<p><strong>ಹಾನಗಲ್</strong>: ತಾಲ್ಲೂಕು ಮಟ್ಟದ ಲಿಂಗಾಯತ ಪಂಚಮಸಾಲಿ ಸಮಾಜದ ಸಮಾವೇಶವನ್ನು ತಾಲ್ಲೂಕಿನ ನೀರಲಗಿ ಗ್ರಾಮದ ಬಸವೇಶ್ವರ ಭವನದಲ್ಲಿ ಆಗಸ್ಟ್ 16 ರಂದು ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.</p>.<p>ಸಮಾಜದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮಾಜಿ ಸೈನಿಕರು, ಪ್ರಗತಿಪರ ರೈತರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.</p>.<p>ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಮಹದೇವಪ್ಪ ಬಾಗಸರ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ<br> ಹೆಬ್ಬಾಳಕರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಜಯಾನಂದ ಕಾಶಪ್ಪನವರ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ಕರ್ನಾಟಕ ನಗರ ನೀರು<br> ಸರಬರಾಜು, ಒಳ ಚರಂಡಿ ಮಂಡಳಿ ಅಧ್ಯಕ್ಷ ವಿನಯ ಕುಲಕರ್ಣಿ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಮಾಜದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಕೋತಂಬರಿ, ಕಾರ್ಯದರ್ಶಿ ಮಧು ಪಾಣಿಗಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಅಖಂಡ ಭಾರತ ಸಂಕಲ್ಪ ದಿನ ಆಚರಣೆ</strong></p>.<p>ಹಾನಗಲ್: ಹಾನಗಲ್ನ ಹಿಂದೂ ಜಾಗರಣಾ ವೇದಿಕೆ ಆಗಸ್ಟ್ 13 ರಂದು ಅಖಂಡ ಭಾರತ ಸಂಕಲ್ಪ ದಿನ ಆಚರಿಸುತ್ತಿದ್ದು, ವಾಗ್ಮಿ ಹಾರಿಕಾ ಮಂಜುನಾಥ ಪಾಲ್ಗೊಳ್ಳುವರು.</p>.<p>ಮಂಗಳವಾರ ಸಂಜೆ 7 ಗಂಟೆಗೆ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಗಣಪತಿ ದೇವಸ್ಥಾನದಿಂದ ಪಂಜಿನ ಮೆರವಣಿಗೆ ಆರಂಭವಾಗಿ ಕಮಾಟಗೇರಿ, ಪಾದಗಟ್ಟಿ, ಸಾಲಗೇರಿ, ಸೋಮವಾರ<br> ಪೇಟೆ, ಚೌಡಿ ಕತ್ರಿ ಮೂಲಕ ಶಂಕರಮಠ ತಲುಪುವುದು. ನಂತರ ಇಲ್ಲಿನ ಶಂಕರ ಮಠದ ಆವರಣದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಬಿ.ಶಿವಬಸವ ವಹಿಸುವರು ಎಂದು<br> ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್</strong>: ತಾಲ್ಲೂಕು ಮಟ್ಟದ ಲಿಂಗಾಯತ ಪಂಚಮಸಾಲಿ ಸಮಾಜದ ಸಮಾವೇಶವನ್ನು ತಾಲ್ಲೂಕಿನ ನೀರಲಗಿ ಗ್ರಾಮದ ಬಸವೇಶ್ವರ ಭವನದಲ್ಲಿ ಆಗಸ್ಟ್ 16 ರಂದು ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.</p>.<p>ಸಮಾಜದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮಾಜಿ ಸೈನಿಕರು, ಪ್ರಗತಿಪರ ರೈತರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.</p>.<p>ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಮಹದೇವಪ್ಪ ಬಾಗಸರ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ<br> ಹೆಬ್ಬಾಳಕರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಜಯಾನಂದ ಕಾಶಪ್ಪನವರ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ಕರ್ನಾಟಕ ನಗರ ನೀರು<br> ಸರಬರಾಜು, ಒಳ ಚರಂಡಿ ಮಂಡಳಿ ಅಧ್ಯಕ್ಷ ವಿನಯ ಕುಲಕರ್ಣಿ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಮಾಜದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಕೋತಂಬರಿ, ಕಾರ್ಯದರ್ಶಿ ಮಧು ಪಾಣಿಗಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಅಖಂಡ ಭಾರತ ಸಂಕಲ್ಪ ದಿನ ಆಚರಣೆ</strong></p>.<p>ಹಾನಗಲ್: ಹಾನಗಲ್ನ ಹಿಂದೂ ಜಾಗರಣಾ ವೇದಿಕೆ ಆಗಸ್ಟ್ 13 ರಂದು ಅಖಂಡ ಭಾರತ ಸಂಕಲ್ಪ ದಿನ ಆಚರಿಸುತ್ತಿದ್ದು, ವಾಗ್ಮಿ ಹಾರಿಕಾ ಮಂಜುನಾಥ ಪಾಲ್ಗೊಳ್ಳುವರು.</p>.<p>ಮಂಗಳವಾರ ಸಂಜೆ 7 ಗಂಟೆಗೆ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಗಣಪತಿ ದೇವಸ್ಥಾನದಿಂದ ಪಂಜಿನ ಮೆರವಣಿಗೆ ಆರಂಭವಾಗಿ ಕಮಾಟಗೇರಿ, ಪಾದಗಟ್ಟಿ, ಸಾಲಗೇರಿ, ಸೋಮವಾರ<br> ಪೇಟೆ, ಚೌಡಿ ಕತ್ರಿ ಮೂಲಕ ಶಂಕರಮಠ ತಲುಪುವುದು. ನಂತರ ಇಲ್ಲಿನ ಶಂಕರ ಮಠದ ಆವರಣದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಬಿ.ಶಿವಬಸವ ವಹಿಸುವರು ಎಂದು<br> ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>