ವೈ.ಎಚ್.ಕುಡುಪಲಿ ಅವರ ಜಮೀನಿನಲ್ಲಿ ಕೆಲಸ ಮಾಡುವಾಗ ಅರಣ್ಯ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಕ್ಷಣ ಹೊತ್ತು ನಿಂತು ಮತ್ತೆ ಅರಣ್ಯಕ್ಕೆ ವಾಪಸ್ ತೆರಳಿದೆ. ಇದನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿಲಾಗಿದ್ದು, ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ಹರಡುತ್ತಿದ್ದಂತೆ ರೈತರು ಕೃಷಿ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಮನೆಗೆ ತೆರಳಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.