘ಕಿತ್ತೂರು ರಾಣಿ ಚನ್ನಮ್ಮ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಹತ್ತು ಗ್ರಾಂ ಬೆಳ್ಳಿಯಿಂದ ನಿರ್ಮಿಸಿರುವ ನಾಣ್ಯದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ಚಿತ್ರವಿದೆ. ಚನ್ನಮ್ಮನವರ ಸ್ಮರಣಿಕೆ ಮತ್ತು ಪ್ರಶಸ್ತಿ ಪ್ರಮಾಣ ಪತ್ರವನ್ನು ಓಳಗೊಂಡಿದೆ.</p>.<p>ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೇದಾರಾಣಿ ದಾಸನೂರ ಅವರು, ಸ್ವಾಭಿಮಾನ ಮತ್ತು ಸ್ವತಂತ್ರ ಬದುಕಿಗೆ ಸದಾ ತನ್ನ ಜೀವನವನ್ನು ಮುಡಿಪಿಟ್ಟ ಕಿತ್ತೂರು ಚನ್ನಮ್ಮ ಸ್ತ್ರೀ ಕುಲದ ಅನಘ್ರ್ಯ ರತ್ನ. ಸರ್ವ ಸಮುದಾಯದ ಸೈನಿಕರನ್ನು ತನ್ನ ಸೇನೆಯಲ್ಲಿಟ್ಟುಕೊಂಡು ಬ್ರಿಟಿಷರ ವಿರುದ್ಧ ಹೋರಾಡಿದವಳು ಎಂದರು.</p>.<p>ಸತತ 19 ವರ್ಷಗಳಿಂದ ಗೊಟಗೋಡಿ ಉತ್ಸವ ರಾಕ್ ಗಾರ್ಡನ್ ನಿರ್ಮಿಸುವಲ್ಲಿ ಶ್ರಮಿಸಿರುವೆ. ಇಲ್ಲಿಯ ಶಿಲ್ಪಕಲಾ ತರಬೇತಿ ಕೇಂದ್ರದ ಕಲಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುವೆ. ನನ್ನ ಕಲಾ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿರುವ ಹರ ಜಾತ್ರಾ ಮಹೋತ್ಸವದ ಸರ್ವರಿಗೂ ಆಭಾರಿಯಾಗಿರುವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವತಿಯಿಂದ ಗುರುವಾರ ಜರುಗಿದ ಹರ ಜಾತ್ರಾ ಮಹೋತ್ಸವದಲ್ಲಿ ಶಿಗ್ಗಾವಿ ಉತ್ಸವ ರಾಕ್ ಗಾರ್ಡನ್ ಕಲಾ ನಿರ್ದೇಶಕಿ ವೇದಾರಾಣಿ ದಾಸನೂರ ಅವರಿಗೆ ‘ಕಿತ್ತೂರು ರಾಣಿ ಚನ್ನಮ್ಮ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಹತ್ತು ಗ್ರಾಂ ಬೆಳ್ಳಿಯಿಂದ ನಿರ್ಮಿಸಿರುವ ನಾಣ್ಯದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ಚಿತ್ರವಿದೆ. ಚನ್ನಮ್ಮನವರ ಸ್ಮರಣಿಕೆ ಮತ್ತು ಪ್ರಶಸ್ತಿ ಪ್ರಮಾಣ ಪತ್ರವನ್ನು ಓಳಗೊಂಡಿದೆ.</p>.<p>ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೇದಾರಾಣಿ ದಾಸನೂರ ಅವರು, ಸ್ವಾಭಿಮಾನ ಮತ್ತು ಸ್ವತಂತ್ರ ಬದುಕಿಗೆ ಸದಾ ತನ್ನ ಜೀವನವನ್ನು ಮುಡಿಪಿಟ್ಟ ಕಿತ್ತೂರು ಚನ್ನಮ್ಮ ಸ್ತ್ರೀ ಕುಲದ ಅನಘ್ರ್ಯ ರತ್ನ. ಸರ್ವ ಸಮುದಾಯದ ಸೈನಿಕರನ್ನು ತನ್ನ ಸೇನೆಯಲ್ಲಿಟ್ಟುಕೊಂಡು ಬ್ರಿಟಿಷರ ವಿರುದ್ಧ ಹೋರಾಡಿದವಳು ಎಂದರು.</p>.<p>ಸತತ 19 ವರ್ಷಗಳಿಂದ ಗೊಟಗೋಡಿ ಉತ್ಸವ ರಾಕ್ ಗಾರ್ಡನ್ ನಿರ್ಮಿಸುವಲ್ಲಿ ಶ್ರಮಿಸಿರುವೆ. ಇಲ್ಲಿಯ ಶಿಲ್ಪಕಲಾ ತರಬೇತಿ ಕೇಂದ್ರದ ಕಲಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುವೆ. ನನ್ನ ಕಲಾ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿರುವ ಹರ ಜಾತ್ರಾ ಮಹೋತ್ಸವದ ಸರ್ವರಿಗೂ ಆಭಾರಿಯಾಗಿರುವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>