<p><strong>ಹಾವೇರಿ</strong>: ‘ಸಮಾಜವನ್ನು ಸಮೃದ್ಧಯುತವಾಗಿ ಕಟ್ಟುವ ನಿಟ್ಟಿನಲ್ಲಿ ತ್ಯಾಗ ಮತ್ತು ಔದಾರ್ಯಗಳ ಮೂಲಕ ದಾನದ ಸೇವೆ ಮಾಡಿ, ಅಮರರಾಗುಳಿದವರು ತ್ಯಾಗವೀರ ಶಿರಸಂಗಿ ಲಿಂಗರಾಜರು’ ಎಂದು ವಾಣಿಜ್ಯ ಅಧ್ಯಾಪಕ ಡಾ.ಗುರುಪಾದಯ್ಯ ಸಾಲಿಮಠ ಹೇಳಿದರು.</p>.<p>ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ತ್ಯಾಗವೀರ ಶಿರಸಂಗಿ ಲಿಂಗರಾಜರ 160ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮಾಜಮುಖಿಯಾಗಿ ತಮ್ಮ ಸರ್ವಸ್ವವನ್ನೂ ವಿನಿಯೋಗ ಮಾಡಿದ ಲಿಂಗರಾಜರು ಕೃಷಿ, ಸಹಕಾರ, ಶಿಕ್ಷಣ, ಆಧ್ಯಾತ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಿಗೆ ತಮ್ಮದೇ ಆದಂತಹ ಸೇವೆ ನೀಡಿರುವುದು ಅವಿಸ್ಮರಣೀಯ ಸಂಗತಿ. ನಿರಂತರವಾಗಿ ಸಮಾಜದೊಟ್ಟಿಗೆ ಬಂಧುತ್ವವನ್ನು ಸಾಧಿಸಿ ಪ್ರಮುಖರೊಟ್ಟಿಗೆ ಶ್ರಮಕಾರ್ಯಗಳನ್ನು ಹೆಗಲು ನೀಡಿ ಮಾಡಿರುವುದು ಸ್ಫೂರ್ತಿದಾಯಕವಾಗಿದೆ’ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಎಂ.ಎಸ್. ಯರಗೊಪ್ಪ ವಹಿಸಿದ್ದರು. ಪ್ರಾಚಾರ್ಯ ಪ್ರೊ.ಜೆ. ಆರ್. ಸಿಂಧೆ ಉಪಸ್ಥಿತರಿದ್ದರು. ಪ್ರೊ. ದೀಪಾ ಸಂಗಮ ಪ್ರಾರ್ಥಿಸಿದರು. ಕಾಲೇಜು ಒಕ್ಕೂಟದ ಕಾರ್ಯಾಧ್ಯಕ್ಷ ಪ್ರೊ.ಡಿ.ಎ. ಕೊಲ್ಲಾಪುರೆ ಸ್ವಾಗತಿಸಿ, ನಿರೂಪಿಸಿದರು. ಡಾ.ಬಿ.ಎನ್. ವಾಸುದೇವ ನಾಯ್ಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಸಮಾಜವನ್ನು ಸಮೃದ್ಧಯುತವಾಗಿ ಕಟ್ಟುವ ನಿಟ್ಟಿನಲ್ಲಿ ತ್ಯಾಗ ಮತ್ತು ಔದಾರ್ಯಗಳ ಮೂಲಕ ದಾನದ ಸೇವೆ ಮಾಡಿ, ಅಮರರಾಗುಳಿದವರು ತ್ಯಾಗವೀರ ಶಿರಸಂಗಿ ಲಿಂಗರಾಜರು’ ಎಂದು ವಾಣಿಜ್ಯ ಅಧ್ಯಾಪಕ ಡಾ.ಗುರುಪಾದಯ್ಯ ಸಾಲಿಮಠ ಹೇಳಿದರು.</p>.<p>ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ತ್ಯಾಗವೀರ ಶಿರಸಂಗಿ ಲಿಂಗರಾಜರ 160ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮಾಜಮುಖಿಯಾಗಿ ತಮ್ಮ ಸರ್ವಸ್ವವನ್ನೂ ವಿನಿಯೋಗ ಮಾಡಿದ ಲಿಂಗರಾಜರು ಕೃಷಿ, ಸಹಕಾರ, ಶಿಕ್ಷಣ, ಆಧ್ಯಾತ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಿಗೆ ತಮ್ಮದೇ ಆದಂತಹ ಸೇವೆ ನೀಡಿರುವುದು ಅವಿಸ್ಮರಣೀಯ ಸಂಗತಿ. ನಿರಂತರವಾಗಿ ಸಮಾಜದೊಟ್ಟಿಗೆ ಬಂಧುತ್ವವನ್ನು ಸಾಧಿಸಿ ಪ್ರಮುಖರೊಟ್ಟಿಗೆ ಶ್ರಮಕಾರ್ಯಗಳನ್ನು ಹೆಗಲು ನೀಡಿ ಮಾಡಿರುವುದು ಸ್ಫೂರ್ತಿದಾಯಕವಾಗಿದೆ’ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಎಂ.ಎಸ್. ಯರಗೊಪ್ಪ ವಹಿಸಿದ್ದರು. ಪ್ರಾಚಾರ್ಯ ಪ್ರೊ.ಜೆ. ಆರ್. ಸಿಂಧೆ ಉಪಸ್ಥಿತರಿದ್ದರು. ಪ್ರೊ. ದೀಪಾ ಸಂಗಮ ಪ್ರಾರ್ಥಿಸಿದರು. ಕಾಲೇಜು ಒಕ್ಕೂಟದ ಕಾರ್ಯಾಧ್ಯಕ್ಷ ಪ್ರೊ.ಡಿ.ಎ. ಕೊಲ್ಲಾಪುರೆ ಸ್ವಾಗತಿಸಿ, ನಿರೂಪಿಸಿದರು. ಡಾ.ಬಿ.ಎನ್. ವಾಸುದೇವ ನಾಯ್ಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>