<p><strong>ಹಾವೇರಿ</strong>: ‘ಹಾನಗಲ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಈ ಪ್ರಕರಣ ದಾಖಲಾಗಿದ್ದು, ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸುತ್ತೇನೆ’ ಎಂದು ಶಿಗ್ಗಾವಿ ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ ತಿಳಿಸಿದರು.</p><p>ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಅವರು, ‘ಇದು 2017ರಲ್ಲಿ ನಡೆದ ಪ್ರಕರಣ. ನಾನು ಆಗ ಶಾಸಕನಾಗಿರಲಿಲ್ಲ. ಈಗ ಶಾಸಕನಾಗಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ಇದರ ಹಿಂದೆ ರಾಜಕೀಯ ದುರದ್ದೇಶ ಇದ್ದರೂ ಇರಬಹುದು’ ಎಂದರು.</p><p>‘2017ರಲ್ಲಿ ಜಮೀನು ಖರೀದಿಸಿ ಕೃಷಿಯೇತರ (ಎನ್ಎ) ಪ್ರದೇಶವೆಂದು ಅನುಮತಿ ಪಡೆಯಲಾಗಿತ್ತು. ನಂತರ, ಕೆಜಿಪಿ ಪಡೆಯಲು ಅನುಮತಿ ಕೋರಲಾಗಿತ್ತು. ಅವಾಗಲೇ, ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆಯೂ ತೆರವಾಗಿತ್ತು. ನಂತರ, ಅಧಿಕಾರಿಗಳು ಸರ್ವೇ ಮಾಡಿ ಹದಬಸ್ತು ಮಾಡಿದ್ದರು. 2ರಿಂದ 3 ಅಡಿಯಷ್ಟು ಮಾತ್ರ ವ್ಯತ್ಯಾಸವಿತ್ತು. ಈ ಘಟನೆ ನಂತರ ಪೊಲೀಸರೂ ಸ್ಥಳ ಪರಿಶೀಲನೆ ನಡೆಸಿದ್ದರು. ವಾಸ್ತವ ಸ್ಥಿತಿ ಅರಿತಿದ್ದ ಅವರು, ದೂರು ದಾಖಲಿಸಿಕೊಂಡಿರಲಿಲ್ಲ. ಈಗ ಖಾಸಗಿ ಮೊಕದ್ದಮೆಯಲ್ಲಿ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ’ ಎಂದು ಹೇಳಿದರು.</p><p>‘ಸತ್ಯಕ್ಕೆ ಎಂದಿಗೂ ಜಯ ಸಿಗಲಿದೆ. ಈ ದೂರಿನಲ್ಲಿರುವ ಆರೋಪಗಳು ಎಲ್ಲವೂ ಸುಳ್ಳು. ಪೊಲೀಸರು ತನಿಖೆ ಮಾಡುತ್ತಾರೆ. ಅವರಿಗೆ ಎಲ್ಲ ಸಹಕಾರ ನೀಡುತ್ತೇನೆ. ತನಿಖೆಯಿಂದಲೇ ಎಲ್ಲವೂ ತಿಳಿಯಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಹಾನಗಲ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಈ ಪ್ರಕರಣ ದಾಖಲಾಗಿದ್ದು, ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸುತ್ತೇನೆ’ ಎಂದು ಶಿಗ್ಗಾವಿ ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ ತಿಳಿಸಿದರು.</p><p>ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಅವರು, ‘ಇದು 2017ರಲ್ಲಿ ನಡೆದ ಪ್ರಕರಣ. ನಾನು ಆಗ ಶಾಸಕನಾಗಿರಲಿಲ್ಲ. ಈಗ ಶಾಸಕನಾಗಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ಇದರ ಹಿಂದೆ ರಾಜಕೀಯ ದುರದ್ದೇಶ ಇದ್ದರೂ ಇರಬಹುದು’ ಎಂದರು.</p><p>‘2017ರಲ್ಲಿ ಜಮೀನು ಖರೀದಿಸಿ ಕೃಷಿಯೇತರ (ಎನ್ಎ) ಪ್ರದೇಶವೆಂದು ಅನುಮತಿ ಪಡೆಯಲಾಗಿತ್ತು. ನಂತರ, ಕೆಜಿಪಿ ಪಡೆಯಲು ಅನುಮತಿ ಕೋರಲಾಗಿತ್ತು. ಅವಾಗಲೇ, ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆಯೂ ತೆರವಾಗಿತ್ತು. ನಂತರ, ಅಧಿಕಾರಿಗಳು ಸರ್ವೇ ಮಾಡಿ ಹದಬಸ್ತು ಮಾಡಿದ್ದರು. 2ರಿಂದ 3 ಅಡಿಯಷ್ಟು ಮಾತ್ರ ವ್ಯತ್ಯಾಸವಿತ್ತು. ಈ ಘಟನೆ ನಂತರ ಪೊಲೀಸರೂ ಸ್ಥಳ ಪರಿಶೀಲನೆ ನಡೆಸಿದ್ದರು. ವಾಸ್ತವ ಸ್ಥಿತಿ ಅರಿತಿದ್ದ ಅವರು, ದೂರು ದಾಖಲಿಸಿಕೊಂಡಿರಲಿಲ್ಲ. ಈಗ ಖಾಸಗಿ ಮೊಕದ್ದಮೆಯಲ್ಲಿ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ’ ಎಂದು ಹೇಳಿದರು.</p><p>‘ಸತ್ಯಕ್ಕೆ ಎಂದಿಗೂ ಜಯ ಸಿಗಲಿದೆ. ಈ ದೂರಿನಲ್ಲಿರುವ ಆರೋಪಗಳು ಎಲ್ಲವೂ ಸುಳ್ಳು. ಪೊಲೀಸರು ತನಿಖೆ ಮಾಡುತ್ತಾರೆ. ಅವರಿಗೆ ಎಲ್ಲ ಸಹಕಾರ ನೀಡುತ್ತೇನೆ. ತನಿಖೆಯಿಂದಲೇ ಎಲ್ಲವೂ ತಿಳಿಯಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>