<p><strong>ಹಾವೇರಿ:</strong> ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಜಮೀನು ನೀಡುವ ರೈತರಿಗೆ, ನಿವೇಶನಗಳನ್ನು ವಿನ್ಯಾಸಗೊಳಿಸಿದ ನಂತರ 50:50 ಅನುಪಾತದಲ್ಲಿ ಹಂಚಿಕೆ ಮಾಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಇದೇ ಮಾದರಿಯಲ್ಲಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 102 ಎಕರೆ ಜಮೀನನ್ನು ರೈತರಿಂದ ಪಡೆಯಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದರು.</p>.<p>ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಪ್ರಾಧಿಕಾರದಿಂದ ನಿರ್ಮಾಣವಾಗುವ ಬಡಾವಣೆಗಳಲ್ಲಿ ಪತ್ರಕರ್ತರಿಗೆ ಶೇ 5ರಷ್ಟು ಮೀಸಲಾತಿ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. 3 ತಿಂಗಳಿಂದ ರಾಜ್ಯದಾದ್ಯಂತ ಪ್ರವಾಸ ಮಾಡಿ, ನಗರಗಳ ಅಭಿವೃದ್ಧಿ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದರು.</p>.<p>ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಒಳಚರಂಡಿ ಹಾಗೂ 24X7 ಕುಡಿಯುವ ನೀರು ವ್ಯವಸ್ಥೆಯನ್ನು ಅಗಸ್ಟ್ 15ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.</p>.<p>ನಗರ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳನ್ನು ಸಕ್ರಮಗೊಳಿಸುವ ಮೂಲಕ ಕಂದಾಯವನ್ನು ವಸೂಲಿ ಮಾಡಲು ಮುಂದಿನ 2ರಿಂದ 3 ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಅನೇಕ ಪುರಸಭೆ ಹಾಗೂ ಮಹಾನಗರ ಪಾಲಿಕೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಟ್ಟಡ ಪಡೆದವರು ಗುತ್ತಿಗೆ ಹಣವನ್ನು ಸರ್ಕಾರಕ್ಕೆ ಸರಿಯಾಗಿ ಕಟ್ಟುತ್ತಿಲ್ಲ. ಜತೆಗೆ ನೀಡಲಾದ ಗುತ್ತಿಗೆಯ ನವೀಕರಣ ಮಾಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಗುತ್ತಿಗೆ ಪಡೆದವರಿಗೆ ಸರ್ಕಾರ ನಿಗದಿಪಡಿಸಿದ ದರಕ್ಕೆ ಕಟ್ಟಡಗಳನ್ನು ನೀಡಿ, ಸರ್ಕಾರದ ಬೊಕ್ಕಸಕ್ಕೆ ಹಣ ಸಂಗ್ರಹಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಜಮೀನು ನೀಡುವ ರೈತರಿಗೆ, ನಿವೇಶನಗಳನ್ನು ವಿನ್ಯಾಸಗೊಳಿಸಿದ ನಂತರ 50:50 ಅನುಪಾತದಲ್ಲಿ ಹಂಚಿಕೆ ಮಾಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಇದೇ ಮಾದರಿಯಲ್ಲಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 102 ಎಕರೆ ಜಮೀನನ್ನು ರೈತರಿಂದ ಪಡೆಯಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದರು.</p>.<p>ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಪ್ರಾಧಿಕಾರದಿಂದ ನಿರ್ಮಾಣವಾಗುವ ಬಡಾವಣೆಗಳಲ್ಲಿ ಪತ್ರಕರ್ತರಿಗೆ ಶೇ 5ರಷ್ಟು ಮೀಸಲಾತಿ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. 3 ತಿಂಗಳಿಂದ ರಾಜ್ಯದಾದ್ಯಂತ ಪ್ರವಾಸ ಮಾಡಿ, ನಗರಗಳ ಅಭಿವೃದ್ಧಿ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದರು.</p>.<p>ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಒಳಚರಂಡಿ ಹಾಗೂ 24X7 ಕುಡಿಯುವ ನೀರು ವ್ಯವಸ್ಥೆಯನ್ನು ಅಗಸ್ಟ್ 15ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.</p>.<p>ನಗರ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳನ್ನು ಸಕ್ರಮಗೊಳಿಸುವ ಮೂಲಕ ಕಂದಾಯವನ್ನು ವಸೂಲಿ ಮಾಡಲು ಮುಂದಿನ 2ರಿಂದ 3 ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಅನೇಕ ಪುರಸಭೆ ಹಾಗೂ ಮಹಾನಗರ ಪಾಲಿಕೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಟ್ಟಡ ಪಡೆದವರು ಗುತ್ತಿಗೆ ಹಣವನ್ನು ಸರ್ಕಾರಕ್ಕೆ ಸರಿಯಾಗಿ ಕಟ್ಟುತ್ತಿಲ್ಲ. ಜತೆಗೆ ನೀಡಲಾದ ಗುತ್ತಿಗೆಯ ನವೀಕರಣ ಮಾಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಗುತ್ತಿಗೆ ಪಡೆದವರಿಗೆ ಸರ್ಕಾರ ನಿಗದಿಪಡಿಸಿದ ದರಕ್ಕೆ ಕಟ್ಟಡಗಳನ್ನು ನೀಡಿ, ಸರ್ಕಾರದ ಬೊಕ್ಕಸಕ್ಕೆ ಹಣ ಸಂಗ್ರಹಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>