ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಕುಟುಂಬ ರಾಜಕಾರಣ ಕೊನೆಯಾಗಲಿ; ಗ್ರಾಮ ಪಂಚಾಯ್ತಿ ಸದಸ್ಯ ಮಲ್ಲಿಕಾರ್ಜುನ

Last Updated 1 ಅಕ್ಟೋಬರ್ 2021, 11:23 IST
ಅಕ್ಷರ ಗಾತ್ರ

ಹಾವೇರಿ: ಕುಟುಂಬ ರಾಜಕಾರಣ ಮಾಡಬಾರದು ಎಂಬುದು ಬಿಜೆಪಿ ಪಕ್ಷದ ನಿಲುವು. ಹೀಗಾಗಿ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಮನ್ನಣೆ ನೀಡದೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಕೃಷ್ಣ ಆರ್.ಈಳಗೇರ ಅವರಿಗೆ ಟಿಕೆಟ್‌ ನೀಡಬೇಕು ಎಂದು ಶ್ಯಾಡಗುಪ್ಪಿ ಗ್ರಾಮ ಪಂಚಾಯ್ತಿ ಸದಸ್ಯ ಮಲ್ಲಿಕಾರ್ಜುನ ಬಾಳೂರು ಒತ್ತಾಯಿಸಿದರು.

ಸಿ.ಎಂ.ಉದಾಸಿ ಅವರನ್ನು ಗೆಲ್ಲಿಸಲು ಕೃಷ್ಣ ಈಳಗೇರ ಪ್ರಮುಖ ಪಾತ್ರ ವಹಿಸಿದ್ದಾರೆ. 25 ವರ್ಷಗಳಿಂದ ಕ್ಷೇತ್ರದಲ್ಲಿ ಪಕ್ಷದ ಅಭಿವೃದ್ಧಿಗಾಗಿ ಸಂಘಟನೆ ಮಾಡಿದ್ದಾರೆ. ಪ್ರಸ್ತುತ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ ಮತದಾರರು ಮತ್ತು ಪಕ್ಷದ ಕಾರ್ಯಕರ್ತರು ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಛಿಸಿದ್ದಾರೆ. ಈ ಬಾರಿ ಪಕ್ಷವು ಹೊಸ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಗದೀಶ, ಲಕ್ಷ್ಮಣ ತೋಟದ, ಬಸವರಾಜು ಹಿರೇಮಠ, ಶ್ರೀಕಾಂತ ಸಾವಕ್ಕನವರ, ನಾಗರಾಜ ಹಾದಿಮನಿ, ಶಿವಯೋಗಿ ಬಾಳೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT