<p><strong>ಶಿಗ್ಗಾವಿ</strong>: ತಾಲ್ಲೂಕಿನ ಕೋಣನಕೇರಿ ಗ್ರಾಮದ ಗೌರಿ ಕಟ್ಟೆಕೆರೆ ಹತ್ತಿರದ ಅರಣ್ಯ ಪ್ರದೇಶದಲ್ಲಿ ಮೃತ ಗಂಡು ಚಿರತೆ ಕಳೇಬರವನ್ನು ಪಶುವೈದ್ಯರು, ಅರಣ್ಯ ಅಧಿಕಾರಿಗಳು ಶನಿವಾರ ಪರಿಶೀಲಿಸಿದರು.</p>.<p>ತಾಲ್ಲೂಕಿನ ದುಂಡಸಿ ಪ್ರಾದೇಶಿಕ ವಲಯದ ಅರಣ್ಯ ಪ್ರದೇಶದ ಮಾರ್ಗದಲ್ಲಿ ಹೋಗಿರುವ ಹಾನಗಲ್-ಹುಬ್ಬಳ್ಳಿ ರಸ್ತೆಯಲ್ಲಿ ಸುಮಾರು ಮೂರು ವರ್ಷದ ಗಂಡು ಚಿರತೆ ಅಪಘಾತಕ್ಕೆ ಬಲಿಯಾಗಿರಬಹುದು ಎಂಬ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದರು. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.</p>.<p>ದೇಹದ ಯಾವುದೇ ಭಾಗದಲ್ಲಿ ಗಾಯವಿಲ್ಲದ ಕಾರಣ ಸಣ್ಣ ವಯಸ್ಸಿನ ಚಿರತೆ ತಲೆಭಾಗಕ್ಕೆ ಪೆಟ್ಟು ಬಿದ್ದು ಮೃತಪಟ್ಟಿದೆ. ಹೀಗಾಗಿ ಅಪಘಾತವಾಗಿರಬಹುದು ಎಂದು ಶಂಕಿಸಲಾಗಿದೆ.</p>.<p>ಹಾವೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀತ್ ಶೇಖ್, ಹಾನಗಲ್ಲ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ಪೂಜಾರಿ, , ದುಂಡಸಿ ವಲಯ ಅರಣ್ಯ ಅಧಿಕಾರಿ ಕೆ.ಮಲ್ಲಪ್ಪ, ತಾಲ್ಲೂಕು ಪಶುವೈದ್ಯಾಧಿಕಾರಿ ರಾಜೇಂದ್ರ ಅರಳೇಶ್ವರ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು. ಈ ಕುರಿತು ವನ್ಯಜೀವಿ ಪ್ರಕರಣದಡಿ ಪ್ರಕರಣ ದಾಖಲಿಸಲಾಗಿದೆ. </p>.<div><blockquote>ವಾಹನ ಸವಾರರು ವೇಗವಾಗಿ ಸಂಚಿರಿಸುತ್ತಿದ್ದಾರೆ. ಇದರಿಂದ ರಾತ್ರಿ ಹೊತ್ತಿನಲ್ಲಿ ಕಾಡು ಪ್ರಾಣಿಗಳು ಅಪಘಾತಕ್ಕೆ ಬಲಿಯಾಗುತ್ತಿವೆ. ವಾಹನ ಸವಾರರು ವೇಗದ ಮೀತಿ ಕಡಿಮೆ ಮಾಡಿಕೊಂಡು ಸಂಚರಿಸಬೇಕು</blockquote><span class="attribution">ಕೆ.ಮಲ್ಲಪ್ಪ ದುಂಡಸಿ ವಲಯ ಅರಣ್ಯ ಅಧಿಕಾರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ತಾಲ್ಲೂಕಿನ ಕೋಣನಕೇರಿ ಗ್ರಾಮದ ಗೌರಿ ಕಟ್ಟೆಕೆರೆ ಹತ್ತಿರದ ಅರಣ್ಯ ಪ್ರದೇಶದಲ್ಲಿ ಮೃತ ಗಂಡು ಚಿರತೆ ಕಳೇಬರವನ್ನು ಪಶುವೈದ್ಯರು, ಅರಣ್ಯ ಅಧಿಕಾರಿಗಳು ಶನಿವಾರ ಪರಿಶೀಲಿಸಿದರು.</p>.<p>ತಾಲ್ಲೂಕಿನ ದುಂಡಸಿ ಪ್ರಾದೇಶಿಕ ವಲಯದ ಅರಣ್ಯ ಪ್ರದೇಶದ ಮಾರ್ಗದಲ್ಲಿ ಹೋಗಿರುವ ಹಾನಗಲ್-ಹುಬ್ಬಳ್ಳಿ ರಸ್ತೆಯಲ್ಲಿ ಸುಮಾರು ಮೂರು ವರ್ಷದ ಗಂಡು ಚಿರತೆ ಅಪಘಾತಕ್ಕೆ ಬಲಿಯಾಗಿರಬಹುದು ಎಂಬ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದರು. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.</p>.<p>ದೇಹದ ಯಾವುದೇ ಭಾಗದಲ್ಲಿ ಗಾಯವಿಲ್ಲದ ಕಾರಣ ಸಣ್ಣ ವಯಸ್ಸಿನ ಚಿರತೆ ತಲೆಭಾಗಕ್ಕೆ ಪೆಟ್ಟು ಬಿದ್ದು ಮೃತಪಟ್ಟಿದೆ. ಹೀಗಾಗಿ ಅಪಘಾತವಾಗಿರಬಹುದು ಎಂದು ಶಂಕಿಸಲಾಗಿದೆ.</p>.<p>ಹಾವೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀತ್ ಶೇಖ್, ಹಾನಗಲ್ಲ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ಪೂಜಾರಿ, , ದುಂಡಸಿ ವಲಯ ಅರಣ್ಯ ಅಧಿಕಾರಿ ಕೆ.ಮಲ್ಲಪ್ಪ, ತಾಲ್ಲೂಕು ಪಶುವೈದ್ಯಾಧಿಕಾರಿ ರಾಜೇಂದ್ರ ಅರಳೇಶ್ವರ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು. ಈ ಕುರಿತು ವನ್ಯಜೀವಿ ಪ್ರಕರಣದಡಿ ಪ್ರಕರಣ ದಾಖಲಿಸಲಾಗಿದೆ. </p>.<div><blockquote>ವಾಹನ ಸವಾರರು ವೇಗವಾಗಿ ಸಂಚಿರಿಸುತ್ತಿದ್ದಾರೆ. ಇದರಿಂದ ರಾತ್ರಿ ಹೊತ್ತಿನಲ್ಲಿ ಕಾಡು ಪ್ರಾಣಿಗಳು ಅಪಘಾತಕ್ಕೆ ಬಲಿಯಾಗುತ್ತಿವೆ. ವಾಹನ ಸವಾರರು ವೇಗದ ಮೀತಿ ಕಡಿಮೆ ಮಾಡಿಕೊಂಡು ಸಂಚರಿಸಬೇಕು</blockquote><span class="attribution">ಕೆ.ಮಲ್ಲಪ್ಪ ದುಂಡಸಿ ವಲಯ ಅರಣ್ಯ ಅಧಿಕಾರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>