ವಕೀಲರ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ ಮಾತನಾಡಿ, ‘ನ್ಯಾಯಾಲಯ ಸಂಕೀರ್ಣ ಉದ್ಘಾಟನೆಯಾಗಿ ಎಂಟು ವರ್ಷವಾಗಿತ್ತು. ಆದರೆ ವಕೀಲರ ಸಂಘಕ್ಕೆ ಸುಸಜ್ಜಿತ ಕಟ್ಟಡ ಇರಲಿಲ್ಲ. ಆದರೆ, ಸ್ವಂತ ಕಟ್ಟಡ ಹೊಂದುವ ಸುಸಮಯ ಈಗ ಕೂಡಿ ಬಂದಿದೆ. ಎರಡು ಲಿಫ್ಟ್, ಹವಾನಿಯಂತ್ರಿತ ಕಟ್ಟಡ, ಪಾರ್ಕಿಂಗ್ ಜಾಗ, ಶಾಪಿಂಗ್ ಕಾಂಪ್ಲೆಕ್ಸ್ ಸೇರಿದಂತೆ ಸಕಲ ಸೌಲಭ್ಯ ಒಳಗೊಂಡ ಕಟ್ಟಡ ನಿರ್ಮಾಣವಾಗಲಿದೆ’ ಎಂದು ಆಶಾಭಾವನೆ ವ್ಯಕ್ತಪಡಿಸಿದರು.