<p><strong>ಹಾವೇರಿ: </strong>ನಗರದ ರಾಜೇಂದ್ರನಗರದ ಕಾವ್ಯಾ ಕುಲಕರ್ಣಿ ಮತ್ತು ಚಂದ್ರಶೇಖರ ದಂಪತಿ ಆರು ವರ್ಷಗಳಿಂದ ದುಬೈನಲ್ಲಿ ನೆಲೆಸಿದ್ದು, ಮಂಗಳವಾರ ತಮ್ಮ ಮನೆಯಲ್ಲಿ ಸಂಭ್ರಮದಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸಿದರು.</p>.<p>ದುಬೈನಲ್ಲಿ ನೆಲೆಸಿರುವ ಕನ್ನಡಿಗರನ್ನು ತಮ್ಮ ಮನೆಗೆ ಕರೆಸಿ, ಅವರಿಗೆ ಸಿಹಿ ಖಾದ್ಯಗಳನ್ನು ಮಾಡಿ, ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ ಸಂಭ್ರಮಿಸಿದರು. ಕೃಷ್ಣನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>‘ಪ್ರತಿ ವರ್ಷ ಗೌರಿ–ಗಣೇಶ, ವರಮಹಾಲಕ್ಷ್ಮಿ, ದೀಪಾವಳಿ... ಸೇರಿದಂತೆ ಪ್ರತಿಯೊಂದು ಹಬ್ಬಗಳನ್ನು ಸಂಪ್ರದಾಯಬದ್ಧವಾಗಿ ಆಚರಿಸುತ್ತೇವೆ. ಯಾವುದೇ ದೇಶದಲ್ಲಿದ್ದರೂ ತಮ್ಮ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಮರೆಯಬಾರದು. ಮಹಿಳೆಯರಿಗೆ ಅರಿಸಿನ–ಕುಂಕುಮ ಕೊಡುವುದು, ಫಲ–ತಾಂಬೂಲ ನೀಡುವುದನ್ನು ರೂಢಿಸಿಕೊಂಡಿದ್ದೇವೆ. ಹೊರದೇಶದಲ್ಲಿರುವ ಕನ್ನಡಿಗರೆಲ್ಲ ಒಟ್ಟಿಗೆ ಸೇರಿ ಹಬ್ಬ ಆಚರಿಸುವುದು ತುಂಬಾ ಸಂತೋಷ ಕೊಡುತ್ತದೆ’ ಎಂದು ಕಾವ್ಯಾ ಕುಲಕರ್ಣಿ ಅವರು ‘ಪ್ರಜಾವಾಣಿ’ಯೊಂದಿಗೆ ಅನಿಸಿಕೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ನಗರದ ರಾಜೇಂದ್ರನಗರದ ಕಾವ್ಯಾ ಕುಲಕರ್ಣಿ ಮತ್ತು ಚಂದ್ರಶೇಖರ ದಂಪತಿ ಆರು ವರ್ಷಗಳಿಂದ ದುಬೈನಲ್ಲಿ ನೆಲೆಸಿದ್ದು, ಮಂಗಳವಾರ ತಮ್ಮ ಮನೆಯಲ್ಲಿ ಸಂಭ್ರಮದಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸಿದರು.</p>.<p>ದುಬೈನಲ್ಲಿ ನೆಲೆಸಿರುವ ಕನ್ನಡಿಗರನ್ನು ತಮ್ಮ ಮನೆಗೆ ಕರೆಸಿ, ಅವರಿಗೆ ಸಿಹಿ ಖಾದ್ಯಗಳನ್ನು ಮಾಡಿ, ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ ಸಂಭ್ರಮಿಸಿದರು. ಕೃಷ್ಣನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>‘ಪ್ರತಿ ವರ್ಷ ಗೌರಿ–ಗಣೇಶ, ವರಮಹಾಲಕ್ಷ್ಮಿ, ದೀಪಾವಳಿ... ಸೇರಿದಂತೆ ಪ್ರತಿಯೊಂದು ಹಬ್ಬಗಳನ್ನು ಸಂಪ್ರದಾಯಬದ್ಧವಾಗಿ ಆಚರಿಸುತ್ತೇವೆ. ಯಾವುದೇ ದೇಶದಲ್ಲಿದ್ದರೂ ತಮ್ಮ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಮರೆಯಬಾರದು. ಮಹಿಳೆಯರಿಗೆ ಅರಿಸಿನ–ಕುಂಕುಮ ಕೊಡುವುದು, ಫಲ–ತಾಂಬೂಲ ನೀಡುವುದನ್ನು ರೂಢಿಸಿಕೊಂಡಿದ್ದೇವೆ. ಹೊರದೇಶದಲ್ಲಿರುವ ಕನ್ನಡಿಗರೆಲ್ಲ ಒಟ್ಟಿಗೆ ಸೇರಿ ಹಬ್ಬ ಆಚರಿಸುವುದು ತುಂಬಾ ಸಂತೋಷ ಕೊಡುತ್ತದೆ’ ಎಂದು ಕಾವ್ಯಾ ಕುಲಕರ್ಣಿ ಅವರು ‘ಪ್ರಜಾವಾಣಿ’ಯೊಂದಿಗೆ ಅನಿಸಿಕೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>