<p><strong>ಸವಣೂರು:</strong> ಸುಕ್ಷೇತ್ರ ಎಂದು ರಾಜ್ಯದಾದ್ಯಂತ ಹೆಸರುವಾಸಿಯದ ಕಾರಡಗಿ ಗ್ರಾಮ ಸ್ವಚ್ಛತೆ, ಬೀದಿದೀಪ ಸೇರಿದಂತೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.</p>.<p>ಕಾರಡಗಿ ಗ್ರಾಮ ಎಂದಾಕ್ಷಣ ನೆನಪಿಗೆ ಬರುವುದು ವೀರಭದ್ರೇಶ್ವರ ದೇವಸ್ಥಾನ. ಆದರೆ, ಇಂತಹ ಸುಕ್ಷೇತ್ರವನ್ನು ಹೊಂದಿರುವ ಗ್ರಾಮದಲ್ಲಿ ಸ್ವಚ್ಛತೆ ಮಾತ್ರ ಮರೀಚಿಕೆಯಾಗಿದೆ. ಗ್ರಾಮದಲ್ಲಿ ಹಾಯ್ದು ಹೋಗಿರುವ ಸವಣೂರು - ಹುಲಗೂರ ರಸ್ತೆಯ ಮೇಲೆ ಆಳೆತ್ತರದ ತ್ಯಾಜ್ಯ ನಿತ್ಯ ಬಿದ್ದರೂ ಗ್ರಾಮ ಪಂಚಾಯಿತಿ ಸ್ವಚ್ಛತೆಗೆ ಮುಂದಾಗಿಲ್ಲ. ಇದರಿಂದ, ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿಯಿಂದ ಜೀವನ ನಡೆಸುವಂತಾಗಿದೆ.</p>.<p>ಬೀದಿ ದೀಪ ಸಹಿತ ಹಲವು ದೀಪಗಳು ಬೆಳಗದೇ ಇರುವುದರಿಂದ ರಾತ್ರಿ ಸಮಯದಲ್ಲಿ ಚಿಕ್ಕ ಮಕ್ಕಳು ವಯೋ ವೃದ್ಧರು ತೊಂದರೆ ಅನುಭವಿಸುತ್ತಿದ್ದಾರೆ. ಬೀದಿ ದೀಪಗಳನ್ನು ಅಳವಡಿಸಲು ಹಲವು ಬಾರಿ ಮನವಿ ಮಾಡಿಕೊಂಡರೂ ಇದುವರೆಗೂ ಬೀದಿ ದೀಪ ಅಳವಡಿಸಿಲ್ಲ ಎನ್ನುವದು ಸಾರ್ವಜನಿಕರ ಆರೋಪವಾಗಿದೆ.</p>.<p>ತಂಗುದಾಣ ಸಹಿತ ಪ್ರಯಾಣಿಕರು ಕುಳಿತುಕೊಳ್ಳಲು ಯೋಗ್ಯವಾಗಿ ಇರದೇ ಪುಂಡ–ಪೋಕರಿಗಳ, ಮದ್ಯ ವ್ಯಸನಿಗಳ ತಾಣವಾಗಿದೆ. ಇದರ ಸ್ವಚ್ಛತೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ, ಚುನಾಯಿತ ಪ್ರತಿನಿಧಿಗಳಾಗಲಿ ಕಾಳಜಿ ವಹಿಸುತ್ತಿಲ್ಲ.</p>.<p>ಗ್ರಾಮದಲ್ಲಿ ನೀರಿನ ಬವಣೆ ನೀಗಿಸಲು ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಮುಂದಾಗಿ ಯೋಜನೆಯನ್ನು ರೂಪಿಸಿ ಕೆರೆಯನ್ನು ತುಂಬಿಸುತ್ತಿದೆ. ಆದರೆ ಅದರಲ್ಲಿ ಗ್ರಾಮದ ತ್ಯಾಜ್ಯ ಸೇರ್ಪಡೆಯಾಗುತ್ತಿರುವುದರಿಂದ ದನ ಕರುಗಳಿಗೆ ಕುಡಿಯಲು ಅಯೋಗ್ಯವೆನಿಸಿದೆ. ಇದನ್ನು ಸೇವನೆ ಮಾಡಿದ ಜಾನುವಾರು ಸಹ ರೋಗಕ್ಕೀಡಾಗುವ ಆತಂಕವಿದೆ. ಇಂತಹ ಹತ್ತಾರು ಸಮಸ್ಯೆಗಳನ್ನು ಕಾರಡಗಿ ಗ್ರಾಮಸ್ಥರು ಅನುಭವಿಸುತ್ತಿದ್ದರೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಾಗಲಿ ಮುಂದಾಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. </p>.<div><blockquote>ಸುಕ್ಷೇತ್ರ ಕಾರಡಗಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸದೇ ಹೋದರೆ ಗ್ರಾಮ ಪಂಚಾಯಿತಿ ಎದುರು ಹೋರಾಟ ನಡೆಸಲಾಗುವುದು </blockquote><span class="attribution">-ಗದಿಗೆಪ್ಪ ಕುರವತ್ತಿ, ಶ್ರೀರಾಮ ಸೇನೆ ಧಾರವಾಡ ವಿಭಾಗ ಅಧ್ಯಕ್ಷ</span></div>.<div><blockquote>ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ನಿರಂತರವಾಗಿ ಕೈಗೊಳ್ಳಲಾಗುತ್ತಿದೆ. ಎಡೆಬಿಡದೆ ಸುರಿದ ಮಳೆಗೆ ತ್ಯಾಜ್ಯ ಹೆಚ್ಚಾಗಿದ್ದು ಕೆಲ ದಿನಗಳಲ್ಲಿ ಮತ್ತೆ ಸ್ವಚ್ಚತೆ ಮಾಡಿಸಲಾಗುವುದು </blockquote><span class="attribution">-ಪಿ.ಸಿ. ಸಂಕಪ್ಪನವರ ಪಿಡಿಒ ಕಾರಡಗಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರು:</strong> ಸುಕ್ಷೇತ್ರ ಎಂದು ರಾಜ್ಯದಾದ್ಯಂತ ಹೆಸರುವಾಸಿಯದ ಕಾರಡಗಿ ಗ್ರಾಮ ಸ್ವಚ್ಛತೆ, ಬೀದಿದೀಪ ಸೇರಿದಂತೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.</p>.<p>ಕಾರಡಗಿ ಗ್ರಾಮ ಎಂದಾಕ್ಷಣ ನೆನಪಿಗೆ ಬರುವುದು ವೀರಭದ್ರೇಶ್ವರ ದೇವಸ್ಥಾನ. ಆದರೆ, ಇಂತಹ ಸುಕ್ಷೇತ್ರವನ್ನು ಹೊಂದಿರುವ ಗ್ರಾಮದಲ್ಲಿ ಸ್ವಚ್ಛತೆ ಮಾತ್ರ ಮರೀಚಿಕೆಯಾಗಿದೆ. ಗ್ರಾಮದಲ್ಲಿ ಹಾಯ್ದು ಹೋಗಿರುವ ಸವಣೂರು - ಹುಲಗೂರ ರಸ್ತೆಯ ಮೇಲೆ ಆಳೆತ್ತರದ ತ್ಯಾಜ್ಯ ನಿತ್ಯ ಬಿದ್ದರೂ ಗ್ರಾಮ ಪಂಚಾಯಿತಿ ಸ್ವಚ್ಛತೆಗೆ ಮುಂದಾಗಿಲ್ಲ. ಇದರಿಂದ, ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿಯಿಂದ ಜೀವನ ನಡೆಸುವಂತಾಗಿದೆ.</p>.<p>ಬೀದಿ ದೀಪ ಸಹಿತ ಹಲವು ದೀಪಗಳು ಬೆಳಗದೇ ಇರುವುದರಿಂದ ರಾತ್ರಿ ಸಮಯದಲ್ಲಿ ಚಿಕ್ಕ ಮಕ್ಕಳು ವಯೋ ವೃದ್ಧರು ತೊಂದರೆ ಅನುಭವಿಸುತ್ತಿದ್ದಾರೆ. ಬೀದಿ ದೀಪಗಳನ್ನು ಅಳವಡಿಸಲು ಹಲವು ಬಾರಿ ಮನವಿ ಮಾಡಿಕೊಂಡರೂ ಇದುವರೆಗೂ ಬೀದಿ ದೀಪ ಅಳವಡಿಸಿಲ್ಲ ಎನ್ನುವದು ಸಾರ್ವಜನಿಕರ ಆರೋಪವಾಗಿದೆ.</p>.<p>ತಂಗುದಾಣ ಸಹಿತ ಪ್ರಯಾಣಿಕರು ಕುಳಿತುಕೊಳ್ಳಲು ಯೋಗ್ಯವಾಗಿ ಇರದೇ ಪುಂಡ–ಪೋಕರಿಗಳ, ಮದ್ಯ ವ್ಯಸನಿಗಳ ತಾಣವಾಗಿದೆ. ಇದರ ಸ್ವಚ್ಛತೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ, ಚುನಾಯಿತ ಪ್ರತಿನಿಧಿಗಳಾಗಲಿ ಕಾಳಜಿ ವಹಿಸುತ್ತಿಲ್ಲ.</p>.<p>ಗ್ರಾಮದಲ್ಲಿ ನೀರಿನ ಬವಣೆ ನೀಗಿಸಲು ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಮುಂದಾಗಿ ಯೋಜನೆಯನ್ನು ರೂಪಿಸಿ ಕೆರೆಯನ್ನು ತುಂಬಿಸುತ್ತಿದೆ. ಆದರೆ ಅದರಲ್ಲಿ ಗ್ರಾಮದ ತ್ಯಾಜ್ಯ ಸೇರ್ಪಡೆಯಾಗುತ್ತಿರುವುದರಿಂದ ದನ ಕರುಗಳಿಗೆ ಕುಡಿಯಲು ಅಯೋಗ್ಯವೆನಿಸಿದೆ. ಇದನ್ನು ಸೇವನೆ ಮಾಡಿದ ಜಾನುವಾರು ಸಹ ರೋಗಕ್ಕೀಡಾಗುವ ಆತಂಕವಿದೆ. ಇಂತಹ ಹತ್ತಾರು ಸಮಸ್ಯೆಗಳನ್ನು ಕಾರಡಗಿ ಗ್ರಾಮಸ್ಥರು ಅನುಭವಿಸುತ್ತಿದ್ದರೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಾಗಲಿ ಮುಂದಾಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. </p>.<div><blockquote>ಸುಕ್ಷೇತ್ರ ಕಾರಡಗಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸದೇ ಹೋದರೆ ಗ್ರಾಮ ಪಂಚಾಯಿತಿ ಎದುರು ಹೋರಾಟ ನಡೆಸಲಾಗುವುದು </blockquote><span class="attribution">-ಗದಿಗೆಪ್ಪ ಕುರವತ್ತಿ, ಶ್ರೀರಾಮ ಸೇನೆ ಧಾರವಾಡ ವಿಭಾಗ ಅಧ್ಯಕ್ಷ</span></div>.<div><blockquote>ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ನಿರಂತರವಾಗಿ ಕೈಗೊಳ್ಳಲಾಗುತ್ತಿದೆ. ಎಡೆಬಿಡದೆ ಸುರಿದ ಮಳೆಗೆ ತ್ಯಾಜ್ಯ ಹೆಚ್ಚಾಗಿದ್ದು ಕೆಲ ದಿನಗಳಲ್ಲಿ ಮತ್ತೆ ಸ್ವಚ್ಚತೆ ಮಾಡಿಸಲಾಗುವುದು </blockquote><span class="attribution">-ಪಿ.ಸಿ. ಸಂಕಪ್ಪನವರ ಪಿಡಿಒ ಕಾರಡಗಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>