<p><strong>ರಾಣೆಬೆನ್ನೂರು</strong>: ‘ಜನಸಾಮಾನ್ಯರಲ್ಲಿ ಕಾನೂನಿನ ಅರಿವಿನ ಕೊರತೆಯಿರುವುದರಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ’ ಎಂದು ಎಚ್.ಪಿ. ಬಣಕಾರ ಹೇಳಿದರು.</p>.<p>ಇಲ್ಲಿನ ವಿದ್ಯಾನಗರದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜೀವನಕ್ಕೆ ಅವಶ್ಯಕವಾಗಿರುವ ಕಾನೂನುಗಳ ಕುರಿತು ಮೊದಲು ತಿಳಿದುಕೊಳ್ಳಬೇಕು. ಕಾನೂನು ಅರಿವಿನಿಂದ ಸುಂದರ ಜೀವನ ನಡೆಸಬಹುದು. ವರದಕ್ಷಿಣೆ ನಿರ್ಮೂಲನೆ, ಮಹಿಳೆಯರು ಮತ್ತು ಮಕ್ಕಳ ಮೇಲಿನ ಶೋಷಣೆ, ಬಾಲ್ಯ ವಿವಾಹ ತಡೆ, ವರದಕ್ಷಿಣೆ ನಿಷೇಧ ಕಾಯ್ದೆಯ ಬಗ್ಗೆ ಅರಿತುಕೊಳ್ಳಬೇಕು’ ಎಂದರು.</p>.<p>‘ಯಾವುದೇ ಅನ್ಯಾಯ, ಕಿರುಕುಳ, ಅಪಘಾತವಾದರೆ ಕೂಡಲೇ 1098 ಸಹಾಯವಾಣಿಗೆ ಕರೆಮಾಡಿ ದೂರು ಸಲ್ಲಿಸಬಹುದು’ ಎಂದರು.</p>.<p>ಮುಖ್ಯ ಶಿಕ್ಷಕಿ ಜೆ.ಸಿ. ಹೊಸಮನಿ, ಪರಮೇಶ ದೊಡ್ಡಮನಿ, ಎಚ್.ಆರ್. ತೆವರಿ, ಎಂ.ಡಿ.ಶಿವಾನಂದ, ಜ್ಯೋತಿ, ಶಾಂತರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು</strong>: ‘ಜನಸಾಮಾನ್ಯರಲ್ಲಿ ಕಾನೂನಿನ ಅರಿವಿನ ಕೊರತೆಯಿರುವುದರಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ’ ಎಂದು ಎಚ್.ಪಿ. ಬಣಕಾರ ಹೇಳಿದರು.</p>.<p>ಇಲ್ಲಿನ ವಿದ್ಯಾನಗರದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜೀವನಕ್ಕೆ ಅವಶ್ಯಕವಾಗಿರುವ ಕಾನೂನುಗಳ ಕುರಿತು ಮೊದಲು ತಿಳಿದುಕೊಳ್ಳಬೇಕು. ಕಾನೂನು ಅರಿವಿನಿಂದ ಸುಂದರ ಜೀವನ ನಡೆಸಬಹುದು. ವರದಕ್ಷಿಣೆ ನಿರ್ಮೂಲನೆ, ಮಹಿಳೆಯರು ಮತ್ತು ಮಕ್ಕಳ ಮೇಲಿನ ಶೋಷಣೆ, ಬಾಲ್ಯ ವಿವಾಹ ತಡೆ, ವರದಕ್ಷಿಣೆ ನಿಷೇಧ ಕಾಯ್ದೆಯ ಬಗ್ಗೆ ಅರಿತುಕೊಳ್ಳಬೇಕು’ ಎಂದರು.</p>.<p>‘ಯಾವುದೇ ಅನ್ಯಾಯ, ಕಿರುಕುಳ, ಅಪಘಾತವಾದರೆ ಕೂಡಲೇ 1098 ಸಹಾಯವಾಣಿಗೆ ಕರೆಮಾಡಿ ದೂರು ಸಲ್ಲಿಸಬಹುದು’ ಎಂದರು.</p>.<p>ಮುಖ್ಯ ಶಿಕ್ಷಕಿ ಜೆ.ಸಿ. ಹೊಸಮನಿ, ಪರಮೇಶ ದೊಡ್ಡಮನಿ, ಎಚ್.ಆರ್. ತೆವರಿ, ಎಂ.ಡಿ.ಶಿವಾನಂದ, ಜ್ಯೋತಿ, ಶಾಂತರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>