<p><strong>ಹಾವೇರಿ</strong>: ವೇತನ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು, ಹಾವೇರಿಯಲ್ಲಿ ಮಾತ್ರ ಸ್ಥಳೀಯ ಬಸ್ಗಳ ಸಂಚಾರ ಯಥಾಪ್ರಕಾರ ಮುಂದುವರಿದಿದೆ.</p><p>ಮಂಗಳವಾರ ಬೆಳಿಗ್ಗೆಯಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದಾಗಿ ರಾಜ್ಯ ಮಟ್ಟದ ಸಂಘಟನೆ ಮುಖಂಡರು ತಿಳಿಸಿದ್ದರು. ಆದರೆ, ಹಾವೇರಿ ಜಿಲ್ಲೆಯ ಬಹುತೇಕ ನೌಕರರು ಬೆಳಿಗ್ಗೆಯೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ. </p><p>ಜಿಲ್ಲೆಯ ಹಾವೇರಿ, ರಾಣೆಬೆನ್ನೂರು, ಹಾನಗಲ್, ಶಿಗ್ಗಾವಿ, ಸವಣೂರು, ಬ್ಯಾಡಗಿ, ಹಿರೇಕೆರೂರು, ರಟ್ಟೀಹಳ್ಳಿ ತಾಲ್ಲೂಕಿನಲ್ಲಿ ಬಹುತೇಕ ಕಡೆಗಳಲ್ಲಿ ಬೆಳಿಗ್ಗೆಯಿಂದಲೇ ಬಸ್ ಸಂಚಾರ ಸಹಜವಾಗಿದೆ.</p><p>ಶಾಲೆ- ಕಾಲೇಜು ವಿದ್ಯಾರ್ಥಿಗಳು, ನೌಕರರು, ದಿನಗೂಲಿ ಕಾರ್ಮಿಕರು ನಿತ್ಯವೂ ಬಸ್ನಲ್ಲಿ ಸಂಚರಿಸುತ್ತಾರೆ. ಮಂಗಳವಾರ ಎಲ್ಲರೂ ಯಥಾಪ್ರಕಾರ ಬಸ್ ಪ್ರಯಾಣ ಮಾಡಿದರು.</p><p>ಸ್ಥಳೀಯ ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಲಿಲ್ಲ. ಆದರೆ, ಹೊರ ಜಿಲ್ಲೆಗಳಿಂದ ಬರಬೇಕಿದ್ದ ಹಾಗೂ ಹೊರ ಜಿಲ್ಲೆಗಳಿಗೆ ಹೋಗಬೇಕಿದ್ದ ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಕಂಡುಬಂತು.</p><p>ಮುಷ್ಕರ ಹಿನ್ನೆಲೆಯಲ್ಲಿ ಯಾವುದೇ ಅಹಿತರಕ ಘಟನೆಗಳು ನಡೆಯದಂತೆ ಹಾವೇರಿ ಕೇಂದ್ರ ಬಸ್ ನಿಲ್ದಾಣ ಹಾಗೂ ತಾಲ್ಲೂಕು ನಿಲ್ದಾಣಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ವೇತನ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು, ಹಾವೇರಿಯಲ್ಲಿ ಮಾತ್ರ ಸ್ಥಳೀಯ ಬಸ್ಗಳ ಸಂಚಾರ ಯಥಾಪ್ರಕಾರ ಮುಂದುವರಿದಿದೆ.</p><p>ಮಂಗಳವಾರ ಬೆಳಿಗ್ಗೆಯಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದಾಗಿ ರಾಜ್ಯ ಮಟ್ಟದ ಸಂಘಟನೆ ಮುಖಂಡರು ತಿಳಿಸಿದ್ದರು. ಆದರೆ, ಹಾವೇರಿ ಜಿಲ್ಲೆಯ ಬಹುತೇಕ ನೌಕರರು ಬೆಳಿಗ್ಗೆಯೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ. </p><p>ಜಿಲ್ಲೆಯ ಹಾವೇರಿ, ರಾಣೆಬೆನ್ನೂರು, ಹಾನಗಲ್, ಶಿಗ್ಗಾವಿ, ಸವಣೂರು, ಬ್ಯಾಡಗಿ, ಹಿರೇಕೆರೂರು, ರಟ್ಟೀಹಳ್ಳಿ ತಾಲ್ಲೂಕಿನಲ್ಲಿ ಬಹುತೇಕ ಕಡೆಗಳಲ್ಲಿ ಬೆಳಿಗ್ಗೆಯಿಂದಲೇ ಬಸ್ ಸಂಚಾರ ಸಹಜವಾಗಿದೆ.</p><p>ಶಾಲೆ- ಕಾಲೇಜು ವಿದ್ಯಾರ್ಥಿಗಳು, ನೌಕರರು, ದಿನಗೂಲಿ ಕಾರ್ಮಿಕರು ನಿತ್ಯವೂ ಬಸ್ನಲ್ಲಿ ಸಂಚರಿಸುತ್ತಾರೆ. ಮಂಗಳವಾರ ಎಲ್ಲರೂ ಯಥಾಪ್ರಕಾರ ಬಸ್ ಪ್ರಯಾಣ ಮಾಡಿದರು.</p><p>ಸ್ಥಳೀಯ ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಲಿಲ್ಲ. ಆದರೆ, ಹೊರ ಜಿಲ್ಲೆಗಳಿಂದ ಬರಬೇಕಿದ್ದ ಹಾಗೂ ಹೊರ ಜಿಲ್ಲೆಗಳಿಗೆ ಹೋಗಬೇಕಿದ್ದ ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಕಂಡುಬಂತು.</p><p>ಮುಷ್ಕರ ಹಿನ್ನೆಲೆಯಲ್ಲಿ ಯಾವುದೇ ಅಹಿತರಕ ಘಟನೆಗಳು ನಡೆಯದಂತೆ ಹಾವೇರಿ ಕೇಂದ್ರ ಬಸ್ ನಿಲ್ದಾಣ ಹಾಗೂ ತಾಲ್ಲೂಕು ನಿಲ್ದಾಣಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>