<p><strong>ಹಾವೇರಿ: </strong>ಪಾದಯಾತ್ರೆಗೆ ಭವ್ಯ ಇತಿಹಾಸವಿದೆ. ಪಾದಯಾತ್ರೆಗಳು ದೇಶದಲ್ಲಿ ಬಹುದೊಡ್ಡ ಕ್ರಾಂತಿಯನ್ನು ಉಂಟು ಮಾಡಿದ ಇತಿಹಾಸಗಳು ನಮ್ಮ ಕಣ್ಣಮುಂದೆ ಇವೆ.ಪರಿಸರ ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಅಗಡಿಯ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಹಮ್ಮಿಕೊಂಡಿರುವ ‘ಪರಿಸರ ಜಾಗೃತಿ ಪಾದಯಾತ್ರೆ’ಯು ಹಸಿರುಕ್ರಾಂತಿಗೆ ನಾಂದಿ ಹಾಡಲಿ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.</p>.<p>ನಗರದ ವಡ್ಡಮ್ಮ ದೇವಿ ದೇವಸ್ಥಾನದ ಬಳಿ ಸೋಮವಾರ ಪರಿಸರ ಜಾತ್ರೆ-2022ರ ಅಂಗವಾಗಿ 31 ವಾರ್ಡ್ಗಳಲ್ಲಿ ಸಂಚರಿಸುವ ‘ಪರಿಸರ ಜಾಗೃತಿ ಪಾದಯಾತ್ರೆ’ಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸ್ವಾತಂತ್ರ್ಯ ಚಳವಳಿಯಲ್ಲಿ ಮಹಾತ್ಮ ಗಾಂಧಿ ಕೈಗೊಂಡ ಪಾದಯಾತ್ರೆ, ಆಚಾರ್ಯ ವಿನೋಭಾ ಬಾವೆ ಅವರ ಭೂದಾನಕ್ಕೆ ಕೈಗೊಂಡ ಪಾದಯಾತ್ರೆ, ಹೀಗೆ ಆಯಾ ಕಾಲಘಟ್ಟದಲ್ಲಿ ನಡೆದ ಪಾದಯಾತ್ರೆಗಳು ಹೊಸ ಬದಲಾವಣೆಗೆ ನಾಂದಿಹಾಡಿವೆ ಎಂದರು.</p>.<p>ದಿನದಿಂದ ದಿನಕ್ಕೆ ನಿಸರ್ಗದ ಪರಿಸರದ ಜೊತೆಗೆ ನಮ್ಮ ಸಾಮಾಜಿಕ ಪರಿಸರವು ಸಹ ಅಪಾಯಕರಿ ಹಂತಕ್ಕೆ ಹೋಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಪರಿಸರದ ಜೊತೆಗೆ ಸಾಮಾಜಿಕ ಪರಿಸರದ ಸ್ವಾಸ್ಥ್ಯವನ್ನು ಕಾಪಾಡಬೇಕಾದ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದು ಅಭಿಪ್ರಾಯ ಪಟ್ಟರು.</p>.<p>ಶಾಸಕ ನೆಹರು ಓಲೇಕಾರ ಮಾತನಾಡಿ, ಪರಿಸರದ ಉಳಿವಿಗಾಗಿ ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಹಮ್ಮಿಕೊಂಡಿರುವ ಪರಿಸರ ಜಾತ್ರೆ ಉಪಯುಕ್ತ ಕಾರ್ಯವಾಗಿದ್ದು, ಪರಿಸರವನ್ನು ಕಾಪಾಡಲು ನಗರದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.</p>.<p>ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಡಾ.ಸಂಜಯ ಡಾಂಗೆ ಆಗಮಿಸಿದ್ದರು. ಕಾರ್ಯಕ್ರಮದ ನೇತೃತ್ವವನ್ನು ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ವಹಿಸಿದ್ದರು. ಕೃಷ್ಣ ಜವಳಿ ನಿರೂಪಿಸಿ, ಸ್ವಾಗತಿಸಿದರು. ಪಾದಯಾತ್ರೆಯು ವಿವಿಧ ವಾರ್ಡ್ಗಳಲ್ಲಿ ಸಂಚರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಪಾದಯಾತ್ರೆಗೆ ಭವ್ಯ ಇತಿಹಾಸವಿದೆ. ಪಾದಯಾತ್ರೆಗಳು ದೇಶದಲ್ಲಿ ಬಹುದೊಡ್ಡ ಕ್ರಾಂತಿಯನ್ನು ಉಂಟು ಮಾಡಿದ ಇತಿಹಾಸಗಳು ನಮ್ಮ ಕಣ್ಣಮುಂದೆ ಇವೆ.ಪರಿಸರ ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಅಗಡಿಯ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಹಮ್ಮಿಕೊಂಡಿರುವ ‘ಪರಿಸರ ಜಾಗೃತಿ ಪಾದಯಾತ್ರೆ’ಯು ಹಸಿರುಕ್ರಾಂತಿಗೆ ನಾಂದಿ ಹಾಡಲಿ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.</p>.<p>ನಗರದ ವಡ್ಡಮ್ಮ ದೇವಿ ದೇವಸ್ಥಾನದ ಬಳಿ ಸೋಮವಾರ ಪರಿಸರ ಜಾತ್ರೆ-2022ರ ಅಂಗವಾಗಿ 31 ವಾರ್ಡ್ಗಳಲ್ಲಿ ಸಂಚರಿಸುವ ‘ಪರಿಸರ ಜಾಗೃತಿ ಪಾದಯಾತ್ರೆ’ಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸ್ವಾತಂತ್ರ್ಯ ಚಳವಳಿಯಲ್ಲಿ ಮಹಾತ್ಮ ಗಾಂಧಿ ಕೈಗೊಂಡ ಪಾದಯಾತ್ರೆ, ಆಚಾರ್ಯ ವಿನೋಭಾ ಬಾವೆ ಅವರ ಭೂದಾನಕ್ಕೆ ಕೈಗೊಂಡ ಪಾದಯಾತ್ರೆ, ಹೀಗೆ ಆಯಾ ಕಾಲಘಟ್ಟದಲ್ಲಿ ನಡೆದ ಪಾದಯಾತ್ರೆಗಳು ಹೊಸ ಬದಲಾವಣೆಗೆ ನಾಂದಿಹಾಡಿವೆ ಎಂದರು.</p>.<p>ದಿನದಿಂದ ದಿನಕ್ಕೆ ನಿಸರ್ಗದ ಪರಿಸರದ ಜೊತೆಗೆ ನಮ್ಮ ಸಾಮಾಜಿಕ ಪರಿಸರವು ಸಹ ಅಪಾಯಕರಿ ಹಂತಕ್ಕೆ ಹೋಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಪರಿಸರದ ಜೊತೆಗೆ ಸಾಮಾಜಿಕ ಪರಿಸರದ ಸ್ವಾಸ್ಥ್ಯವನ್ನು ಕಾಪಾಡಬೇಕಾದ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದು ಅಭಿಪ್ರಾಯ ಪಟ್ಟರು.</p>.<p>ಶಾಸಕ ನೆಹರು ಓಲೇಕಾರ ಮಾತನಾಡಿ, ಪರಿಸರದ ಉಳಿವಿಗಾಗಿ ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಹಮ್ಮಿಕೊಂಡಿರುವ ಪರಿಸರ ಜಾತ್ರೆ ಉಪಯುಕ್ತ ಕಾರ್ಯವಾಗಿದ್ದು, ಪರಿಸರವನ್ನು ಕಾಪಾಡಲು ನಗರದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.</p>.<p>ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಡಾ.ಸಂಜಯ ಡಾಂಗೆ ಆಗಮಿಸಿದ್ದರು. ಕಾರ್ಯಕ್ರಮದ ನೇತೃತ್ವವನ್ನು ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ವಹಿಸಿದ್ದರು. ಕೃಷ್ಣ ಜವಳಿ ನಿರೂಪಿಸಿ, ಸ್ವಾಗತಿಸಿದರು. ಪಾದಯಾತ್ರೆಯು ವಿವಿಧ ವಾರ್ಡ್ಗಳಲ್ಲಿ ಸಂಚರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>