ಕೇಂದ್ರ ಸರ್ಕಾರ ಘೋಷಿಸಿದ ₹2 ಸಾವಿರ ಇನ್ನೂ ತನಕ ಬ್ಯಾಂಕ್ ಖಾತೆ ಸೇರಿಲ್ಲ. ಇದರಿಂದಾಗಿ ಆಶಾಗಳ ಬದುಕು ಬೀದಿಗೆ ಬಂದಿದೆ. ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡಿದ ಆಶಾಗಳಿಗೆ ಸರಿಯಾಗಿ ಸುರಕ್ಷತಾ ಉಪಕರಣಗಳು ಸಿಗದ ಕಾರಣ ಜಿಲ್ಲೆಯಲ್ಲಿ 17 ಆಶಾ ಕಾರ್ಯಕರ್ತರಿಗೆ ಕರೋನಾ ಸೋಂಕು ತಗುಲಿದೆ ಎಂದು ನೋವು ತೋಡಿಕೊಂಡರು. ಸರ್ಕಾರ ಬೇಡಿಕೆಗಳನ್ನು ಈಡೇರಿಸುವವರೆಗೂ ರಾಜಿ ರಹಿತ ಹೋರಾಟ ಮುಂದುವರಿಯಲಿದೆ ಎಂದು ಆಶಾ ಕಾರ್ಯಕರ್ತೆಯರು ಹೇಳಿದರು.